Breaking News

ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತದಿಂದ ದೇಶ ಬಲಿಷ್ಠಗೊಳ್ಳುವದರೊಂದಿಗೆ ಜಗತ್ತಿನಲ್ಲೇ ಮಹತ್ವದ ಸ್ಥಾನ ಪಡೆಯುತ್ತಿದೆ- ರಮೇಶ ಜಾರಕಿಹೊಳಿ.!

Spread the love

ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತದಿಂದ ದೇಶ ಬಲಿಷ್ಠಗೊಳ್ಳುವದರೊಂದಿಗೆ ಜಗತ್ತಿನಲ್ಲೇ ಮಹತ್ವದ ಸ್ಥಾನ ಪಡೆಯುತ್ತಿದೆ- ರಮೇಶ ಜಾರಕಿಹೊಳಿ.!


ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತ, ಜನಪರ ಯೋಜನೆಗಳಿಂದ ದೇಶ ಬಲಿಷ್ಠಗೊಳ್ಳುವದರೊಂದಿಗೆ ಜಗತ್ತಿನಲ್ಲೇ ಮಹತ್ವದ ಸ್ಥಾನ ಪಡೆಯುತ್ತಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳದಿAದ ಹಮ್ಮಿಕೊಂಡ ಪ್ರತಿ ತಿಂಗಳ ಕೊನೆಯ ರವಿವಾರದಂದು ನಡೆಯುವ ಪ್ರಧಾನಿ ಮೋದಿಯವರ ಮನ್ ಕೀ ಬಾತ್ ವಿಕ್ಷಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಪ್ರಧಾನಿ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದ ಮೂಲಕ ದೇಶದ ಜನತೆಗೆ ಆರ್ಥಿಕವಾಗಿ ಸದೃಢರಾಗಲು ಸರಕಾರ ನೀಡುವ ಸವಲತ್ತುಗಳ ಬಗ್ಗೆ ತಿಳಿಸುತ್ತ ಕೃಷಿ, ಕಾರ್ಮಿಕರ ಮತ್ತು ಕುಶಲಕರ್ಮಿಯರಿಗೆ ಹೆಚ್ಚಿನ ಉತ್ತೇಜನ ನೀಡಿ ದೇಶದ ಆರ್ಥಿಕತೆಯನ್ನು ಬಲಿಷ್ಠಗೊಳಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.
ದೇಶಕ್ಕೆ ಉತ್ತಮ ಆಡಳಿತ ನೀಡುತ್ತಿರುವ ಪ್ರಧಾನಿಯವರ ಜನಪರ ಯೋಜನೆಗಳನ್ನು ಕಾರ್ಯಕರ್ತರು ಜನರ ಮನೆ ಮನೆಗೆ ತಲುಪಿಸಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆಯುವದರೊಂದಿಗೆ ಮೋದಿಯವರ ಕೈಯನ್ನು ಬಲಪಡಿಸಲು ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಜಯಾನಂದ ಹುಣಚ್ಯಾಳ, ಓಬಿಸಿ ಮೋರ್ಚಾ ರಾಷ್ಟಿçÃಯ ಕರ‍್ಯಕಾರಿಣಿ ಸದಸ್ಯ ಲಕ್ಷö್ಮಣ ತಪಸಿ, ಮುಖಂಡರುಗಳಾದ ಟಿ ಆರ್ ಕಾಗಲ, ಪ್ರಮೋದ ಜೋಶಿ, ಎಮ್ ಎಲ್ ತೋಳಿನವರ, ಕಾಂತು ಎತ್ತಿನಮನಿ, ಸುರೇಶ ಸನದಿ, ಕೆಂಪಣ್ಣ ಮೈಲನ್ನವರ, ಬಸವರಾಜ ಹಿರೇಮಠ, ಜ್ಯೋತಿ ಕೋಲ್ಹಾರ, ಅಬ್ಬಾಸ ದೇಸಾಯಿ, ಬಸವರಾಜ ಆರೇನ್ನವರ, ಶ್ರೀಶೈಲ ಯಕ್ಕುಂಡಿ, ಪ್ರಕಾಶ ಮುರಾರಿ, ಅಶೋಕ ಗೋಣಿ, ಬಾಬು ಮುಳಗುಂದ, ಶಿವಪ್ಪ ಗುಡ್ಡಾಕಾಯು, ಭೀಮಶಿ ಕೊಳವಿ, ಹನಮಂತ ಕಾಳಮ್ಮನಗುಡಿ, ಶಿವು ಖನಗಾಂವಿ, ಸುರೇಶ ಪತ್ತಾರ, ಕಿರಣ ಡಮಾಮಗರ, ವಿರೇಂದ್ರ ಎಕ್ಕೇರಿಮಠ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಅಭ್ಯರ್ಥಿ ಜಗದೀಶ ಶೆಟ್ಟರ ಅನುಭವಿ ನ್ಯಾಯವಾದಿಗಳಾಗಿದ್ದು ಅವರಿಗೆ ನಮ್ಮೆಲ್ಲರ ಬೆಂಬಲ-ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ.!

Spread the loveಅಭ್ಯರ್ಥಿ ಜಗದೀಶ ಶೆಟ್ಟರ ಅನುಭವಿ ನ್ಯಾಯವಾದಿಗಳಾಗಿದ್ದು ಅವರಿಗೆ ನಮ್ಮೆಲ್ಲರ ಬೆಂಬಲ-ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ.! ಗೋಕಾಕ: ಬೆಳಗಾವಿ …

Leave a Reply

Your email address will not be published. Required fields are marked *

3 × one =