Breaking News

ಗೋಕಾಕ ಜೈಲಿನಲ್ಲಿ ವಿಚಾರಣಾಧೀನ ಖೈದಿ ನೇಣಿಗೆ ಶರಣು.!

Spread the love

ಗೋಕಾಕ ಉಪಕರಾಗೃಹದಲ್ಲಿ ವಿಚಾರಣಾಧೀನ ಖೈದಿ ನೇಣಿಗೆ ಶರಣು.!

 

 

ಯುವ ಭಾರತ ಸುದ್ದಿ  ಗೋಕಾಕ:  ನಗರದ ಉಪಕರಾಗೃಹದಲ್ಲಿ ವಿಚಾರಣಾಧೀನ ಖೈದಿಯೋರ್ವ ಬುಧವಾರದಂದು ಸಂಜೆ ನೇಣಿಗೆ ಶರಣಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನೇಣಿಗೆ ಶರಣಾಗಿರುವ ವಿಚಾರಣಾಧೀನ ಖೈಧಿ ಮೋದಿನಅಲಿ ಗೊಟೆ 24 ಎಂದು ಗುರುತಿಸಲಾಗಿದ್ದು, ಈತ ಕೊಲೆ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ, ಕಳೆದ ಬುಧವಾರದಂದು ಸಂಜೆ ಉಪಕಾರಾಗೃಹದ ಸೇಲ್‌ನ ಹೊರಭಾಗದಲ್ಲಿರುವ ಕಟ್ಟಿಗೆಯ ಜಂತಿಗೆ ಬೇಡಸೀಟನಿಂದ ನೇಣು ಬೀಗಿದುಕೊಂಡಿದ್ದಾನೆ.
ವಿಚಾರಣಾಧೀನ ಖೈದಿ ಮೋದಿನಅಲಿ ಗೊಟೆ ಮೂಲತಃ ಅಥಣಿ ತಾಲೂಕಿನ ತೆಲಸಂಗ ಗ್ರಾಮದವನಾಗಿದ್ದು, ಕಳೆದ 15 ದಿನಗಳ ಹಿಂದಷ್ಟೇ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಗೋಕಾಕ ಉಪ ಕಾರಾಗೃಹಕ್ಕೆ ಮೃತ ವಿಚಾರಣಾಧೀನ ಖೈದಿಯನ್ನು ಕರೆತರಲಾಗಿದೆ. ಈ ಕುರಿತು ಗೋಕಾಕ ಶಹರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

two × 5 =