Breaking News

ರಮೇಶ ಜಾರಕಿಹೊಳಿ ಅವರಿಗೆ ಕನಸಗೇರಿ ಗ್ರಾಮಸ್ಥರು ಸನ್ಮಾನ!!

Spread the love

ರಮೇಶ ಜಾರಕಿಹೊಳಿ ಅವರಿಗೆ ಕನಸಗೇರಿ ಗ್ರಾಮಸ್ಥರು ಸನ್ಮಾನ!!

ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಮತಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿದ ಹಿನ್ನಲೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಕನಸಗೇರಿ ಗ್ರಾಮಸ್ಥರು ಸನ್ಮಾನಿಸಿದರು.
ಸೋಮವಾರದಂದು ಶಾಸಕರ ಗೃಹಕಚೇರಿಯಲ್ಲಿ ತಾಲೂಕಿನ ಕನಸಗೇರಿ ಗ್ರಾಮಸ್ಥರು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ, ಗ್ರಾಮಸ್ಥರ ಒತ್ತಾಸೆಯಂತೆ ಹಿರಿಯ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ ಪ್ರೌಢ ಶಾಲೆಯನ್ನಾಗಿ ಮಂಜೂರು ಮಾಡಲು ಸರ್ಕಾರಕ್ಕೆ ಮನವಿ ಸಲ್ಲಿಸಿ, ತಮ್ಮ ಮನವಿಯ ಮೇರೆಗೆ ಸರಕಾರ ಕನಸಗೇರಿ ಗ್ರಾಮಕ್ಕೆ ಹೊಸ ಪ್ರೌಢ ಶಾಲೆ ಉನ್ನತೀಕರಣಗೊಂಡಿದೆ ಎಂದ ಗ್ರಾಮಸ್ಥರು ಶಾಸಕರ ಶೈಕ್ಷಣಿಕ ಕಾಳಜಿಗೆ ಕೃತಜ್ಞತೆ ಸಲ್ಲಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಟಿ ಆರ್ ಕಾಗಲ, ಎಮ್ ಎಲ್ ತೋಳಿನವರ, ಶಾಸಕರ ಸಹಾಯಕರಾದ ಭೀಮಗೌಡ ಪೋಲಿಸಗೌಡರ, ಕಾಂತು ಎತ್ತಿನಮನಿ, ಸುರೇಶ ಸನದಿ ಸೇರಿದಂತೆ ಕನಸಗೇರಿ ಗ್ರಾಮಸ್ಥರು ಇದ್ದರು.


Spread the love

About Yuva Bharatha

Check Also

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.!

Spread the loveಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.! ಗೋಕಾಕ: ಅಧಿಕಾರಿಗಳು ನದಿ ತೀರದ …

Leave a Reply

Your email address will not be published. Required fields are marked *

three × 1 =