Breaking News

 “ಪುಟ್ಟ ಹಣತೆ”

Spread the love

   “ಪುಟ್ಟ ಹಣತೆ”

     ಡಾ||ಶ್ರೀದೇವಿ ಆನಂದ ಪೂಜಾರಿ.

ನಾಡು ನುಡಿಯ ಸೇವೆಯನ್ನು ಹರುಷದಿಂದ ಮಾಡುವಾಸೆ!
ನಾಡ ಗುಡಿಯ ಹಣತೆಯಾಗಿ ಪ್ರೀತಿಯಿಂದ ಬೆಳಗುವಾಸೆ!
!ನಿಷ್ಠೆ, ತಾಳ್ಮೆ, ಪರಿಶ್ರಮವ ಒಗ್ಗೂಡಿಸಿ ತೈಲವೆರೆದು
ಚೈತನ್ಯದ ಬತ್ತಿಗೆ ಕೈಂಕರ್ಯದ ಕಿಡಿಯ ಮುಡಿಸಿ
ದೈವತ್ವದ ಬೆಳಕ ಬೀರಿ ಅಜ್ಞಾನವ ಕಳೆಯುವಾಸೆ
ನಾಡಗುಡಿಯ ಹಣತೆಯಾಗಿ ಸಂತಸದಿ ಬೆಳಗುವಾಸೆ!
!ಬಿರುಗಾಳಿಗೆ ಹೊಯ್ದಾಡಿ ಅತ್ತಿತ್ತ ತೊನೆದಾಡಿ
ಅಸ್ತಿತ್ವವ ಅಳಿಯದೇ ನಸುನಗುತ್ತ ಬೆಳಕು ಸೂಸಿ
ನಾಡದೇವಿ ಪಾದ ಕುಸುಮ ಅಚ್ಚಳಿಯದೇ ತೋರುವಾಸೆ!
ನಾಡ ಗುಡಿಯ ಹಣತೆಯಾಗಿ ಪ್ರೀತಿಯಿಂದ ಬೆಳಗುವಾಸೆ!
!ಪುಟ್ಟ ಹಣತೆ ದಿಟ್ಟಿಸದೇ ಸುಟ್ಟುಕೊಂಡಿರಿ ಜೋಕೆ
ದಳ್ಳುರಿಯಾಗಿ ನಿಮ್ಮನಿಲ್ಲಗೊಳಿಸಬಹುದು ಹಾಕಿ ರಣಕೇಕೆ
ಭುವನೇಶ್ವರಿಯ ಪೂಜೆಯಲ್ಲಿ ಬೆಳಗುತಿರುವ ದೀವಿಗೆ
ಬೆಳಗುವೆ ನಾ ನಿರಂತರ ಬೆಳಕ ಚೆಲ್ಲುವೆ ನಾ ನಿರಂತರ!

Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

13 − 13 =