Breaking News

ವಿರೋಧಿಗಳ ಮಾತಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತನೀಡಿ-ಲಖನ್ ಜಾರಕಿಹೊಳಿ.!

Spread the love

ವಿರೋಧಿಗಳ ಮಾತಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತನೀಡಿ-ಲಖನ್ ಜಾರಕಿಹೊಳಿ.!


ಗೋಕಾಕ: ಕಾಂಗ್ರೇಸ್‌ನವರು ನೀಡುತ್ತಿರುವ ಗ್ಯಾರಂಟಿ ಕಾರ್ಡಗಳಿಗೆ ನೊ ವರ‍್ಯೇಂಟಿ-ಗ್ಯಾರAಟಿ. ಅದು ಚೈನಾ ಮಾಲ್ ಇದ್ದಂಗೆ ಹೀಗಾಗಿ ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು.
ಅವರು, ಶುಕ್ರವಾರದಂದು ಸಂಜೆ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರ ನಗರದ ನಾಕಾ ನಂ-೧, ಶಿವನಗರ, ಸತೀಶನಗರ, ಶ್ರೀನಗರ, ಶ್ರೀ ಲಕ್ಷಿö್ಮÃದೇವಿ ಪಾದಗಟ್ಟಿ ಸೇರಿದಂತೆ ವಿವಿಧ ವಾರ್ಡಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದರು.
ಕಾಂಗ್ರೇಸ್ ಪಕ್ಷ ಸುಳ್ಳು ಭರವಸೆಗಳನ್ನು ನೀಡಿದೆ. ಬಿಜೆಪಿ ಸರಕಾರದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಚುನಾವಣೆ ಸಮೀಪಿಸುತ್ತಿದ್ದಂತೆ ವಿರೋದಿಗಳು ಬರುತ್ತಾರೆ. ಚುನಾವಣೆ ನಂತರ ನಿಮಗೆ ಯಾರು ಕಾಣಸೀಗುವದಿಲ್ಲ. ಈ ಮೊದಲಿನಿಂದಲೂ ನಮ್ಮ ಕುಟುಂಬದ ಮೇಲೆ ಅಪಪ್ರಚಾರ ಮಾಡುತ್ತ ಬಂದಿದ್ದಾರೆ ಎಂದು ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಶಾಸಕ ರಮೇಶ ಜಾರಕಿಹೊಳಿ ಅವರನ್ನು ಕಳೆದ ಆರು ಬಾರಿಗೆ ಆಶೀರ್ವಧಿಸಿದ್ದೀರಿ. ನಿಮ್ಮ ಆಶೀರ್ವಾಧದಿಂದ ಅವರು ರಾಜ್ಯಮಟ್ಟದ ನಾಯಕರಾಗಿ ಬೆಳೆದಿದ್ದಾರೆ. ಗೋಕಾಕ ಮತಕ್ಷೇತ್ರದ ಜನರು ಅಣ್ಣ-ತಮ್ಮಂದಿರAತೆ ಸಹಬಾಳ್ವೆ ನಡೆಸಿದ್ದೇವೆ. ವಿರೋಧಿಗಳ ಮಾತಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರನ್ನು ಅತ್ಯಧಿಕ ಮತಗಳ ಅಂತರದಲ್ಲಿ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯುವಧುರೀಣ ಅಮರನಾಥ ಜಾರಕಿಹೊಳಿ, ನಗರಸಭೆ ಸದಸ್ಯರು, ವಾರ್ಡಗಳ ಪ್ರಮುಖರು, ಹಿರಿಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಗೋಕಾಕ; ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು …

Leave a Reply

Your email address will not be published. Required fields are marked *

one × one =