Breaking News

ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.!

Spread the love

ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.!


ಗೋಕಾಕ: ಅರಭಾವಿಯ ಶ್ರೀ ದುರದುಂಡೇಶ್ವರ ಪುಣ್ಯಾರಣ್ಯ ಸಿದ್ದಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ರವಿವಾರದಂದು ರಾತ್ರಿ ಶ್ರೀ ಮಠದಲ್ಲಿ ತೀವ್ರ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಲಿಂಗೈಕ್ಯರಾಗಿದ್ದು ಅವರ ಅಗಲಿಕೆ ವೀರಶೈವ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ.
ಉತ್ತರ ಕರ್ನಾಟಕ ಭಾಗದ ವೀರಶೈವ ಸಮಾಜದ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಶಕ್ತಿ ಕೇಂದ್ರವಾಗಿ ನೂರಾರು ವರ್ಷಗಳಿಂದ ಶ್ರೀಮಠ ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದೆ. ಲಕ್ಷಾಂತರ ಭಕ್ತರು ಶೋಕಸಾಗರದಲ್ಲಿದ್ದು ಅವರೆಲ್ಲರಿಗೂ ದುಃಖ ಬರಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ. ಪರಮ ಪೂಜ್ಯರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಅವರಿಗೆ ಭಾವಪೂರ್ಣ ಶೃದಾಂಜಲಿ. ಸದಾ ಸಮಾಜದ ಒಳಿತಿಗಾಗಿ ದುಡಿಯುತ್ತಿದ್ದ ಶ್ರೀಗಳು ಸತ್ಪುರುಷರು. ಅವರ ಅಗಲಿಕೆಯಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹದಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಪೂಜ್ಯರ ಅಗಲಿಕೆಗೆ ಭಕ್ತಿ ಪೂರ್ವಕ ನಮನಗಳನ್ನು ಅರ್ಪಿಸಿದ್ದಾರೆ.


Spread the love

About Yuva Bharatha

Check Also

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.!

Spread the loveಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.! ಗೋಕಾಕ: ಅಧಿಕಾರಿಗಳು ನದಿ ತೀರದ …

Leave a Reply

Your email address will not be published. Required fields are marked *

2 × four =