Breaking News

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರಸ್ತೆ ಕಾಮಗಾರಿಗಳಿಗೆ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ.!

Spread the love

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರಸ್ತೆ ಕಾಮಗಾರಿಗಳಿಗೆ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ.!


ಗೋಕಾಕ: ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರಸ್ತೆ ಕಾಮಗಾರಿಗಳಿಗೆ ಶನಿವಾರದಂದು ಯುವ ನಾಯಕ ಅಮರನಾಥ ಜಾರಕಿಹೊಳಿ ಚಾಲನೆ ನೀಡಿದರು.
ನಗರದ ಬಸವೇಶ್ವರ ವೃತ್ತದಿಂದ ಹಿಲ್ ಗಾರ್ಡನ (ಅರಣ್ಯ ಇಲಾಖೆಯ ಸಸ್ಯೋಧ್ಯಾನದ)ವರೆಗೆ ೯೫ ಲಕ್ಷ ರೂ ಗಳ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಗಟ್ಟಿಬಸಣ್ಣ ಗುಡಿಯಿಂದ ಯೋಗ್ಯಿಕೊಳ್ಳ ಗುಡಿವರೆಗೆ ೨.೯೫ ಕೋಟಿ ವೆಚ್ಚದಲ್ಲಿ ರಸ್ತೆ ದುರಸ್ಥಿಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರುಗಳಾದ ಟಿ.ಆರ್.ಕಾಗಲ್, ಮಡ್ಡೆಪ್ಪ ತೋಳಿನವರ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೊಲೀಸ್‌ಗೌಡರ, ನಗರಸಭೆ ಮಾಜಿ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಮಾಜಿ ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರಸಭೆ ಸದಸ್ಯರುಗಳಾದ ಜ್ಯೋತಿಭಾ ಸುಭಂಜಿ, ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತಿçಗೊಲ್ಲರ, ಶಿವಾನಂದ ಹತ್ತಿ, ಕುತ್ಬುದ್ದಿನ ಗೋಕಾಕ, ಅಬ್ದುಲವಹಾಬ ಜಮಾದಾರ, ವಿಜಯ ಜತ್ತಿ, ಹರೀಶ ಬೂದಿಹಾಳ, ಅಬ್ದುಲಸತ್ತಾರ ಶಭಾಶಖಾನ ಮುಖಂಡರುಗಳಾದ ಶಿವು ಪಾಟೀಲ್, ಅಶೋಕ ಗೋಣಿ, ಲಕ್ಕಪ್ಪ ತಹಶೀಲದಾರ, ಶ್ರೀರಂಗ ನಾಯ್ಕ, ಗುತ್ತಿಗೆದಾರರಾದ ರಾಜು ದರಗಶೆಟ್ಟಿ, ಬಿ.ಬಿ.ದಾಸನವರ, ಲೋಕೋಪಯೋಗಿ ಇಲಾಖೆಯ ಎಇಇ ಅನಿಲಕುಮಾರ ಶಿಂಗೆ ಹಾಗೂ ನಗರಸಭೆ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಮಿನಿ ಗೂಡ್ಸ್ ಮಾಲಕರ ಮತ್ತು ಚಾಲಕರ ಸಂಘದ ವತಿಯಿಂದ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.!

Spread the loveಮಿನಿ ಗೂಡ್ಸ್ ಮಾಲಕರ ಮತ್ತು ಚಾಲಕರ ಸಂಘದ ವತಿಯಿಂದ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.! ಗೋಕಾಕ: …

Leave a Reply

Your email address will not be published. Required fields are marked *

two × 3 =