ಅಭ್ಯರ್ಥಿ ಜಗದೀಶ ಶೆಟ್ಟರ ಅನುಭವಿ ನ್ಯಾಯವಾದಿಗಳಾಗಿದ್ದು ಅವರಿಗೆ ನಮ್ಮೆಲ್ಲರ ಬೆಂಬಲ-ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ.!
ಗೋಕಾಕ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರು ನ್ಯಾಯವಾದಿಗಳಾಗಿದ್ದು ರಾಜಕೀಯವಾಗಿ ಸಾಕಷ್ಟು ಅನುಭವ ಹೊಂದಿದ್ದಾರೆ. ಅವರಿಗೆ ನಮ್ಮೆಲ್ಲರ ಬೆಂಬಲ ನೀಡುವದಾಗಿ ಇಲ್ಲಿಯ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ ಕೋಟಗಿ ಹೇಳಿದರು.
ಅವರು, ನಗರದ ನ್ಯಾಯವಾದಿಗಳ ಸಂಘದ ಕಾರ್ಯಾಲಯಕ್ಕೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಮತಯಾಚಣೆಗೆ ಆಗಮಿಸಿದ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತ, ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೋಮ್ಮೆ ಪ್ರಧಾನಿಯನ್ನಾಗಿ ಮಾಡಲು ಜಗದೀಶ ಶೆಟ್ಟರಗೆ ನಮ್ಮೆಲ್ಲರ ಬೆಂಬಲ ನೀಡುವದಾಗಿ ತಿಳಿಸಿದರು.
ಶಾಸಕ ರಮೇಶ ಜಾರಕಿಹೊಳಿ ಅವರು ಮಾತನಾಡಿ, ಕಳಂಕ ರಹಿತ ಆಡಳಿತ ನೀಡಿದ ಮೋದಿಯವರ ಅವಶ್ಯಕತೆ ದೇಶಕ್ಕೆ ಇದೆ. ಅವರೇ ಗ್ಯಾರಂಟಿಯಾಗಿದ್ದಾರೆ. ದೇಶದ ಹಿತದೃಷ್ಟಿಯಿಂದ ಮತ್ತೊಮ್ಮೆ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಅನುಭವಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಬೆಂಬಲಿಸುವAತೆ ಕೋರಿದರು.
ವಿಧಾನ ಪರಿಷತ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಕಾಂಗ್ರೇಸ್ ಅಭ್ಯರ್ಥಿ ಸೋಲುವ ಹತಾಶೆಯಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಜಗದೀಶ ಶೆಟ್ಟರ ಅವರು ಒಬ್ಬ ವಕೀಲರಾಗಿ, ಮುಖ್ಯಮಂತ್ರಿಯಾಗಿ, ವಿರೋಧಪಕ್ಷದ ನಾಯಕರಾಗಿ, ಸಚಿವರಾಗಿ, ಎರಡು ಬಾರಿ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದವರು ಅವರಿಗಿದ್ದ ಅನುಭವ ವಿರೋಧ ಪಕ್ಷದ ಅಭ್ಯರ್ಥಿಗೆ ಇಲ್ಲ. ಅಭ್ಯರ್ಥಿಗಳ ತುಲನೆ ಮಾಡಿ ತಾವು ಬೆಂಬಲ ನೀಡಿ ಇತರರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವAತೆ ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ನ್ಯಾಯವಾದಿಗಳ ಸಂಘದ ಸದಸ್ಯರಲ್ಲಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರುಗಳಾದ ಎಮ್ ಎಲ್ ಮುತ್ತೇನ್ನವರ, ಶಹಜಹಾನ ಡೊಂಗರಗಾAವ, ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ ಸೇರಿದಂತೆ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಹಾಗೂ ನ್ಯಾಯವಾದಿಗಳು ಇದ್ದರು.