Breaking News

ಎಲ್ಲರೊಡನೆ ಎಲ್ಲರ ಶ್ರೇಯೋಭಿವೃದ್ಧಿ ಬಯುಸುವ ಪ್ರಧಾನಿ ನರೇಂದ್ರ ಮೋದಿ-ರಮೇಶ ಜಾರಕಿಹೊಳಿ.!

Spread the love

ಎಲ್ಲರೊಡನೆ ಎಲ್ಲರ ಶ್ರೇಯೋಭಿವೃದ್ಧಿ ಬಯುಸುವ ಪ್ರಧಾನಿ ನರೇಂದ್ರ ಮೋದಿ-ರಮೇಶ ಜಾರಕಿಹೊಳಿ.!


ಗೋಕಾಕ: ಕಾಂಗ್ರೆಸ್ ಪಕ್ಷ ಎಸ್‌ಸಿ ಮತ್ತು ಎಸ್‌ಟಿ ಸಮುದಾಯವನ್ನು ತಮ್ಮ ವೋಟ್ ಬ್ಯಾಂಕಗಾಗಿ ಬಳಸಿಕೊಂಡಿದ್ದಾರೆ. ಕಾಂಗ್ರೇಸ್ ಪಕ್ಷದಿಂದ ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗಿಲ್ಲ. ಎಲ್ಲರನ್ನೂ ಒಗ್ಗೂಡಿಸಿ ಕರೆದುಕೊಂಡು ಹೋಗುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸುವ0ತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಅವರು, ಸೋಮವಾರದಂದು ರಾತ್ರಿ ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ನಡೆದ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರ ಪ್ರಚಾರಾರ್ಥ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮುಸ್ಲಿಂ ಸಮುದಾಯದವರು ಸಹ ಭಾರತೀಯರೇ. ಕಾಂಗ್ರೇಸ್ ಪಕ್ಷದ ಸುಳ್ಳು ಭರವಸೆಗಳಿಗೆ ಕಿವಿಗೊಡದೆ ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಬಾರಿ ಮುಸ್ಲಿಂ ಸಮುದಾಯ ಬೆಂಬಲಿಸಿ ಪ್ರಧಾನಿಯವರ ಕೈ ಬಲಪಡಿಸಬೇಕು. ಎಲ್ಲರೊಡನೆ ಎಲ್ಲರ ಶ್ರೇಯೋಭಿವೃದ್ಧಿ ಬಯುಸುವ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿಸಲು ನಾವೆಲ್ಲರೂ ಶ್ರಮಿಸೋಣ ಎಂದರು.

ಕಾಂಗ್ರೇಸ್ ಪಕ್ಷ ನೀಡುತ್ತಿರುವ ಗ್ಯಾರಂಟಿಗಳು ಚುನಾವಣೆಯ ಗೀಮಿಕ್. ಚುನಾವಣೆಯ ನಂತರ ಎಲ್ಲವನ್ನೂ ಸ್ಥಗಿತಗೊಳಿಸಲಿದ್ದಾರೆ. ಗ್ಯಾರಂಟಿಗಳನ್ನು ಮುಂದುವರಿಸಿದ್ದಲ್ಲಿ ರಾಜ್ಯದ ಆರ್ಥಿಕತೆಗೆ ಹೊಡೆತ ಬಿಳುತ್ತದೆ. ಕಾಂಗ್ರೇಸ್ ನೀಡಿರುವ ಬಿಟ್ಟಿ ಭಾಗ್ಯಗಳು ಮುಂದುವರೆದಲ್ಲಿ ಪಾಕಿಸ್ತಾನ, ಶ್ರೀಲಂಕಾ ದೇಶಗಳಂತೆ ಅರಾಜಕತೆ ಸೃಷ್ಟಿಯಾಗುತ್ತದೆ. ದೇಶದ ಭದ್ರತೆ, ಅಭಿವೃದ್ಧಿಯ ಚುನಾವಣೆ ಇದಾಗಿದ್ದು ಹಗಲಿರುಳು ದೇಶಕ್ಕಾಗಿ ದುಡಿಯುತ್ತಿರುವ ಉಕ್ಕಿನ ಮನುಷ್ಯ ಮೋದಿಯವರನ್ನು ಬೆಂಬಲಿಸೋಣ ಅವರು ಪ್ರಧಾನಿ ಆಗುವದು ನಿಶ್ಚಿತ ಅದರೊಂದಿಗೆ ಜಗದೀಶ ಶೆಟ್ಟರ ಅವರು ಮಂತ್ರಿಯಾಗುವದರೊAದಿಗೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಬೆಳಗಾವಿ ಜಿಲ್ಲೆಗೆ ಬಿಜೆಪಿ ಪಕ್ಷ ಅನೇಕ ಕೊಡುಗೆಗಳನ್ನು ನೀಡಿದೆ. ಕಳೆದ ಬಿಜೆಪಿ ಸರಕಾರದಲ್ಲಿ ತಾಲೂಕಿನ ಶಿವಾಪೂರ ಗ್ರಾಮದಲ್ಲಿ ಇಂಡಸ್ಟಿçÃಸ್ ಪಾರ್ಕ ಸ್ಥಾಪಿಸಲು ಸರ್ವೇ ಮಾಡಿಸಲಾಗಿತ್ತು, ಕಾಂಗ್ರೇಸ್ ಅಧಿಕಾರಕ್ಕೆ ಬಂದಿದ್ದರಿAದ ಆ ಯೋಜನೆ ಸ್ಥಗಿತಗೊಂಡಿದೆ. ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅನುಭವಿ ರಾಜಕಾರಣಿ ಅವರ ಮೂಲಕ ಬರುವ ದಿನಗಳಲ್ಲಿ ಕೈಗಾರಿಕೆ, ನೀರಾವರಿ, ಆಧುನಿಕ ತಂತ್ರಜ್ಞಾನದ ಕೃಷಿ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವದರೊಂದಿಗೆ ಜಿಲ್ಲೆ ಅಭಿವೃದ್ಧಿಯಾಗುತ್ತದೆ. ಜಗದೀಶ ಶೆಟ್ಟರ ಅವರು ನನ್ನ ಮಿತ್ರರಾಗಿದ್ದು ಅವರಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಆಶೀರ್ವಧಿಸುವಂತೆ ಪ್ರಧಾನಿ ಮೋದಿಯವರೇ ಹೇಳಿದ್ದು, ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು.

ಅಭ್ಯರ್ಥಿ ಜಗದೀಶ ಶೆಟ್ಟರ ಮಾತನಾಡುತ್ತ, ನರೇಂದ್ರ ಮೋದಿಯವರು ದೇಶದ ಆಸ್ತಿಯಾಗಿದ್ದು ಅವರಂತ ಪ್ರಧಾನಿ ಸೀಗಲು ಸಾಧ್ಯವಿಲ್ಲ. ತಮ್ಮ ದಕ್ಷ ಆಡಳಿತದಿಂದ ದೇಶ ವಿದೇಶಗಳಲ್ಲಿ ಜನಪ್ರೀಯರಾಗಿದ್ದಾರೆ. ಜಗತ್ತಿನ ಯುದ್ಧಕಾಲದಲ್ಲಿ ಭಾರತೀಯರನ್ನು ಸುರಕ್ಷಿತವಾಗಿ ಕರೆ ತಂದಿದ್ದಾರೆ. ಇಂತಹ ಪ್ರಧಾನಿಯವರ ಅವಶ್ಯಕತೆ ದೇಶಕ್ಕೆ ಇದ್ದು ಅವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿಸಲು ಬಿಜೆಪಿ ಪಕ್ಷದ ಚಿಹ್ನೆ ಕಮಲಕ್ಕೆ ಮತ ನೀಡುವಂತೆ ಮನವಿ ಮಾಡಿದರು.

ವೇದಿಕೆಯ ಮೇಲೆ ಬೆಳಗಾವಿ ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಸುಭಾಸ ಪಾಟೀಲ, ಮಾಜಿ ಶಾಸಕ ಎಮ್ ಎಲ್ ಮುತ್ತೇನ್ನವರ, ಕೆಎಲ್‌ಇ ನಿರ್ದೇಶಕ ಜಯಾನಂದ ಮುನವಳ್ಳಿ, ಪ್ರಭಾ ಶುರ‍್ಸ ಅಧ್ಯಕ್ಷ ಅಶೋಕ ಪಾಟೀಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಚಿಕ್ಕರೇವಣ್ಣ, ಕೆ ವಿ ಪಾಟೀಲ ಇದ್ದರು.

ನ್ಯಾಯವಾದಿ ಎಲ್ ಎಚ್ ಭಂಡಿ ಸ್ವಾಗತಿಸಿ, ವಂದಿಸಿದರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

16 + 5 =