Breaking News

ಗೋಕಾಕ ಬಿಜೆಪಿಯಿಂದ ಜಗದೀಶ ಶೆಟ್ಟರ ಮತ್ತು ರಮೇಶ ಜಾರಕಿಹೊಳಿ ಅವರಿಗೆ ದಿ.20ರಂದು ಅಭಿನಂಧನಾ ಸಮಾರಂಭ.!

Spread the love

ಗೋಕಾಕ ಬಿಜೆಪಿಯಿಂದ ಜಗದೀಶ ಶೆಟ್ಟರ ಮತ್ತು ರಮೇಶ ಜಾರಕಿಹೊಳಿ ಅವರಿಗೆ ದಿ.20ರಂದು ಅಭಿನಂಧನಾ ಸಮಾರಂಭ.!


ಗೋಕಾಕ: ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ದಿ.20 ರಂದು ನೂತನ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಮತ್ತು ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಅಭಿನಂಧನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ದಿ.20 ಗುರುವಾರದಂದು ನಗರದ ಶಾಸಕರ ಗೃಹ ಕಚೇರಿಯ ಮುಂಭಾಗ ನಡೆಯಲಿರುವ ಅಭಿನಂಧನಾ ಸಮಾರಂಭವು ಬೆಳಿಗ್ಗೆ ೧೦ ಗಂಟೆಗೆ ಜರುಗಲಿದ್ದು, ಬೆಳಗಾವಿ ನೂತನ ಸಂದಸರಾಗಿ ಮೊದಲ ಬಾರಿಗೆ ಗೋಕಾಕ ನಗರಕ್ಕೆ ಜಗದೀಶ ಶೆಟ್ಟರ ಆಗಮಿಸಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ನೀಡಿದ ಗೋಕಾಕ ಮತಕ್ಷೇತ್ರದ ಜನತೆಯನ್ನು ಉದ್ಧೇಶಿಸಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಮತ್ತು ಶಾಸಕ ರಮೇಶ ಜಾರಕಿಹೊಳಿ ಮಾತನಾಡಲಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಗೋಕಾಕ ಮತಕ್ಷೇತ್ರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭ ಯಶಸ್ವಿಗೊಳಿಸಬೇಕು ಎಂದು ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.!

Spread the loveಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.! ಗೋಕಾಕ: ಮಕ್ಕಳ ವ್ಯಕ್ತಿತ್ವ …

Leave a Reply

Your email address will not be published. Required fields are marked *

18 − 15 =