Breaking News

ಮಾಲದಿನ್ನಿ ನೂತನ ಗ್ರಾಪಂ ಕಟ್ಟಡ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹಾಗೂ ಅಮರನಾಥ ಜಾರಕಿಹೊಳಿ.!

Spread the love

ಮಾಲದಿನ್ನಿ ನೂತನ ಗ್ರಾಪಂ ಕಟ್ಟಡ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹಾಗೂ ಅಮರನಾಥ ಜಾರಕಿಹೊಳಿ.!


ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಕಳೆದ ೨೫ವರ್ಷಗಳಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತ ಬಂದಿದ್ದಾರೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಅವರು, ತಾಲೂಕಿನ ಮಾಲದಿನ್ನಿ ಗ್ರಾಮದ ಗ್ರಾಮ ಪಂಚಾಯತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಹತ್ತು ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶಾಸಕರು ಜಾರಿಗೆ ತಂದು ಗೋಕಾಕ ಮತಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ ಎಂದರು.


ಅಂದಾಜು 45.10. ಲಕ್ಷ ರೂ ವೆಚ್ಚದಲ್ಲಿ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಿರ್ಮಿಸಲಾದ ನೂತನ ಮಾಲದಿನ್ನಿ ಗ್ರಾಮ ಪಂಚಾಯತ ಕಚೇರಿ ಕಟ್ಟಡವನ್ನು ಗಣ್ಯರಿಂದ ಉದ್ಘಾಟಿಸಲಾಯಿತು.
ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ವೀರಭದ್ರ ಗುಂಡಿ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ವಿವರಿಸಿದರು.
ದಿವ್ಯ ಸಾನಿಧ್ಯ ವಹಿಸಿದ್ದ ಉಪ್ಪಾರಹಟ್ಟಿ ಶ್ರೀ ಸಿದ್ಧಾರೂಢ ಮಠದ ನಾಗೇಶ್ವರ ಮಹಾಸ್ವಾಮಿಗಳು, ಅಡವಿಸಿದ್ದೇಶ್ವರ ಸ್ವಾಮಿಗಳು ಆಶೀರ್ವಚನ ನೀಡಿದರು.
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವನಾಯಕ ಅಮರನಾಥ ಜಾರಕಿಹೊಳಿ ಅವರನ್ನು ಗ್ರಾಮ ಪಂಚಾಯತನಿAದ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಯುವ ನಾಯಕ ಅಮರನಾಥ ಜಾರಕಿಹೊಳಿ. ಅಧ್ಯಕ್ಷೆ ಲಕ್ಷ್ಮೀ ಕಿಚಡಿ, ಉಪಾಧ್ಯಕ್ಷ ಲಕ್ಕಪ್ಪ ಭಂಡಿ, ಮಾಜಿ ಜಿಪಂ ಸದಸ್ಯರುಗಳಾದ ಟಿ ಆರ್ ಕಾಗಲ, ಎಮ್ ಎಲ್ ತೋಳಿನವರ, ಬಿಇಓ ಜಿ ಬಿ ಬಳಗಾರ, ಲೋಕೋಪಯೋಗಿ ಇಲಾಖೆ ಅಧಿಕಾರಿ  ಶಿಂಧೆ, ಬಿಸಿಯೂಟ ಯೋಜನಾಧಿಕಾರಿ ಎಮ್ ಬಿ ಮಲಬನ್ನವರ, ಅಭಿಯಂತರ ಶಿವಲಿಂಗ, ಮುಖಂಡರಾದ ಹನಮಂತ ದುರ್ಗನ್ನವರ, ಯಲ್ಲಪ್ಪ ನಂದಿ, ರಮೇಶ ಭಂಡಿ, ರಂಗಪ್ಪ ನಂದಿ, ಹನಮಂತ ಖಿಚಡಿ, ಸೇರಿದಂತೆ ಗ್ರಾಪಂ ಸದಸ್ಯರು, ಮಾಲದಿನ್ನಿ, ಉಪ್ಪಾರಹಟ್ಟಿ ಗ್ರಾಮದ ಹಿರಿಯರು ಅನೇಕರು ಇದ್ದರು.


Spread the love

About Yuva Bharatha

Check Also

ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.!

Spread the loveಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.! ಗೋಕಾಕ: ಮಕ್ಕಳ ವ್ಯಕ್ತಿತ್ವ …

Leave a Reply

Your email address will not be published. Required fields are marked *

four × 1 =