Breaking News

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭೀಮಶಂಕರ ಬಿಸನಾಳಗೆ 2 ಪದಕ

Spread the love

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭೀಮಶಂಕರ ಬಿಸನಾಳಗೆ 2 ಪದಕ

ಯುವ ಭಾರತ ಸುದ್ದಿ ದೇವರಹಿಪ್ಪರಗಿ :        ನ್ಯಾಷನಲ್ ಸ್ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾ ಅಂಡರ್-19,ಜ.7 ಮಧ್ಯಪ್ರದೇಶದಲ್ಲಿ ಜರುಗಿದ ಓಪನ್ ನ್ಯಾಷನಲ್ ಚಾಂಪಿಯನ್ ಶಿಪ್-2023ನಲ್ಲಿ ರಾಷ್ಟ್ರಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ಳಿ ಹಾಗೂ 3000 ಮೀಟರ್ ಓಟದಲ್ಲಿ ಬಂಗಾರದ ಪದಕ ಗೆಲ್ಲುವ ಮೂಲಕ ರಾಜ್ಯ ಹಾಗೂ ಜಿಲ್ಲೆಗೆ ಹೆಸರು ತಂದಿದ್ದಾರೆ.

ತಾಲೂಕಿನ ಪಡಗಾನೂರ ಗ್ರಾಮದ ಖ್ಯಾತ ಹಾಡ್ಕಿ ಮಾಸ್ಟರ ಗುರುನಾಥ್ ಮುರಡಿ ಅವರ ಅಳೆಯನಾದ ಭೀಮಾಶಂಕರ ಕಾಶಿನಾಥ ಬಿಸನಾಳ ಗ್ರಾಮದಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿ ವಿಜಯಪುರದ ವಿ.ಬಿ. ದರ್ಬಾರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು ರಾಷ್ಟ್ರಮಟ್ಟದಲ್ಲಿ ಸ್ಪರ್ಧೆ ಮಾಡಿ ಎರಡು ಪದಕ ಗಳಿಸಿದ್ದಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.
ಕಾಲೇಜಿನ ಪ್ರಾಚಾರ್ಯ ದಾದಾಸಾಹೇಬ ಬಾಬಾಯತ, ತರಬೇತಿದಾರ ಚಂದ್ರಕಾಂತ ತಾರನಾಳ, ಗುರುನಾಥ ಮುರಡಿ ಹಾಗೂ ಗ್ರಾಮಸ್ಥರು ಕಾಲೇಜಿನ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

3 − two =