Breaking News

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ -ಶಶಿಕಾಂತ ನಾಯಿಕ!

Spread the love

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ -ಶಶಿಕಾಂತ ನಾಯಿಕ!

 

ಯುವ ಭಾರತ ಸುದ್ದಿ ಗೋಕಾಕ : ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕರೆ ನೀಡಿದರು.
ಇಲ್ಲಿಯ ಅರಭಾವಿ ಮಂಡಲ ಬಿಜೆಪಿ ವತಿಯಿಂದ ಸೋಮವಾರದಂದು ಜರುಗಿದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹಲವಾರು ಪ್ರಗತಿಪರ ಕಾರ್ಯಗಳನ್ನು ಮತದಾರರಿಗೆ ವಿವರಣೆ ಮಾಡುವಂತೆ ತಿಳಿಸಿದರು.

 


ಅರಭಾವಿ ಮಂಡಲದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯನ್ನು ಸಸಿಗೆ ನೀರುಣಿಸುವ ಮೂಲಕ ಪಕ್ಷದ ಪದಾಧಿಕಾರಿಗಳು ಚಾಲನೆ ನೀಡಿದರು.

ಅರಭಾವಿ ಹಾಗೂ ಗೋಕಾಕ ಮತಕ್ಷೇತ್ರಗಳಲ್ಲಿ ಸಾಹುಕಾರ ಅವರ ಪ್ರಭಾವದಿಂದಾಗಿ ಬಿಜೆಪಿ ಅತ್ಯಂತ ಪ್ರಭಾವಶಾಲಿಯಾಗಿದೆ. ಜೊತೆಗೆ ಅವರು ಮಾಡಿರುವ ಪ್ರಗತಿಪರ ಕಾರ್ಯಗಳ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿವೆ. ಆದರೂ ಪಕ್ಷದ ನಿರ್ದೇಶನದಂತೆ ಪ್ರತಿ ಶಕ್ತಿಕೇಂದ್ರಗಳಿಗೆ ವಿಸ್ತಾರಕರನ್ನು ನೇಮಕ ಮಾಡಲಾಗಿದೆ. ಅರಭಾವಿ ಕ್ಷೇತ್ರದಲ್ಲಿ ಚುನಾವಣೆ ಮುಗಿಯುವವರೆಗೂ ವಿಸ್ತಾರಕರು ಇಲ್ಲಿಯೇ ವಾಸ್ತವ್ಯ ಹೂಡುತ್ತಾರೆ. ಆದ್ದರಿಂದ ಪಕ್ಷದ ಕಾರ್ಯಕ್ರಮಗಳನ್ನು ಕಾರ್ಯಕರ್ತರು ಪ್ರಚಾರಪಡಿಸಬೇಕು. ನಮ್ಮ ಪಕ್ಷ ಮತ್ತೇ ಅಧಿಕಾರಕ್ಕೆ ಬರಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಾರಥ್ಯದಲ್ಲಿ ವಿಧಾನಸಭಾ ಚುನಾವಣೆಯನ್ನು ಎದುರಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ ಮತ್ತು ಸುಭಾಸ ಪಾಟೀಲ ಮಾತನಾಡಿ, ಬಿಜೆಪಿ ಬೆಳಗಾವಿ ಜಿಲ್ಲೆಯಲ್ಲಿಯೇ ಅತ್ಯಂತ ಪ್ರಭಲ ಪಕ್ಷವಾಗಿದೆ. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದ್ದು, ರಾಜ್ಯದಲ್ಲಿ ಬಹುಮತ ಪಡೆದು ಮತ್ತೇ ಅಧಿಕಾರಕ್ಕೆ ಬರಲಿದೆ. ಶಕ್ತಿ ಕೇಂದ್ರಗಳಿಗೆ ಒಬ್ಬರಂತೆ ವಿಸ್ತಾರಕರನ್ನು ನೇಮಿಸಬೇಕು. ವಾಟ್ಸಫ್ ಗ್ರುಫ್‌ಗಳನ್ನು ರಚನೆ ಮಾಡಬೇಕು. ಪೇಜ್ ಪ್ರಮುಖರನ್ನು ನೇಮಿಸುವ ಮೂಲಕ ಮತಗಟ್ಟೆಗಳಲ್ಲಿ ಪಕ್ಷವನ್ನು ಬಲವರ್ಧನೆಗೊಳಿಸಬೇಕು. ಜೊತೆಗೆ ಈ ಭಾಗದ ಜನಪ್ರೀಯ ಶಾಸಕರಾಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಹೆಚ್ಚಿನ ಮತಗಳ ಅಂತರದಿAದ ಜಯಗಳಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಬಸನಗೌಡ ಕೊಳದೂರ, ಜಿಪಂ ಮಾಜಿ ಸದಸ್ಯ ಗೋವಿಂದ ಕೊಪ್ಪದ, ಅರಭಾವಿ ಮಂಡಲ ವಿಸ್ತಾರಕ ವೆಂಕಟೇಶ ಲಾಳೆ, ಪ್ರಕಾಶ ಮಾದರ, ಆನಂದ ಮೂಡಲಗಿ, ಮುತ್ತೆಪ್ಪ ಮನ್ನಾಪೂರ, ಮಂಜುಳಾ ಹಿರೇಮಠ, ಬಸು ಹಿಡಕಲ್, ಭೀಮಶಿ ಮಾಳೇದವರ, ಪರಸಪ್ಪ ಬಬಲಿ, ಜಿಲ್ಲಾ ಪದಾಧಿಕಾರಿಗಳು, ಅರಭಾವಿ ಮಂಡಲದ ವಿವಿಧ ಮೋರ್ಚಾಗಳ ಅಧ್ಯಕ್ಷರಾದ ವಾಸಂತಿ ತೇರದಾಳ, ಪ್ರಮೋದ ನುಗ್ಗಾನಟ್ಟಿ, ಸಂಗಣ್ಣ ಕಂಠಿಕಾರ, ಇಕ್ಬಾಲ್ ಸರ್ಕಾವಸ್, ಯಲ್ಲಾಲಿಂಗ ವಾಳದ, ತಮ್ಮಣ್ಣ ದೇವರ, ನಾಗರಾಜ ಕುದರಿ, ಪಕ್ಷದ ವಿವಿಧ ಹಂತಗಳ ಪದಾಧಿಕಾರಿಗಳು ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಉಪಸ್ಥಿತರಿದ್ದರು.
ಆರಂಭದಲ್ಲಿ ಭಾರತ ಮಾತೆ, ಪಂ. ದೀನದಯಾಳ ಉಪಾಧ್ಯೆಯ, ಶ್ಯಾಮ ಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

5 × five =