Breaking News

ಶೀಘ್ರವೇ ಸಂಪುಟ ವಿಸ್ತರಣೆ ? ಸಿಎಂ ಭೇಟಿಯಾದ ಗೋಕಾಕ ಸಾಹುಕಾರ್ !

Spread the love

ಶೀಘ್ರವೇ ಸಂಪುಟ ವಿಸ್ತರಣೆ ? ಸಿಎಂ ಭೇಟಿಯಾದ ಗೋಕಾಕ ಸಾಹುಕಾರ್ !

ಯುವ ಭಾರತ ಸುದ್ದಿ  ಬೆಂಗಳೂರು : ಸಚಿವ ಸಂಪುಟ ಸೇರ್ಪಡೆಯಾಗಲು ಕಾತರರಾಗಿರುವ ಮಾಜಿ ಸಚಿವ ಮತ್ತು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿ ಸುದೀರ್ಘ ಮಾತುಕತೆ ನಡೆಸಿದರು.

ನಂತರ ಬೊಮ್ಮಾಯಿ ಅವರು ರಮೇಶ ಜಾರಕಿಹೊಳಿ ಅವರನ್ನು  ಬೆಂಗಳೂರಲ್ಲೇ ಇರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಮಾತುಕತೆಗೆ ಕರೆದುಕೊಂಡು ಹೋಗಿದ್ದಾರೆ. ತಾವು ಸಚಿವರಾಗುವುದರಿಂದ ಬಿಜೆಪಿ ಸರಕಾರಕ್ಕೆ ಚುನಾವಣೆಯಲ್ಲಿ ಆಗುವ ಲಾಭದ ಬಗ್ಗೆ ಅವರು ಮನವರಿಕೆ ಮಾಡಿ ಕೊಟ್ಟಿದ್ದು ಒಂದು ವೇಳೆ ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡಿದರೆ ಕೆಲವೇ ದಿನಗಳಲ್ಲಿ ರಮೇಶ ಜಾರಕಿಹೊಳಿ ಸೇರಿದಂತೆ ಕೆಲವರು ಬೊಮ್ಮಾಯಿ ಸಂಪುಟಕ್ಕೆ ಸೇರುವುದು ಬಹುತೇಕ ಖಚಿತ.
ಸದ್ಯವೇ ಸಂಪುಟಕ್ಕೆ ?
ಬಿಜೆಪಿ ನಾಯಕರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಸದ್ಯವೇ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಜನವರಿ ಮೊದಲ ಅಥವಾ ಎರಡನೇ ವಾರ ಇಬ್ಬರು ಸಂಪುಟ ಸೇರಬಹುದು ಎಂಬ ಸುದ್ದಿ ಹರಡಿದೆ.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

10 + fourteen =