Breaking News

ಮೋದಿಯವರ ಜನಪರ ಆಡಳಿತ ಜನರ ಮನಗಳಲ್ಲಿ ನೆಲೆಸಿದೆ-ರಾಜೇಂದ್ರ ಗೌಡಪ್ಪಗೋಳ.!

Spread the love

ಮೋದಿಯವರ ಜನಪರ ಆಡಳಿತ ಜನರ ಮನಗಳಲ್ಲಿ ನೆಲೆಸಿದೆ-ರಾಜೇಂದ್ರ ಗೌಡಪ್ಪಗೋಳ.!


ಗೋಕಾಕ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಮಂಡಲಗಳ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಗೋಕಾಕ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಮಾತನಾಡಿ, ದೇಶ ಕಂಡAತಹ ಅಪ್ರತಿಮ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಹಾಗೂ ಜನಪರ ಆಡಳಿತ ಜನರ ಮನಗಳಲ್ಲಿ ನೆಲೆಸಿದೆ ಹೀಗಾಗಿ ಜನರು ಬಿಜೆಪಿ ಪಕ್ಷಕ್ಕೆ ಮತಗಳನ್ನು ನೀಡುವ ಮೂಲಕ ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾನಿ ಹಿಡಿಯಲು ಸಾಧ್ಯವಾಗಿದೆ ಎಂದು ಹೇಳಿದರು.
ಭಾರತೀಯ ಸಂಸ್ಕೃತಿ, ನೆಲ, ಜಲ, ಗಡಿ ಹಾಗೂ ಭಾಷೆಗಳ ರಕ್ಷಣೆಗಾಗಿ ಬಿಜೆಪಿ ಪಕ್ಷ ಸದಾ ಬದ್ಧವಾಗಿದೆ. ಈಗಾಗಲೇ ವಿಶ್ವದ ಎಲ್ಲ ದೇಶಗಳು ಭಾರತದತ್ತ ಮುಖಮಾಡುತ್ತಿವೆ. ಮುಂದೊAದು ದಿನ ಭಾರತ ದೇಶ ವಿಶ್ವ ಗುರುವಾಗಲಿದೆ ಎಂದರು.
ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ನಗರಸಭೆ ಸದಸ್ಯರಾದ ಅಬ್ಬಾಸ ದೇಸಾಯಿ, ಹರೀಶ ಬೂದಿಹಾಳ, ದುರ್ಗಪ್ಪ ಶಾಸ್ತಿçಗೊಲ್ಲರ, ಪ್ರಕಾಶ ಮುರಾರಿ, ವಿಶ್ವನಾಥ ಬಿಳ್ಳೂರ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ, ಯುವಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, ರೈತಮೋರ್ಚಾ ಅಧ್ಯಕ್ಷ ಸುರೇಶ ಪತ್ತಾರ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಮಲ್ಲಿಕಜಾನ ತಳವಾರ, ಪದಾಧಿಕಾರಿಗಳಾದ ಶಶಿಧರ ದೇಮಶೆಟ್ಟಿ, ಬಸವರಾಜ ಹಿರೇಮಠ, ಶ್ರೀದೇವಿ ತಡಕೋಡ, ಲಕ್ಕಪ್ಪ ತಹಶೀಲ್ದಾರ, ವಿರೇಂದ್ರ ಎಕ್ಕೇರಿಮಠ ಸೇರಿದಂತೆ ನಗರಸಭೆ ಸದಸ್ಯರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

7 + five =