ಗೋಕಾಕ: ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅಲ್ಪಸಂಖ್ಯಾತ ಸಮುದಾಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಚಿವ ರಮೇಶ ಜಾರಕಿಹೊಳಿ ಅವರ ಬಲ ಹೆಚ್ಚಿಸೋಣಾ ಎಂದು ಮುಸ್ಲಿಂ ಸಮುದಾಯದ ಮುಖಂಡ ಮೊಸಿನ ಖೋಜಾ ಹೇಳಿದರು.
ಶುಕ್ರವಾರದಂದು ನಗರದ ಅಬ್ದುಲಕಲಾಂ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಕರೆದಿದ್ದ ಜನಸೇವಕ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬದಲಾದ ರಾಜಕೀಯ ಸನ್ನಿವೇಶದ ಪರಿಣಾಮ ರಮೇಶ ಜಾರಕಿಹೊಳಿ ಅವರು ಬಿಜೆಪಿ ಪಕ್ಷ ಸೇರಿದರು ಸಹ ಮುಸ್ಲಿಂ ಸಮುದಾಯದ ಮೇಲೆ ಅವರು ಇಟ್ಟಿರುವ ಪ್ರೀತಿ ಮತ್ತು ವಿಶ್ವಾಸ ಕಡಿಮೆಯಾಗಿಲ್ಲ ಇದನ್ನು ಅರಿತು ನಾವೆಲ್ಲರೂ ಇಂದು ಒಗ್ಗಟ್ಟಾಗಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ ಅವರ ಕೈ ಬಲ ಪಡಿಸಬೇಕಾಗಿದೆ. ಜಾತ್ಯಾತೀತ ಮನೋಭಾವನೆ ಉಳ್ಳ ಸಚಿವ ರಮೇಶ ಜಾರಕಿಹೊಳಿ ಅವರು ಅಲ್ಪಸಂಖ್ಯಾತ ಸಮಾಜದ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರು ಅಲ್ಪಸಂಖ್ಯಾತರ ಸಮಾಜದ ಮೇಲೆ ಇಟ್ಟಿರುವ ಪ್ರೀತಿ ಮತ್ತು ವಿಶ್ವಾಸಕ್ಕೆ ಯಾವುದೇ ಚುತಿ ಬರದಂತೆ ನಾವು ನಡೆದುಕೊಂಡು ಅವರಿಗೆ ನೈತಿಕ ಬೆಂಬಲವನ್ನು ವ್ಯಕ್ತಪಡಿಸಿ. ಇದೇ ಜನವರಿ ೧೭ ರಂದು ರವಿವಾರ ಬೆಳಗಾವಿಯಲ್ಲಿ ಜರಗುವ ಜನಸೇವಕ ಸಮಾರೋಪ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾವೇಶವನ್ನು ಯಶಸ್ವಿಗೋಳಿಸಿ ಸಚಿವ ರಮೇಶ ಜಾರಕಿಹೊಳಿ ಅವರ ಕೈ ಬಲ ಪಡಿಸೋಣಾ ಎಂದು ಕರೆ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಶಫೀ ಜಮಾದಾರ ವಹಿಸಿದ್ದರು.
ವೇದಿಕೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ನಗರ ಘಟಕದ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಹಿರೇಮಠ, ಮುಸ್ಲಿಂ ಸಮಾಜದ ಮುಖಂಡರುಗಳಾದ ಅಬ್ದುಲರಹಮಾನ ದೇಸಾಯಿ, ಕುತಬುದ್ದೀನ ಗೋಕಾಕ, ಇಲಾಹಿ ಖೈರದಿ, ಜಾವೇದ ಗೋಕಾಕ, ಅಬ್ದುಲವಹಾಬ ಜಮಾದಾರ, ಹುಸೇನ ಫನಿಬಂದ, ಅಬ್ದುಲ್ ಖೈರದಿ, ಮಲ್ಲಿಕಾಜಾನ ತಳವಾರ ಇದ್ದರು.
ಸಭೆಯನ್ನು ಬಿಜೆಪಿ ಮುಖಂಡ ಶಕೀಲ ಧಾರವಾಡಕರ ನಿರೂಪಿಸಿ, ವಂದಿಸಿದರು.
Check Also
ಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.!
Spread the loveಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.! ಗೋಕಾಕ: ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮೂರನೇ …