Breaking News

“ಶಾಹಿದ್ ದಿವಸ” ಅಂಗವಾಗಿ ಬಿಜೆಪಿಯಿಂದ ಪಂಜಿನ ಮೆರವಣಿಗೆ.!

Spread the love

“ಶಾಹಿದ್ ದಿವಸ” ಅಂಗವಾಗಿ ಬಿಜೆಪಿಯಿಂದ ಪಂಜಿನ ಮೆರವಣಿಗೆ.!


ಯುವ ಭಾರತ ಸುದ್ದಿ  ಗೋಕಾಕ: ಬ್ರೀಟಿಷ್ ಶಾಹಿಯ ವಿರುದ್ದ ಕಹಳೆಯೂದಿದ ಮಹಾತ್ಮರ ಸ್ಮರಣಾರ್ಥ “ಶಾಹಿದ್ ದಿವಸ” ಅಂಗವಾಗಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
ಮಂಗಳವಾರದAದು ಸಂಜೆ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಸುಮಾರು ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ತ್ಯಾಗ ಬಲಿದಾನದ ಸ್ಮರಣಾರ್ಥವಾಗಿ ಪಾದಯಾತ್ರೆ ಮಾಡುವ ಮೂಲಕ ಬಸವೇಶ್ವರ ವೃತ್ತದ ವರೆಗೆ ಪಂಜಿನ ಮೆರವಣಿಗೆ ನಡೆಸಿ, ಬಸವೇಶ್ವರ ವೃತ್ತದಲ್ಲಿ ಕಾರ್ಯಕರ್ತರೆಲ್ಲರೂ ಮೆಣದ ದೀಪ ಹಚ್ಚಿ ಮಹಾನ ವ್ಯಕ್ತಿಗಳಿಗೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಶಾಸಕರ ಕಚೇರಿ ಸಹಾಯಕ ಸುರೇಶ ಸನದಿ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ ಮಡ್ಡಿಮನಿ, ಯುವ ಮೋರ್ಚಾ ಅಧ್ಯಕ್ಷ ಮಂಜು ಪ್ರಭುನಟ್ಟಿ, ರೈತಮೋರ್ಚಾ ಅಧ್ಯಕ್ಷ ಸುರೇಶ ಪತ್ತಾರ, ಪ್ರಧಾನ ಕಾರ್ಯದರ್ಶಿಗಳಾದ ವಿರೇಂದ್ರ ಏಕ್ಕೇರಿಮಠ, ಅರ್ಜುನ ಜರತಾರಕರ, ಶ್ರೀರಾಮ ಸೇನಾ ಅಧ್ಯಕ್ಷ ರವಿ ಪೂಜಾರಿ, ಅಡಿವೇಶ ಮಜ್ಜಗಿ ಸೇರಿದಂತೆ ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಇದ್ದರು.


Spread the love

About Yuva Bharatha

Check Also

ಡಾ.ಬಿ ಆರ್ ಅಂಬೇಡ್ಕರ ಅವರು ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದಾರೆ-ಶಾಸಕ ರಮೇಶ ಜಾರಕಿಹೊಳಿ.!

Spread the loveಡಾ.ಬಿ ಆರ್ ಅಂಬೇಡ್ಕರ ಅವರು ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದಾರೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ದೇಶಕ್ಕೆ …

Leave a Reply

Your email address will not be published. Required fields are marked *

two × five =