Breaking News

ಭವ್ಯ ಶೋಭಾಯಾತ್ರೆಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.!

Spread the love

ಭವ್ಯ ಶೋಭಾಯಾತ್ರೆಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.!

ಗೋಕಾಕ: ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ನಗರದಲ್ಲಿ ಗುರುವಾರದಂದು ಸಂಜೆ ವಿವಿಧ ದಲಿತ ಸಂಘಟನೆಗಳು ಹಮ್ಮಿಕೊಂಡ ಭವ್ಯ ಶೋಭಾಯಾತ್ರೆಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮತ್ತು ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಜಂಟಿಯಾಗಿ ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.


ಶೋಭಾಯಾತ್ರೆ ಮೆರವಣಿಗೆ ನಗರದ ತಹಶೀಲದಾರ ಕಾರ್ಯಾಲಯದಿಂದ ನಗರದ ವಿವಿಧ ಬೀದಿಗಳಲ್ಲಿ ಸಂಚರಿಸಿ ಆದಿಜಾಂಬವ ನಗರದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ಮಹಾರಾಜ್ಯದ ಜಾಂಝ್ ಪಥಾಕ್ ವಿಶೇಷ ಮೆರಗು ನೀಡಿತು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಪೌರಾಯುಕ್ತ ಶಿವಾನಂದ ಹಿರೇಮಠ, ಸೇರಿದಂತೆ ನಗರಸಭೆ ಸದಸ್ಯರು, ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

three × 5 =