Breaking News

ವಿಕಲಚೇತನ ಮಕ್ಕಳಿಗೆ ಅನುಕಂಪ ಬೇಡ ಅವಕಾಶ ನೀಡಿ-ಶಿಕ್ಷಣಾಧಿಕಾರಿ ಜಿ. ಬಿ. ಬಳಗಾರ!

Spread the love

ವಿಕಲಚೇತನ ಮಕ್ಕಳಿಗೆ ಅನುಕಂಪ ಬೇಡ ಅವಕಾಶ ನೀಡಿ-ಶಿಕ್ಷಣಾಧಿಕಾರಿ ಜಿ. ಬಿ. ಬಳಗಾರ!

ಯುವ ಭಾರತ ಸುದ್ದಿ ಗೋಕಾಕ: ವಿಕಲಚೇತನ ಮಕ್ಕಳಿಗೆ ಅನುಕಂಪ ಬೇಡ ಅವಕಾಶ ನೀಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಬಿ. ಬಳಗಾರ ಹೇಳಿದರು.
ಇತ್ತೀಚೆಗೆ ನಗರದ ಎಚ್.ಪಿ.ಎಸ್ ಲಕ್ಷ್ಮೀ ಬಡಾವಣೆ ಶಾಲೆ ಯಲ್ಲಿ ನಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಇವರ ಸಂಯುಕ್ತ ಆಶ್ರ‍್ರಯದಲ್ಲಿ ಗೋಕಾಕ ವಲಯ ಮಟ್ಟದ ವಿಕಲಚೇತನ ಮಕ್ಕಳ ವಿಶ್ವ ಅಂಗವಿಕಲರ ದಿನಾಚರಣೆಯನ್ನು ಅವರು ಉದ್ಘಾಟಿಸಿ ಅವರು ಮಾತನಾಡಿದರು.
ಗೋಕಾಕ ವಲಯದಲ್ಲಿ ೪೨೧ ವಿಕಲಚೇತನ ಮಕ್ಕಳು ವಿವಿಧ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. ವಿಕಲಚೇತನ ಮಕ್ಕಳಿಗೆ ಸೂಕ್ತ ಸೌಲಭ್ಯ ಕಲ್ಪಿಸಿದರೆ ಅವರು ಶಾಲೆ ಕಲಿತು ಪ್ರತಿಭಾನ್ವಿತರಾಗುತ್ತಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಯೋಜನೆಗಳೊಂದಿಗೆ ಈ ಮಕ್ಕಳ ಸರ್ವಾಂಗೀಣ ಅಭಿವೃಧ್ದಿಗೆ ಶ್ರಮಿಸುತ್ತಿವೆ. ಸರಕಾರ ಸರ್ವ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ ಎಲ್ಲ ಅಂಗವಿಕಲರಿಗೆ ಸೌಲಭ್ಯಗಳನ್ನು ನೀಡುತ್ತಾ ಬಂದಿದ್ದು, ಪ್ರತಿ ಬುಧವಾರ ಹಾಗೂ ಶುಕ್ರವಾರ ವಿಕಲಚೇತನ ಮಕ್ಕಳಿಗೆ ಸಂಪನ್ಮೂಲ ಕೇಂದ್ರದಲ್ಲಿ ಫಿಜಿಯೋಥೆರಪಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಪ್ರತಿ ವರ್ಷ ಮಕ್ಕಳಿಗೆ ಸಾರಿಗೆ ಭತ್ತೆ, ಬೆಂಗಾವಲು ಭತ್ತೆ, ರೀಡರ್ ಭತ್ತೆ, ಹೆಣ್ಣು ಮಕ್ಕಳ ವಿಷೇಶ ಭತ್ತೆ, ಹಾಗೂ ಉಚಿತವಾಗಿ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತದೆ. ಪಾಲಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಾಸಾದ ವಿಕಲಚೇತನ ವಿದ್ಯಾರ್ಥಿಗಳಾದ ಸೋನಿಯಾ ಪಾಟೀಲ ಮತ್ತು ಅಬುಬಕರ ಪಟೇಲ ಇವರನ್ನು

ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ, ಐ.ಬಿ.ಸಂಪಗಾAವಿ, ಎಚ್.ಎಚ್.ಕೌಜಗೆರಿ ಎಸ್.ಬಿ.ಕೊಂತಿ ಸಂಜು ನಾಯಿಕ, ಆರ್.ಬಿ.ಢವಳೇಶ್ವರ, ಮುತಾಲಿಕ ದೇಸಾಯಿ ಉಪಸ್ಥಿತರಿದ್ದರು.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

13 + 9 =