Breaking News

ಯುವ ಸಾಹಿತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ಪ್ರೋತ್ಸಾಹಿಸಿ- ಅರಿಹಂತ ಪಾಟೀಲ.!

Spread the love

ಯುವ ಸಾಹಿತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ಪ್ರೋತ್ಸಾಹಿಸಿ- ಅರಿಹಂತ ಪಾಟೀಲ.!

ಗೋಕಾಕ: ಯುವ ಸಾಹಿತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಅವರನ್ನು ಪ್ರೋತ್ಸಾಹಿಸುವಂತೆ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಅರಿಹಂತ ಪಾಟೀಲ ಹೇಳಿದರು.
ಅವರು ನಗರದ ಕೆಎಲ್‌ಇ ಶಾಲಾ ಆವರಣದಲ್ಲಿ ಕಾವ್ಯ ಕೂಟ ಕನ್ನಡ ಬಳಗ ರಾಜ್ಯ ವೇದಿಕೆ ಹಾಗೂ ಜಾಗೃತ ಮಹಿಳಾ ಸಮಾಜ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಶ್ರೇಷ್ಠ ಪರಂಪರೆಯ ಗೋಕಾಕ ತಾಲೂಕಿನಲ್ಲಿ ಹುಟ್ಟಿದ ಮಹಾನ್ ಸಾಹಿತಿಗಳು ಸಾಹಿತ್ಯ ಕ್ಷೇತ್ರಕ್ಕೆ ವಿಶಿಷ್ಠ ಕೊಡುಗೆ ನೀಡಿದ್ದಾರೆ. ಇಂತಹ ನಾಡಿನಲ್ಲಿ ಯುವ ಸಾಹಿತಿಗಳು ಹೆಚ್ಚು ಹೆಚ್ಚು ಬರಲಿ. ಜನತೆ ಸಾಹಿತ್ಯ ಒದುವ ಹವ್ಯಾಸವನ್ನು ಬೆಳೆಸಿಕೊಂಡು ಸಾಹಿತಿಗಳನ್ನು ಪ್ರೋತ್ಸಾಹಿಸುವಂತೆ ಕರೆ ನೀಡಿದರು.
ವೇದಿಕೆಯ ಮೇಲೆ ಸಾಹಿತಿ ಮಹಾಲಿಂಗ ಮಂಗಿ, ಆಶಾ ಯಮಕನಮರ್ಡಿ, ಈಶ್ವರಚಂದ್ರ ಬೆಟಗೇರಿ, ಆಶಾ ಸವಸುದ್ದಿ, ಚೇತನ ಜೋಗನ್ನವರ, ಜ್ಯೋತಿ ದೊಡ್ಡನ್ನವರ, ಈಶ್ವರ ಮಮದಾಪೂರ ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

8 + 12 =