Breaking News

ಅಹಿಂದ ಸ್ವಾಮಿಜಿಗಳಿಂದ ಸಾಹುಕಾರ್ ಮನೆಯಲ್ಲಿ ಶಕ್ತಿ ಪ್ರದರ್ಶನ.!

Spread the love

ಅಹಿಂದ ಸ್ವಾಮಿಜಿಗಳಿಂದ ಸಾಹುಕಾರ್ ಮನೆಯಲ್ಲಿ ಶಕ್ತಿ ಪ್ರದರ್ಶನ.!

ಬೆಳಗಾವಿ: ಎಸ್ ಸಿ, ಎಸ್ ಟಿ‌ ಸಮುದಾಯದ ವಿವಿಧ ಪೀಠಗಳ ಏಳು ಜನ ಮಠಾಧೀಶರು ಬೆಳಗಾವಿಯ ವಿದ್ಯಾನಗರದಲ್ಲಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿ ಗೌಪ್ಯ ಸಭೆ ನಡೆಸಿದರು.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಚಿತ್ರದುರ್ಗ ಶಿವಶರಣ ಮಾದಾರಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮೈಸೂರು ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಚಿತ್ರದುರ್ಗ ಬಂಜಾರಾ ಗುರುಪೀಠದ ಸಂತ ಸೇವಾಲಾಲ ಸ್ವಾಮೀಜಿ, ಚಿತ್ರದುರ್ಗ ಮೇದಾರ ಕೇತೇಶ್ವರ ಗುರುಪೀಠದ ಶ್ರೀ ಬಸವಪ್ರಭು ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಚಿತ್ರದುರ್ಗ ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಸ್ವಾಮೀಜಿ, ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ನೀಡಿದರು.

ಜಾರಕಿಹೊಳಿ ಅವರ ಮನೆಗೆ ಆಗಮಿಸಿದ ಮಠಾಧೀಶರನ್ನು ರಮೇಶ್ ಜಾರಕಿಹೊಳಿ ಹಾಗೂ ಲಕನ್ ಜಾರಕಿಹೊಳಿ ಸಾಲುಹರಿಸಿ ಅನ್ನು ಹಂಪಲು ನೀಡಿ ಸನ್ಮಾನಿಸಿದರು. ಜಾರಕಿಹೊಳಿ ಸಹೋದರರು ಆಶೀರ್ವಾದ ಪಡೆದು ಗೌಪ್ಯ ಸಭೆ ನಡೆಸಿದರು. ಮಾಧ್ಯಮದವರನ್ನು ಹೊರಗೆ ಕಳುಹಿಸಿ ಗೌಪ್ಯ ಸಭೆ ನಡೆಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

four × 2 =