Breaking News

ಭಾರತ ದೇಶವು ಕೇವಲ 75ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ, ಪ್ರಜಾತಂತ್ರ ರಾಷ್ಟçವಾಗಿ ಹೊರಹೊಮ್ಮಿದೆ- ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ.!

Spread the love

ಭಾರತ ದೇಶವು ಕೇವಲ 75ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ, ಪ್ರಜಾತಂತ್ರ ರಾಷ್ಟçವಾಗಿ ಹೊರಹೊಮ್ಮಿದೆ- ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ.!


ಗೋಕಾಕ: ನಮ್ಮ ದೇಶ ಪ್ರಜಾಪ್ರಭುತ್ವ, ಗಣರಾಜ್ಯವೆಂದು ಘೋಷಣೆಯಾಗಿ ಸಂವಿಧಾನ ಅಸ್ತಿತ್ವಕ್ಕೆ ಬಂದ ಈ ಸುದಿನವನ್ನು ೭೪ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೆವೆ ಎಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು.
ಅವರು, ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡ ೭೪ನೇ ಗಣರಾಜ್ಯೋತ್ಸವ ಸಮಾರಂಭವನ್ನು ಉದ್ಧೇಶಿಸಿ ಮಾತನಾಡುತ್ತ, ನಮ್ಮ ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ನಾವೆಲ್ಲರೂ ಗೌರವ ಸಲ್ಲಿಸುವದು ಆದ್ಯಕರ್ತವ್ಯವಾಗಿದೆ. ಸ್ವತಂತ್ರ ನಂತರ ದೇಶದಲ್ಲಿ ಹಲವಾರು ಸಮಸ್ಯೆಗಳು ಉದ್ಭವಗೊಂಡರು ಆ ಸಮಸ್ಯೆಗಳನ್ನು ಸಂವಿಧಾನ ಬದ್ಧವಾಗಿ ಪರಿಹಾರಕಂಡುಕೊಳ್ಳಲಾಯಿತು. ಭಾರತ ದೇಶವು ಕೇವಲ ೭೫ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ, ಪ್ರಜಾತಂತ್ರ ರಾಷ್ಟçವಾಗಿ ಹೊರ ಹೊಮ್ಮಲು ಸಂವಿಧಾನ ಮಾರ್ಗದರ್ಶಿಯಾಗಿದೆ ಎಂದು ಹೇಳಿದರು.


ಮುಂಜಾನೆ ತಹಶೀಲ್ದಾರ ಕಾರ್ಯಾಲಯದಿಂದ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ವಾಲ್ಮೀಕಿ ಕ್ರೀಡಾಂಗಣದಲ್ಲಿ ೫ಸಾವಿರ ವಿದ್ಯಾರ್ಥಿಗಳಿಂದ ರಾಷ್ಟçಗೀತೆ ಹಾಡಲಾಯಿತು. ಕ್ರೀಡೆಗಳಲ್ಲಿ ರಾಜ್ಯ, ರಾಷ್ಟç ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.


ವೇದಿಕೆಯ ಮೇಲೆ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ಸ್ಥಾಯಿ ಸಮಿತಿ ಚೇರಮನ ಸಿದ್ಧಪ್ಪ ಹುಚ್ಚರಾಯಪ್ಪಗೋಳ, ಪೌರಾಯುಕ್ತ ಶಿವಾನಂದ ಹಿರೇಮಠ, ಡಿವೈಎಸ್‌ಪಿ ಮನೋಜಕುಮಾರ ನಾಯ್ಕ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಸಿಪಿಐ ಗೋಪಾಲ ರಾಠೋಡ, ಪಿಎಸ್‌ಐ ಎಮ್ ಡಿ ಘೋರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ಗ್ರೇಡ-೨ ತಹಶೀಲದಾರ ಎಲ್ ಎಚ್ ಭೋವಿ, ಮುಖಂಡರಾದ ಬಿ ಆರ್ ಕೊಪ್ಪ, ಅಶೋಕ ಪೂಜಾರಿ, ಸೋಮಶೇಖರ ಮಗದುಮ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಗೋಕಾಕ ಮತಕ್ಷೇತ್ರದಲ್ಲಿ ಝಣಝಣ ಕಾಂಚಾಣ ಸದ್ದು, ಕಾಂಗ್ರೇಸ್ ಅಭ್ಯರ್ಥಿಯಿಂದ ಮತದಾರರಿಗೆ ಹಣದ ಆಮಿಷ.!

Spread the loveಗೋಕಾಕನಲ್ಲಿ ಪ್ರತಿ ಮನೆಗೆ 1000, ಅಲ್ಪಸಂಖ್ಯಾತರಿಗೆ 500 ಕಾಂಗ್ರೇಸ್ ಕಾಂಚಾಣ ಸದ್ದು.! ಗೋಕಾಕ: ಲೋಕಸಭಾ ಚುನಾವಣೆ ಇನ್ನು …

Leave a Reply

Your email address will not be published. Required fields are marked *

20 − 18 =