Breaking News

ಬಿಜೆಪಿಯಲ್ಲಿ ಕಂಪನ ಶುರು ! ಸವದಿ, ಸುಕುಮಾರ, ರಘುಪತಿ, ಲಾಲಾಜಿ, ಸಂಜೀವಗೆ ಟಿಕೆಟ್ ಇಲ್ಲ !

Spread the love

ಬಿಜೆಪಿಯಲ್ಲಿ ಕಂಪನ ಶುರು ! ಸವದಿ, ಸುಕುಮಾರ, ರಘುಪತಿ, ಲಾಲಾಜಿ, ಸಂಜೀವಗೆ ಟಿಕೆಟ್ ಇಲ್ಲ !

ಯುವ ಭಾರತ ಸುದ್ದಿ ಬೆಂಗಳೂರು :
ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಬಿಜೆಪಿಯಲ್ಲಿ ಅನೇಕ ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಸಿಗುವುದು ಕಠಿಣ. ಈ ಬಗ್ಗೆ ದೆಹಲಿಯಿಂದಲೇ ಶಾಸಕರಿಗೆ ದೂರವಾಣಿ ಕರೆ ಮೂಲಕ ವರಿಷ್ಠರು ಕ್ಷೇತ್ರ ತ್ಯಾಗಕ್ಕೆ ಸೂಚನೆ ನೀಡಿದ್ದಾರೆ.

ಕರ್ನಾಟಕ ವಿಧಾಸಭಾ ಚುನಾವಣಾ ಕಾವು ಜೋರಾಗುತ್ತಿದ್ದಂತೆ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಇಂದು ಘೋಷಣೆಯಾಗಲಿದೆ. ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪು ಸಾಧ್ಯತೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿ ಹಿರಿಯ ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದರೆ. ಜಗದೀಶ್ ಶೆಟ್ಟರ್ ಅಸಮಾಧಾನ ತೋಡಿಕೊಂಡಿದ್ದಾರೆ. ಇದೀಗ ಭಾರಿ ಕುತೂಹಲ ಮೂಡಿಸಿದ್ದ ಅಥಣಿ ಕ್ಷೇತ್ರದಲ್ಲಿ ಜಟಾಪಟಿ ಶುರುವಾಗಿದೆ. ಅಥಣಿ ಕ್ಷೇತ್ರದಿಂದ ರಮೇಶ ಜಾರಕಿಹೊಳಿ ಆಪ್ತ ಮಹೇಶ ಕುಮಟಳ್ಳಿಗೆ ಟಿಕೆಟ್ ನೀಡಲು ಬಿಜೆಪಿ ಒಲವು ತೋರಿದೆ.

ಕರಾವಳಿಯಲ್ಲಿ ಬಿಜೆಪಿ ಟಿಕೆಟ್ ವಿಚಾರದಲ್ಲಿ ಮೇಜರ್ ಸರ್ಜರಿ ಮಾಡಲು ಮುಂದಾಗಿದೆ. ಉಡುಪಿ ಕ್ಷೇತ್ರದ ಹಾಲಿ ಶಾಸಕ ರಘುಪತಿ ಭಟ್ ಬದಲು ಯಶ್‌ಪಾಲ್‌ ಸುವರ್ಣಗೆ ಟಿಕೆಟ್ ನೀಡಲು ಬಿಜೆಪಿ ಮುಂದಾಗಿದೆ. ಕಾಪು ಕ್ಷೇತ್ರದಿಂದ ಲಾಲ್‌ಜಿ ಮೆಂಡನ್ ಬದಲಿಗೆ ಗುರ್ಮೆ ಸುರೇಶ್ ಶೆಟ್ಟಿಗೆ ಟಿಕೆಟ್ ನೀಡುವ ಸಾಧ್ಯತೆಗಳು ಕಾಣಿಸುತ್ತಿದೆ. ಬೈಂದೂರಿನಲ್ಲಿ ಸುಕುಮಾರ್‌ ಶೆಟ್ಟಿಗೆ ಟಿಕೆಟ್‌ ಮಿಸ್‌ ಆಗುವ ಸಾಧ್ಯತೆ ದಟ್ಟವಾಗಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಚುನಾವಣಾ ರಾಜಕೀಯದಿಂದ ದೂರ ಸರಿದಿರುವುದರಿಂದ ಅವರ ಒಡನಾಡಿ ಕಿರಣ್ ಕೊಡ್ಗಿ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ.
ಪುತ್ತೂರಿನಲ್ಲಿ ಹಾಲಿ ಶಾಸಕ ಸಂಜು ಮಠಂದೂರು ಅವರಿಗೆ ಟಿಕೆಟ್ ಕೈ ತಪ್ಪಲಿದೆ. ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ.

 

ಅಥಣಿ ಟಿಕೆಟ್ ವಿಚಾರ ಇದೀಗ ಬಿಜೆಪಿಗೆ ತಲೆನೋವಾಗಿದೆ. ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿರುವ ನಾಯಕರಲ್ಲಿ ಮಹೇಶ್ ಕುಮಟಳ್ಳಿ ಒಬ್ಬರಾಗಿದ್ದಾರೆ.ರಮೇಶ್ ಜಾರಕಿಹೊಳಿ ಕೂಡ ಕುಮಟಳ್ಳಿ ಪರ ಬ್ಯಾಟ್ ಬೀಸಿದ್ದರು. ಕುಮಟಳ್ಳಿಗೆ ಟಿಕೆಟ್ ನೀಡದಿದ್ದರೆ ನನಗೂ ಟಿಕೆಟ್ ಬೇಡ ಎಂದಿದ್ದರು. ಹೀಗಾಗಿ ಅಳೆದು ತೂಗಿ ಅಥಣಿಯ ಬಿಜೆಪಿ ನಾಯಕ ಲಕ್ಷ್ಮಣ ಸವದಿ ಬಿಟ್ಟು ಕುಮಟಳ್ಳಿಗೆ ಟಿಕೆಟ್ ನೀಡಲು ಬಿಜೆಪಿ ಮುಂದಾಗಿದೆ.

ಸವದಿ ನಿರ್ಧಾರ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಲಕ್ಷ್ಮಣ ಸವದಿ ಅವರು ಅಥಣಿಯಿಂದ ಟಿಕೆಟ್‌ ಕೊಡುವಂತೆ ಕೇಳಿರುವುದು ನಿಜ. ಆದರೆ, ಮಹೇಶ್‌ ಕುಮಟಳ್ಳಿ ಅವರು ಬಿಜೆಪಿ ಸರ್ಕಾರ ರಚನೆ ಮಾಡಲು ಪ್ರಮುಖ ಪಾತ್ರವನ್ನು ವಹಿಸಿರುವ ಹಿನ್ನೆಲೆಯಲ್ಲಿ ಅವರೊಂದಿಗೆ ಚರ್ಚೆ ಮಾಡಲಾಗುತ್ತಿದೆ. ಆದರೆ, ಲಕ್ಷ್ಮಣ ಸವದಿ ಅವರಿಗೆ ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಕೈಗೊಳ್ಳಬಾರದು ಎಂದು ಸೂಚನೆ ನೀಡಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಒಟ್ಟಾರೆ ಬಿಜೆಪಿ ಇಷ್ಟರಲ್ಲೇ ತನ್ನ ಚೊಚ್ಚಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

fourteen − 3 =