Breaking News

ಭೀಕರ ಅಪಘಾತಕ್ಕೆ ರೈತರಿಬ್ಬರ ಬಲಿ

Spread the love

ಭೀಕರ ಅಪಘಾತಕ್ಕೆ ರೈತರಿಬ್ಬರ ಬಲಿ

ಯುವ ಭಾರತ ಸುದ್ದಿ ಖಾನಾಪುರ :
ಗುರುವಾರ ಮಧ್ಯರಾತ್ರಿ ವಾಹನ ಹರಿದು ಇಬ್ಬರು ರೈತರು ಬಲಿಯಾದ ಘಟನೆ ಗೋದೊಳ್ಳಿ ಗ್ರಾಮದ ಬಳಿ ಸಂಭವಿಸಿದೆ.

ಗೋಧೋಳಿ ಗ್ರಾಮದ ಮಹಾಬಲೇಶ್ವರ ಶಿಂಧೆ( 65), ಪುಂಡಲಿಕ್ ರೆಡೇಕಾರ (72 ) ಮೃತಪಟ್ಟಿದ್ದಾರೆ. ಪುಂಡಲಿಕ್ ಅವರ ಹಿರಿಯ ಸಹೋದರ ಕೃಷ್ಣರೇಡೆಕರ (74)ಗಾಯಗೊಂಡು ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೊಬ್ಬರು ಮಂಜುನಾಥ (47) ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗೋದೊಳ್ಳಿ ಗ್ರಾಮದ ನಾಲ್ವರು ರೈತರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲು ಹೊರಟಿದ್ದರು. ಆ ಸಂದರ್ಭದಲ್ಲಿ ವಾಹನ ಇವರಿಗೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ.

ಘಟನೆ ವಿವರ :
ಈ ಬಗ್ಗೆ ಸಿಕ್ಕಿರುವ ಮಾಹಿತಿ ಏನೆಂದರೆ ಗೋಧೋಳಿ ಭಾಗದಲ್ಲಿ ಕರಡಿ ಸೇರಿದಂತೆ ಕಾಡುಪ್ರಾಣಿಗಳ ಓಡಾಟ ಹೆಚ್ಚಾಗಿದೆ. ಈ ಭಾಗದ ರೈತರಿಗೆ ರಾತ್ರಿ ವೇಳೆ ವಿದ್ಯುತ್ ಪೂರೈಕೆಗೆ ತೊಂದರೆಯಾಗಿದೆ. ಹೀಗಾಗಿ ಈ ಭಾಗದ ರೈತರು ಒಂದೆಡೆ ಸೇರಿ ರಾತ್ರಿ ವೇಳೆ ಹೊಲಗಳಿಗೆ ಹೋಗುತ್ತಾರೆ. ಅದೇ ರೀತಿ ಗುರುವಾರ ರಾತ್ರಿ ಐದಾರು ಜನ ರೈತರು ಒಂದೆಡೆ ಸೇರಿದ್ದರು. ರಾತ್ರಿ 12:00 ಗಂಟೆ ಸುಮಾರಿಗೆ ಜಮೀನಿನಲ್ಲಿ ಬೋರ್ ವೆಲ್ ಪೈಪ್ ಬದಲಾಯಿಸಿ ಹುಬ್ಬಳ್ಳಿ-ಗೋವಾ ಹೆದ್ದಾರಿಯಲ್ಲಿ ರಸ್ತೆ ಬದಿ ಕುಳಿತು ವೀಳ್ಯದೆಲೆ ತಿನ್ನುತ್ತಿದ್ದಾಗ ಗೋವಾದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಬಣ್ಣದ ಅಪರಿಚಿತ ವಾಹನ ಇವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೂಡಲೇ ಗ್ರಾಮದಲ್ಲಿ ಈ ಸುದ್ದಿ ಹಬ್ಬಿದ್ದು, ಘಟನೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಮಾಜಿ ಶಾಸಕ ಅರವಿಂದ ಪಾಟೀಲ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

seventeen + four =