Breaking News

ಅಂಬಿರಾವ್ ಪಾಟೀಲರಿಂದ ಮತ ಯಾಚನೆ !

Spread the love

ಅಂಬಿರಾವ್ ಪಾಟೀಲರಿಂದ ಮತ ಯಾಚನೆ !

ಯುವ ಭಾರತ ಸುದ್ದಿ ಗೋಕಾಕ :
ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಘಟಪ್ರಭಾ ಪುರಸಭೆಯ ವಾರ್ಡ್ ನಂಬರ್ 10 ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರವಾಗಿ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಅವರು ಗುರುವಾರ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.


ಕಳೆದ ನಾಲ್ಕು ದಶಕಗಳಿಂದ ಗೋಕಾಕ ಮತಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಅವರು ಮಾಡುತ್ತಿರುವ ಅಭಿವೃದ್ಧಿ ಕೆಲಸಗಳು ಮಾದರಿಯಾಗಿ ನಿಂತಿವೆ. ಮುಂದಿನ ದಿನಗಳಲ್ಲಿ ಗೋಕಾಕ ಮತಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿಗಳನ್ನು ಸರಕಾರದಿಂದ ಅನುದಾನವಾಗಿ ತಂದು ಅಭಿವೃದ್ಧಿಪಡಿಸುವ ಗುರಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ತಮ್ಮ ಅವಧಿಯಲ್ಲಿ ಗೋಕಾಕನ್ನು ಮಾದರಿ ಕ್ಷೇತ್ರವಾಗಿ ಮಾಡುವ ಕನಸನ್ನು ರಮೇಶ ಜಾರಕಿಹೊಳಿ ಹೊಂದಿದ್ದಾರೆ. ಈ ದಿಸೆಯಲ್ಲಿ ಈ ಬಾರಿ ಅತಿ ಹೆಚ್ಚು ಮತಗಳಿಂದ ಅವರನ್ನು ವಿಧಾನಸಭೆಗೆ ಆಯ್ಕೆ ಮಾಡಿ ಕಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹಿರಿಯರಾದ ಡಿ. ಎಂ. ದಳವಾಯಿ, ಸಲೀಮ ಕಬ್ಬೂರ ಮುಂತಾದವರು ಇದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

one × 1 =