ಬೆಳಗಾವಿಯಲ್ಲಿ ಎನ್ಐಎ ಕೋರ್ಟ್ ಸ್ಥಾಪಿಸಿ

ಯುವ ಭಾರತ ಸುದ್ದಿ ಬೆಂಗಳೂರು :
ಎನ್ ಐ ಎ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿಗೆ ಅನುಕೂಲವಾಗುವಂತೆ ರಾಜ್ಯದ ಕಂದಾಯ ವಿಭಾಗಗಳಾದ ಬೆಳಗಾವಿ, ಕಲಬುರ್ಗಿ ಮತ್ತು ಮೈಸೂರಿನಲ್ಲಿ ಎನ್ಐಎ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ವ್ಯಕ್ತಿಯೊಬ್ಬರು ಧರ್ಮವೊಂದಕ್ಕೆ ಅಪಮಾನ ವಾಗುವಂತೆ ಚಿತ್ರವನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿಕೊಂಡ ಹಿನ್ನಲೆಯಲ್ಲಿ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಜಮಾಯಿಸಿದ ಗಲಭೆ ಪ್ರಕರಣದಲ್ಲಿ 40 ಆರೋಪಿಗಳಿಗೆ ಜಾಮೀನು ನಿರಾಕರಿಸಿ ಹೊರಡಿಸಿದ ಆದೇಶದಲ್ಲಿ ನ್ಯಾ.ಬಿ.ವೀರಪ್ಪ ನೇತ್ರತ್ವದ ವಿಭಾಗಿಯ ಪೀಠ ಈ ಆದೇಶ ನೀಡಿದೆ. ರಾಜ್ಯದಲ್ಲಿ ಸದ್ಯ ಬೆಂಗಳೂರಿನಲ್ಲಿ ಎನ್ಐಎ ವಿಶೇಷ ನ್ಯಾಯಾಲಯ ಇದೆ. ಬೆಳಗಾವಿ, ಮೈಸೂರು, ಕಲಬುರ್ಗಿಯಲ್ಲಿ ಕೋರ್ಟ್ ಸ್ಥಾಪಿಸಲು ಇದು ಸಕಾಲ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.
YuvaBharataha Latest Kannada News