Breaking News

ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರ

Spread the love

ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರವ
ಗೋಕಾಕ
ಖಜಕಿಸ್ತಾನದಲ್ಲಿ ನಡೆದ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮೂಡಲಗಿ ಪೊಲೀಸ್ ಠಾಣೆಯ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರು ಐರನ್ ಮ್ಯಾನ್ ಆಗಿ ಹೊರಹೊಮ್ಮುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ಮೊದಲ ಅಧಿಕಾರಿ ಹಾಗೂ ನಾಡಿನ ಹೆಮ್ಮೆಯ ಅಧಿಕಾರಿಯಾಗಿ ರಾಜ್ಯ ಪೊಲೀಸ್ ಇಲಾಖೆಯ ಕೀರ್ತಿ ಇಮ್ಮಡಿಗೊಳಿಸಿದ್ದಾರೆ.
ಸುಮಾರು ೬೪ ದೇಶದ ಸ್ಪರ್ಧಿಗಳಲ್ಲಿ ಸಿಪಿಐ ಶ್ರೀಶೈಲ ಕೂಡ ಭಾಗವಹಿಸಿ ಸ್ಪರ್ಧೆಯಲ್ಲಿ ೩.೮ ಕಿಮೀ ಈಜು, ೧೮೦ ಕಿಮೀ ಸೈಕ್ಲಿಂಗ್ ಮತ್ತು ೪೨ ಕಿಮೀ ಓಟವನ್ನು ೧೪.೩೦ ಗಂಟೆಯಲ್ಲಿ ಪೂರ್ಣಗೊಳಿಸಿ ಐರನ್ ಮ್ಯಾನ್ ಆಗಿದ್ದಾರೆ. ಪೊಲೀಸ್ ಇಲಾಖೆ ಸೇರಿದಂತೆ ಗಣ್ಯ ಮುಖಂಡರಿಂದ ಶ್ಲಾಘನೆ ವ್ಯಕ್ತವಾಗಿದ್ದು, ಅಭಿನಂದನೆಯ ಮಹಾಪೂರವೇ ಹರಿದು ಬಂದಿದೆ.
ಕೋಟ್..
೬೪ ದೇಶದ ಸ್ಪರ್ಧಿಗಳಲ್ಲಿ ಮೂಡಲಗಿ ಪೊಲೀಸ್ ಠಾಣೆಯ ಸಿಪಿಐ ಶ್ರೀಶೈಲ ಬ್ಯಾಕೋಡ್ ಭಾಗವಹಿಸಿ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ. ಇದು ನಮ್ಮ ರಾಜ್ಯ ಅಷ್ಟೆ ಅಲ್ಲದೆ ಇಡೀ ದೇಶವೇ ಹೆಮ್ಮೆ ಪಡುವ ವಿಷಯವಾಗಿದೆ. ಅವರಿಗೆ ಪೊಲೀಸ್ ಇಲಾಖೆಯಿಂದ ಅಭಿನಂದನೆಗಳು.
ಸಂಜೀವಕುಮಾರ ಪಾಟೀಲ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ.

Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

four × four =