Breaking News

ಮಧ್ಯಂತರ ಬಜೇಟ್ ವಿಕಸಿತ ಪ್ರಗತಿಶೀಲ ಭಾರತದ ಬಜೇಟ್- ರಮೇಶ ಜಾರಕಿಹೊಳಿ.!

Spread the love

ಮಧ್ಯಂತರ ಬಜೇಟ್ ವಿಕಸಿತ ಪ್ರಗತಿಶೀಲ ಭಾರತದ ಬಜೇಟ್- ರಮೇಶ ಜಾರಕಿಹೊಳಿ.!


ಗೋಕಾಕ: ಕೇಂದ್ರ ಸರಕಾರದ ಮಧ್ಯಂತರ ಬಜೇಟ್ ವಿಕಸಿತ ಪ್ರಗತಿಶೀಲ ಭಾರತದ ಬಜೇಟ್ ಇದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮುಂದಿನ ೫ವರ್ಷಗಳಲ್ಲಿ ೨ಕೋಟಿ ಮನೆಗಳನ್ನು ಬಡವರಿಗೆ ಒದಗಿಸುವ ಗುರೀಯೇ ಮೋದಿ ಸರಕಾರದ ಗ್ಯಾರಂಟಿ. ಮಹಿಳೆಯರ ಆರ್ಥಿಕ ಅಭಿವ್ರದ್ಧಿಗೆ ಸಹಕಾರಿಯಾಗಿದೆ. ಬಜೇಟ ಶ್ರೀಸಾಮಾನ್ಯರ ಪರವಾಗಿದೆ. ಪ್ರಧಾನಿ ಮೋದಿಯವರು ಈ ವರೆಗೆ ನಡೆದು ಬಂದ ಹಾದಿ ಬಡತನ ನಿರ್ಮೂಲನೆ, ಸುಧಾರಣೆ, ಅಭಿವೃದ್ಧಿ ಹಾಗೂ ಆರ್ಥಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡುತ್ತ ಬಂದಿದ್ದಾರೆ. ಕೃಷಿ, ಕೈಗಾರಿಕೆ, ಉದ್ಯೋಗ, ಪ್ರವಾಸೋದ್ಯಮ, ವೈದ್ಯಕೀಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವ ನೀಡುವ ಮೂಲಕ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ಮಹತ್ವಾಕಾಂಕ್ಷೆಯ ಬಜೇಟ ಇದಾಗಿದೆ ಎಂದು ತಿಳಿಸಿದ್ದಾರೆ.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

four + thirteen =