Breaking News

ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳವರ ೨೫ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ದಿ.೯ರಿಂದ ೧೦ರ ವರೆಗೆ-ಶಿವಪುತ್ರ ಜಕಬಾಳ.!

Spread the love

ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳವರ ೨೫ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ದಿ.೯ರಿಂದ ೧೦ರ ವರೆಗೆ-ಶಿವಪುತ್ರ ಜಕಬಾಳ.!


ಗೋಕಾಕ: ಅನಿವರ‍್ಯ ಕಾರಣಗಳಿಂದ ಫೆಬ್ರುವರಿ ೧೦ ಮತ್ತು ೧೧ರಂದು ನಡೆಯ ಬೇಕಿದ್ದ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳವರ ೨೫ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ಹಾಗೂ ಶ್ರೀ ಉಪವೀರ ಜರು ವಿದ್ಯಾ ಸಂಸ್ಥೆಯ ೫೦ನೇ ವರ್ಷದ ಸುವರ್ಣ ಮಹೋತ್ಸವ ಮತ್ತು ಧಾರ್ಮಿಕ ಸಮಾರಂಭವು ದಿ.೯ ಮತ್ತು ೧೦ರಂದು ಹೊಸದುರ್ಗದ ಸುಕ್ಷೇತ್ರ ಬ್ರಹ್ಮವಿದ್ಯಾನಗರದಲ್ಲಿ ಜರುಗಲಿದೆ ಎಂದು ಶ್ರೀ ಭಗೀರಥ ಉಪ್ಪಾರ ಸಂಘದ ತಾಲೂಕಾಧ್ಯಕ್ಷ ಶಿವಪುತ್ರ ಜಕಬಾಳ ತಿಳಿಸಿದ್ದಾರೆ.
ಅವರು, ಶುಕ್ರವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳವರ ಪಟ್ಟಾಭಿಷೇಕ ಹಾಗೂ ಸುವರ್ಣ ಮಹೋತ್ಸವದ ನಿಮಿತ್ಯ ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ದಿ. ೯ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಸಚಿವರಾದ ಸತೀಶ ಜಾರಕಿಹೊಳಿ, ಡಿ ಸುಧಾಕರ, ಶಿವರಾಜ ತಂಗಡಗಿ, ಕೆ ಎನ್ ರಾಜಣ್ಣ, ಮಧು ಬಂಗಾರಪ್ಪ ಸೇರಿದಂತೆ ಕೇಂದ್ರ ಹಾಗೂ ರಾಜ್ಯದ ಸಚಿವರುಗಳು ಮತ್ತು ಮಠಾಧೀಶರು ಭಾಗವಹಿಸಲಿದ್ದಾರೆ. ದಿ.೯ ಮತ್ತು ೧೦ರಂದು ನಡೆಯಲಿರುವ ಭಗೀರಥ ಉಪ್ಪಾರ ಸಮಾಜದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾರಂಭದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
ಪತ್ರಿಕಾಗೊಷ್ಠಿಯಲ್ಲಿ ಉಪಾಧ್ಯಕ್ಷರುಗಳಾದ ಅಡಿವೆಪ್ಪ ಕಿತ್ತೂರ, ಕುಶಾಲ ಗುಡೆನ್ನವರ, ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಭಗೀರಥರ ಜೀವನವು ಭಕ್ತಿ, ಬದ್ಧತೆ, ಸಾಧನೆ ಮತ್ತು ಶ್ರದ್ಧೆಯಿಂದ ಕೂಡಿದ್ದು ನಾವೆಲ್ಲರೂ ತಪ್ಪದೇ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.- ಡಾ.ಮೋಹನ ಭಸ್ಮೆ.!

Spread the loveಭಗೀರಥರ ಜೀವನವು ಭಕ್ತಿ, ಬದ್ಧತೆ, ಸಾಧನೆ ಮತ್ತು ಶ್ರದ್ಧೆಯಿಂದ ಕೂಡಿದ್ದು ನಾವೆಲ್ಲರೂ ತಪ್ಪದೇ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.- …

Leave a Reply

Your email address will not be published. Required fields are marked *

12 − 9 =