ಪ್ರಧಾನಿ ಮೋದಿ ಜನ್ಮದಿನ ನಿಮಿತ್ಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ.!
ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ನಿಮಿತ್ಯ ಬಿಜೆಪಿ ಹಮ್ಮಿಕೊಂಡಿರುವ ಸೇವಾ ಪಾಕ್ಷಿಕ ಕಾರ್ಯಕ್ರಮ ಅಂಗವಾಗಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸುಭಾಸ ಪಾಟೀಲ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಶಾಸಕರ ಕಚೇರಿ ಸಹಾಯಕ ಸುರೇಶ ಸನದಿ, ಮುಖ್ಯವೈದ್ಯಾಧಿಕಾರಿ ಡಾ. ರವೀಂದ್ರ ಅಂಟಿನ, ಮುಖಂಡರಾದ ಬಸವರಾಜ ಹಿರೇಮಠ, ಲಕ್ಕಪ್ಪ ಮಾಳಗಿ, ಯಲ್ಲಪ್ಪ ಬಂಗೆನ್ನವರ, ಬಾಳೇಶ ಗಿಡ್ಡನವರ, ಮಂಜುನಾಥ ಪ್ರಭುನಟ್ಟಿ, ಸಚೀನ ಕಮಟೇಕರ ಸೇರಿದಂತೆ ಅನೇಕರು ಇದ್ದರು.