Breaking News

ಅರ್ಹ ಫಲಾನುಭವಿಗಳಿಗೆ ಲಾಪ್ ಟಾಪ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

Spread the love

ಅರ್ಹ ಫಲಾನುಭವಿಗಳಿಗೆ ಲಾಪ್ ಟಾಪ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

 

ಯುವ ಭಾರತ ಸುದ್ದಿ,  ಗೋಕಾಕ್: ಇಲ್ಲಿಯ ನಗರಸಭೆ ಎಸ್ ಎಫ್ ಸಿ 7.25% ಮತ್ತು 24.10% ಅನುದಾನದಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಬಡ ಜನಾಂಗದ ಎಮ್ ಬಿ ಬಿ ಎಸ್ ಹಾಗೂ ಬಿಇ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲಾಪ್ ಟಾಪ್ ಗಳನ್ನು ಹಾಗೂ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ವಿತರಿಸಿದರು.  ನಗರದ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯ ಆವರಣದಲ್ಲಿ ಗುರುವಾರದಂದು ನಡೆದ ಸರಳ ಸಮಾರಂಭದಲ್ಲಿ ಅರ್ಹ ಫಲಾನು ಭವಿಗಳಿಗೆ ವಿತರಿಸಲಾಯಿತು. ಈ  ಸಂದರ್ಭದಲ್ಲಿ ನಗರಸಭೆ ಸದಸ್ಯರುಗಳಾದ ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತ್ರಿಗೊಲ್ಲರ, ಡಾ. ಜಮಾದಾರ, ಬಸವರಾಜ ಆರೇನ್ನವರ ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

five − one =