ಸಚಿವ ರಮೇಶ್ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ- ಪವಿತ್ರಾ ರಾಮಯ್ಯ..!!

ಯುವ ಭಾರತ ಸುದ್ದಿ, ಗೋಕಾಕ್ : ಭದ್ರ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಬುಧವಾರ ಭೇಟಿಯಾಗಿ, ಅಭಿನಂಧನೆ ಸಲ್ಲಿಸಿದರು.
ಸಚಿವರಿಗೆ ಸನ್ಮಾನಿಸಿದ ಅವರು, ಪ್ರಾಧಿಕಾರದ ವ್ಯಾಪ್ತಿಯ ಅಚ್ಚುಕಟ್ಟು ಭಾಗದ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ, ಅಧಿಕಾರಿಗಳು ರಚಿಸಿರುವ ಸುಮಾರು 400ಕೋಟಿ ರೂಗಳ ಕ್ರಿಯಾ ಯೋಜನೆಯ ಬಗ್ಗೆ ಹಾಗೂ ರೈತರಿಂದ ಬಂದಂತಹ ಅರ್ಜಿಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿ ಗಮನ ಸೆಳೆದರು.
ಇದಕ್ಕೆ ಸೂಕ್ತವಾಗಿ ಪ್ರತಿಕ್ರಿಯಿಸಿದ ಮಾನ್ಯ ಸಚಿವರು ನಿಮಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಹಾಗೂ ಕೂಡಲೇ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಸೂಚನೆ ನೀಡಿದರು.
YuvaBharataha Latest Kannada News