ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ಚೇಕನ್ನು ವಿತರಿಸಿದ-ರಮೇಶ ಜಾರಕಿಹೊಳಿ!!

ಯುವ ಭಾರತ ಸುದ್ದಿ, ಗೋಕಾಕ: ದಿ.23-4-2021ರಂದು ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಾದ ರಾಜನಕಟ್ಟಿ ಗ್ರಾಮದ ಅನುಸೂಯಾ ಬಾದರವಾಡಿ ಹಾಗೂ ಅಕ್ಕತಂಗೇರಹಾಳ ಗ್ರಾಮದ ಬಸವ್ವ ವ್ಯಾಪಾರಗಿ ಅವರಿಗೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳ ನಿಧಿ ನಾಲ್ಕು ಲಕ್ಷ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿ ಒಂದು ಲಕ್ಷ ಸೇರಿ ಒಟ್ಟು 5 ಲಕ್ಷ ರೂಗಳ ಚೇಕನ್ನು ಶುಕ್ರವಾರ ವಿತರಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರೇಡ್ 2 ತಹಶಿಲ್ದಾರ ಲಕ್ಷ್ಮಣ ಭೋವಿ, ಗ್ರಾಮ ಲೆಕ್ಕಾಧಿಕಾರಿ ಎಚ್ ಎಸ್ ಪಾಟೀಲ,ಅಶೋಕ ಗೋಣಿ, ಕಾಂತು ಎತ್ತಿನಮನಿ ಸೇರಿದಂತೆ ಅನೇಕರು ಇದ್ದರು.
YuvaBharataha Latest Kannada News