Breaking News

ಕನ್ನಡಪ್ರಭದ ವೆಂಕಟೇಶ ಪಾಗಾದಗೆ ವಿನ್ಯಾಸ ಭೂಷಣ, ಪಬ್ಲಿಕ ಟಿವಿ ಅರುಣಗೆ ಮಾಧ್ಯಮ ರತ್ನ ಪ್ರಶಸ್ತಿ

Spread the love

ಕನ್ನಡಪ್ರಭದ ವೆಂಕಟೇಶ ಪಾಗಾದಗೆ ವಿನ್ಯಾಸ ಭೂಷಣ, ಪಬ್ಲಿಕ ಟಿವಿ ಅರುಣಗೆ ಮಾಧ್ಯಮ ರತ್ನ ಪ್ರಶಸ್ತಿ

ಯುವ ಭಾರತ ಸುದ್ದಿ   ಬೆಳಗಾವಿ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ಬೆಂಗಳೂರು) ವಿಜಯಪುರ ಜಿಲ್ಲಾ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕು ಘಟಕದ ವತಿಯಿಂದ ಕೊಡಮಾಡುವ ೨೦೨೧-೨೧ನೇ ಸಾಲಿನ ಮಾಧ್ಯಮ ಕ್ಷೇತ್ರದಲ್ಲಿನ ವಿವಿಧ ಪ್ರಶಸ್ತಿಗಾಗಿ ಸಾಧಕರನ್ನು ಆಯ್ಕೆ ಮಾಡಿ ಪ್ರಕಟಿಸಲಾಗಿದೆ. ರಾಜ್ಯಮಟ್ಟದ ಮಾಧ್ಯಮ ರತ್ನ ಪ್ರಶಸ್ತಿಗೆ ಪಬ್ಲಿಕ ಟಿವಿ ಸುದ್ದಿವಾಹಿನಿ ಪತ್ರಕರ್ತ, ನಿರೂಪಕ ಅರುಣ ಬಡಿಗೇರ, ವಿನ್ಯಾಸ ಭೂಷಣ ಪ್ರಶಸ್ತಿಗೆ ಕನ್ನಡಪ್ರಭ ದಿನಪತ್ರಿಕೆ ಬೆಳಗಾವಿ ಆವೃತ್ತಿಯ ಹಿರಿಯ ಪುಟವಿನ್ಯಾಸಕ ವೆಂಕಟೇಶ ಸುರೇಶ ಪಾಗಾದ, ಪತ್ರಕರ್ತ ದಿ.ಡಾ.ನಾಗರಾಜ ಜಮಖಂಡಿ ಸ್ಮರಣಾರ್ಥ ವಿಜಯಪುರ ಜಿಲ್ಲೆಯ ಮಾಧ್ಯಮ ಕ್ಷೇತ್ರದಲ್ಲಿ ಸಾಧಕರೊಬ್ಬರಿಗೆ ನೀಡುವ ಮಾಧ್ಯಮ ಸಾಧಕ ಪ್ರಶಸ್ತಿಗೆ ವಿಜಯವಾಣಿ ಉಪಸಂಪಾದಕರಾದ ಈಶ್ವರ ಹನಗಂಡಿ ಸೇರಿದಂತೆ ಜೀವಮಾನ ಮಾಧ್ಯಮ ಸಾಧಕ ಪ್ರಶಸ್ತಿಗೆ ತಾಳಿಕೋಟಿಯ ಹಿರಿಯ ಪತ್ರಕರ್ತ ಜಿ.ಟಿ.ಘೋರ್ಪಡೆ ಮತ್ತು ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಿಕಾ ವಿತರಕ ಸಂಗಪ್ಪ ಬಸಪ್ಪ ಕತ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಸೆ.೪ರ ಭಾನುವಾರ ಮುದ್ದೇಬಿಹಾಳ ಪಟ್ಟಣದ ಎಪಿಎಂಸಿ ಮಂಗಲ ಭವನದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಮುದ್ದೇಬಿಹಾಳ ತಾಲೂಕು ಹಾಗೂ ವಿಜಯಪುರ ಜಿಲ್ಲಾ ಘಟಕಗಳ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ, ಗೌರವಿಸಲಾಗುವುದು ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾಧ್ಯಕ್ಷ ನಾರಾಯಣ ಮಾಯಾಚಾರಿ, ಮುದ್ದೇಬಿಹಾಳ ತಾಲೂಕು ಅಧ್ಯಕ್ಷ ಉಮೇಶ ಆಲಕೋಪ್ಪರ, ತಾಳಿಕೋಟಿ ತಾಲೂಕು ಅಧ್ಯಕ್ಷ ಅಂಬಾಜಿ ಘೋರ್ಪಡೆ ಪ್ರಟಣೆಯಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮ ಕಂಡು ಕಾಂಗ್ರೇಸ್‌ಗೆ ನಡುಕ.!

Spread the loveಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಗೋಕಾಕ ಮತಕ್ಷೇತ್ರದಲ್ಲಿ ಮತಯಾಚನೆ.! ಗೋಕಾಕ: ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ …

Leave a Reply

Your email address will not be published. Required fields are marked *

three × 5 =