Breaking News

ಕರ್ನಾಟಕದ ಪ್ರದೇಶದ ಮೇಲೆ ಮಹಾ ಕಣ್ಣು : ಕೊನೆಗೂ ಗಡಿ ಠರಾವ್ ಅಂಗೀಕರಿಸಿದ ಮಹಾರಾಷ್ಟ್ರ

Spread the love

ಕರ್ನಾಟಕದ ಪ್ರದೇಶದ ಮೇಲೆ ಮಹಾ ಕಣ್ಣು : ಕೊನೆಗೂ ಗಡಿ ಠರಾವ್ ಅಂಗೀಕರಿಸಿದ ಮಹಾರಾಷ್ಟ್ರ

ಯುವ ಭಾರತ ಸುದ್ದಿ ನಾಗಪುರ : ಬೆಳಗಾವಿ,ಕಾರವಾರ,ನಿಪ್ಪಾಣಿ, ಬೀದರ,ಭಾಲ್ಕಿ ಸಹಿತ ಕರ್ನಾಟಕದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ
ಸೇರಿಸಬೇಕು”ಎಂದು ಕೇಂದ್ರ ಸರಕಾರವನ್ನು
ಒತ್ತಾಯಿಸುವ ಸರ್ವಾನುಮತದ ನಿರ್ಣಯವನ್ನು ಇಂದು ಮಂಗಳವಾರ ಮಧ್ಯಾನ್ಹ ಮಹಾರಾಷ್ಟ್ರದ ನಾಗ್ಪೂರದಲ್ಲಿ ನಡೆದಿರುವ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಲಾಯಿತು.

ಅಧಿವೇಶನದಲ್ಲಿ ಗಡಿವಿವಾದ ಕುರುತು ವ್ಯಾಪಕ ಚರ್ಚೆ ನಡೆಯಿತು. ಮಹತ್ವದ ಅಂಶಗಳು ಇಲ್ಲಿವೆ;
1) ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಶ್ರೀ ಏಕನಾಥ ಶಿಂದೆ ಅವರು ಕರ್ನಾಟಕದ ಗಡಿಭಾಗದಲ್ಲಿ ನಡೆದ
ಚಳವಳಿಯಲ್ಲಿ ಮಡಿದ ಮರಾಠಿ ಭಾಷಿಕರನ್ನು ಹುತಾತ್ಮರೆಂದು ಪರಿಗಣಿಸಿ ಅವರಿಗೆ ಸ್ವಾತಂತ್ರ್ಯ ಯೋಧರ ಕುಟುಂಬಳಿಗೆ ನೀಡುವ ಮಾಸಿಕ
20 ಸಾವಿರ ರೂ.ಪಿಂಚಣಿ ನೀಡಲಾಗುವದು.

2)ಮಹಾರಾಷ್ಟ್ರದ ಜತ್ತ ತಾಲೂಕಿನ ಹಳ್ಳಿಗಳಿಗೆ ನೀರು ಪೂರೈಸುವ ಯೋಜನೆಗೆ ಎರಡು ಸಾವಿರ ಕೋ.ರೂ.ಗಳ
ಮಂಜೂರು ಮಾಡಲಾಗಿದೆ.

3)ಕರ್ನಾಟಕದ 865 ಹಳ್ಳಿ ಪಟ್ಟಣಗಳಲ್ಲಿ ವಾಸಿಸುವ ಮರಾಠಿಗರಿಗೆ ಮಹಾರಾಷ್ಟ್ರದಲ್ಲಿ ಎಲ್ಲ ರೀತಿಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲಾಗುವದು.ಅಲ್ಲದೇ
ಬೆಳಗಾವಿ ಸಹಿತ ಎಲ್ಲ ಗ್ರಾಮ ಪಟ್ಟಣಗಳಲ್ಲಿ
ನೋಂದಾಯಿತ ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವನ್ನು ಒದಗಿಸಲಾಗುವದು.

4)2004 ರಲ್ಲಿ ಮಹಾರಾಷ್ಟ್ರ ಸರಕಾರ ಸರ್ವೋನ್ನತ ನ್ಯಾಯಾಲಯದಲ್ಲಿ ದಾಖಲಿಸಿರುವ ಗಡಿವಿವಾದ ದಾವೆಯಲ್ಲಿ ವಾದಿಸುವ ಸಲುವಾಗಿ ಹಿರಿಯ
ಸಂವಿಧಾನ ತಙ್ಞರನ್ನು ನೇಮಿಸಲಾಗಿದೆ. ಹಿರಿಯ ನ್ಯಾಯವಾದಿ ಹರೀಶ ಸಾಳ್ವೆ ಅವರನ್ನೂ ಸಹ ಸಂಪರ್ಕಿಸಲಾಗಿದ್ದು ಅವರೂ ವಾದ ಮಂಡನೆಗೆ ಒಪ್ಪಿದ್ದಾರೆ.

5)”ಛಗನ್ ಭುಜಬಲ ಅವರೇ ನೀವೂ ಬೆಳಗಾವಿ ಗಡಿ ಚಳವಳಿಯಲ್ಲಿ ಲಾಠಿ ಏಟು ತಿಂದಿದ್ದೀರಿ.ನಾನೂ ಆಲ್ಲಿ
ಕಾರಾಗೃಹ ವಾಸ ಅನುಭವಿಸಿದ್ದೇನೆ” ಎಂದು ಶಿಂದೆ ಹೇಳಿದರು.

ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಾತಾನಾಡುತ್ತ ಒಂದು ಹಂತದಲ್ಲಿ ಸರ್ವೋನ್ನತ ನ್ಯಾಯಾಲಯದಲ್ಲಿ ಗಡಿವಿವಾದ ಪ್ರಕರಣ ಬಾಕಿಯಿದ್ದು
ನಾವು ಅಂಗೀಕರಿಸುವ ನಿರ್ಣಯವು ನ್ಯಾಯಾಂಗ ನಿಂದಣೆ ಆಗಬಹುದೆ? ಎಂಬುದನ್ನೂ ಯೋಚಿಸಬೇಕು ಎಂದರು.

ಡಿಸೆಂಬರ್ 14 ರಂದು ಕೇಂದ್ರ ಗೃಹಸಚಿವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ ನಂತರವೂ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿವಿವಾದವನ್ನು ಮತ್ತೆ ಮತ್ತೆ ಕೆದಕುತ್ತಿದ್ದಾರೆ ಎಂದು ಸದನದಲ್ಲಿ ಮಾತನಾಡಿದ ಮುಖಂಡರು ಆರೋಪಿಸಿದರು.

ಸಭಾಧ್ಯಕ್ಷರು ನಿರ್ಣಯವನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ‌ ಅಂಗೀಕಾರವಾಯಿತು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

17 + five =