Breaking News

ಕರ್ನಾಟಕದ ಸೋಲಿನ ನಂತರ ಚುನಾವಣೆ ಸನಿಹದಲ್ಲಿರುವ 4 ರಾಜ್ಯಗಳಲ್ಲಿ ಕಾರ್ಯತಂತ್ರ ಬದಲಿಸಲಿರುವ ಬಿಜೆಪಿ

Spread the love

ಕರ್ನಾಟಕದ ಸೋಲಿನ ನಂತರ ಚುನಾವಣೆ ಸನಿಹದಲ್ಲಿರುವ 4 ರಾಜ್ಯಗಳಲ್ಲಿ ಕಾರ್ಯತಂತ್ರ ಬದಲಿಸಲಿರುವ ಬಿಜೆಪಿ

ನವದೆಹಲಿ :
ಕರ್ನಾಟಕದ ವಿಧಾನಸಭೆ ಚುನಾವಣೆ ಫಲಿತಾಂಶವು ಈ ವರ್ಷಾಂತ್ಯದಲ್ಲಿ ನಡೆಯಲಿರುವ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಚಾರದ ಕಾರ್ಯತಂತ್ರ ವನ್ನು ಬದಲಾಯಿಸುವಂತೆ ಮಾಡಿದೆ ಎಂದು ವರದಿಯೊಂದು ಹೇಳಿದೆ.
ನಾಲ್ಕು ಪ್ರಮುಖ ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗಳು ವರ್ಷಾಂತ್ಯದ ಸಮಯದಲ್ಲಿ ನಡೆಯಲಿವೆ. ಇವುಗಳಲ್ಲಿ, ಮಧ್ಯಪ್ರದೇಶದಲ್ಲಿ ಮಾತ್ರ ಬಿಜೆಪಿ ಆಡಳಿತದಲ್ಲಿದೆ ಮತ್ತು ರಾಜಸ್ಥಾನದಲ್ಲಿ ಆಡಳಿತ ವಿರೋಧಿ ಅಲೆಯನ್ನು ತನ್ನ ಪರವಾಗಿ ಮಾಡಿಕೊಳ್ಳಲು ಬಿಜೆಪಿಯು ಬಯಸುತ್ತಿದೆ.
ನಾಲ್ಕು ರಾಜ್ಯಗಳಲ್ಲಿ ನಾಯಕತ್ವ ಮತ್ತು ಅಭ್ಯರ್ಥಿಗಳನ್ನು ನಿರ್ಧರಿಸುವಾಗ ಜಾತಿ ಸಮೀಕರಣಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲು ಬಿಜೆಪಿ ನಿರ್ಧರಿಸಿದೆ ಎಂದು ಪಕ್ಷದ ಹಿರಿಯ ನಾಯಕರು ಆಫ್ ದಿ ರೆಕಾರ್ಡ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಇದು ಕರ್ನಾಟಕದ ಚುನಾವಣೆಯಿಂದ ಪಾಠವಾಗಿದೆ. ಅಲ್ಲಿ ಬಿ.ಎಸ್. ಯಡಿಯೂರಪ್ಪ ಅವರನ್ನು ಉನ್ನತ ಹುದ್ದೆಯಿಂದ ಕೆಳಗಿಳಿಸಿದ ಮತ್ತು ಕೆಲ ನಾಯಕರಿಗೆ ಟಿಕೆಟ್ ನಿರಾಕರಿಸಿದ ನಿರ್ಧಾರದಿಂದ ಲಿಂಗಾಯತ ಮತವು ಕಾಂಗ್ರೆಸ್ ಕಡೆಗೆ ವಾಲಿತು. ಅಗತ್ಯವಿದ್ದರೆ, ಪಕ್ಷವು ಸಣ್ಣ ಪಕ್ಷಗಳೊಂದಿಗೆ ಚುನಾವಣಾ ಮೈತ್ರಿಗೆ ಪಕ್ಷವು ಮುಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾರ್ಯತಂತ್ರ ದಲ್ಲಿ ದೊಡ್ಡ ಬದಲಾವಣೆಯೆಂದರೆ, ಕೇಂದ್ರ ನಾಯಕರ ಮೇಲಿನ ಅಗಾಧ ಅವಲಂಬನೆಯ ಬದಲಿಗೆ ಸ್ಥಳೀಯ ನಾಯಕರ ಮೇಲೆ ಕೇಂದ್ರೀಕರಿಸುವುದು. ಯಾಕೆಂದರೆ ಸ್ಥಳೀಯ ನಾಯಕರಿಗೆ ಪ್ರಚಾರಕ್ಕೆ ಅವಕಾಶ ನೀಡಿದ್ದು ಕಾಂಗ್ರೆಸ್‌ಗೆ ಒಳ್ಳೆಯ ಫಲಿತಾಂಶ ನೀಡಿದೆ. ಮಧ್ಯಪ್ರದೇಶದಲ್ಲಿ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪಕ್ಷದ ಮುಖವಾಗಿ ಉಳಿಯುತ್ತಾರೆ ಆದರೆ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ, ನರೇಂದ್ರ ಸಿಂಗ್ ತೋಮರ್ ಮತ್ತು ಬಿ.ಡಿ. ಶರ್ಮಾ ಅವರಂತಹ ಇತರ ನಾಯಕರಿಗೆ ಪ್ರಾಮುಖ್ಯತೆ ನೀಡುವಂತೆ ಕೇಳಿಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಪ್ರಕ್ರಿಯೆಯಲ್ಲಿ ಕಮಲ ನಾಥ ಸರ್ಕಾರವನ್ನು ಉರುಳಿಸುವ ಮೂಲಕ 2020 ರಲ್ಲಿ ಬಿಜೆಪಿಗೆ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ನಿಷ್ಠಾವಂತರನ್ನು ಹೊರಗಿನವರಂತೆ ನೋಡಲಾಗಿದೆ. ಅದು ಬದಲಾಗಲಿದೆ ಎಂದು ಮೂಲಗಳು ತಿಳಿಸಿವೆ.
ರಾಜಸ್ಥಾನದಲ್ಲಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರಿಗೆ ಆದ್ಯತೆ ನೀಡಲಾಗುವುದು. ಆದರೆ ಕಿಶೋರಿಲಾಲ ಮೀನಾ, ಗಜೇಂದ್ರ ಸಿಂಗ್ ಶೇಖಾವತ್, ಸತೀಶ್ ಪೂನಿಯಾ ಮುಂತಾದ ವಿವಿಧ ಸಮುದಾಯಗಳಿಗೆ ಸೇರಿದ ರಾಜ್ಯ ನಾಯಕರಿಗೂ ಚುನಾವಣೆಯಲ್ಲಿ ಪ್ರಾಮುಖ್ಯತೆ ನೀಡಲಾಗುತ್ತದೆ.

ಛತ್ತೀಸ್‌ಗಢದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ಹಿರಿಯ ನಾಯಕ ಬ್ರಿಜ್‌ಮೋಹನ್ ಅಗರವಾಲ್, ಅರುಣ್ ಸಾವೊ ಅವರಿಗೆ ಪ್ರಾಮುಖ್ಯತೆ ನೀಡಲಾಗುವುದು ಮತ್ತು ತೆಲಂಗಾಣದಲ್ಲಿ ಬಂಡಿ ಸಜಯ್, ಇ ರಾಜೇಂದ್ರನ್, ಜಿ ಕಿಶನ್ ರೆಡ್ಡಿ ಅವರು ಪಕ್ಷದ ಪ್ರಮುಖ ಮುಖಗಳಾಗಿದ್ದಾರೆ. ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಮತ್ತು ಪಕ್ಷದ ಒಗ್ಗಟ್ಟಿನ ಮುಖವನ್ನು ಪ್ರಸ್ತುತಪಡಿಸಲು ರಾಜ್ಯ ನಾಯಕರಿಗೆ ಸೂಚಿಸಲಾಗುತ್ತದೆ ಕೇಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೆ, ಚುನಾವಣಾ ರಣತಂತ್ರ ರೂಪಿಸಲು ಸಾಮೂಹಿಕ ನೆಲೆ ಹೊಂದಿರುವ ಹಿರಿಯ ನಾಯಕರನ್ನು ಕಣಕ್ಕಿಳಿಸಲಾಗುವುದು. ಮಧ್ಯಪ್ರದೇಶದಲ್ಲಿ ಸರ್ಕಾರ ಮತ್ತು ಸಂಘಟನೆಯ ನಡುವೆ ಉತ್ತಮ ಸಮನ್ವಯತೆ ಇದೆ. ತಳಮಟ್ಟದಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಪ್ರಾಮುಖ್ಯತೆ ನೀಡಲಾಗುವುದು. ಸಮಸ್ಯೆಗಳು, ಭರವಸೆಗಳು ಮತ್ತು ಕಾರ್ಯತಂತ್ರವನ್ನು ನಿರ್ಧರಿಸುವಲ್ಲಿ ಅವರ ಪ್ರತಿಕ್ರಿಯೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮೂಲಗಳು ತಿಳಿಸಿವೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

five × one =