Breaking News

ಭಕ್ತರ ಅಶ್ರುತಾರ್ಪಣ ನಡುವೆ ಜೈನ ಮುನಿಗಳು ಪಂಚಭೂತಗಳಲ್ಲಿ ಲೀನ

Spread the love

ಭಕ್ತರ ಅಶ್ರುತಾರ್ಪಣ ನಡುವೆ ಜೈನ ಮುನಿಗಳು ಪಂಚಭೂತಗಳಲ್ಲಿ ಲೀನ

ಬೆಳಗಾವಿ :
ಚಿಕ್ಕೋಡಿ ತಾಲೂಕು ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಕಾಮ ಕುಮಾರ ನಂದಿ ಮಹಾರಾಜರ ಅಂತ್ಯಸಂಸ್ಕಾರ ರವಿವಾರ ಮಧ್ಯಾಹ್ನ ನಡೆದಿದೆ.

ಜೈನ ಸಂಪ್ರದಾಯದಂತೆ ಮುನಿ ಮಹಾರಾಜರ ಸಹೋದರನ ಪುತ್ರ ಭೀಮಗೊಂಡ ಉಗಾರೆ ಅವರು ಹಿರೇಕೋಡಿ ನಂದಿ ಪರ್ವತ ಆಶ್ರಮದ ಬಳಿಯ ಕೃಷಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿ ಮುನಿಗಳ ಪ್ರಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ನೀಡಿದರು.

ಚಿತೆಗೆ ಅಗ್ನಿಸ್ಪರ್ಶ ನೀಡಿದ ವೇಳೆ ಕೆಲ ಹೊತ್ತು ತುಂತುರು ಮಳೆ ಸುರಿದು ನಂತರ ಬಿಡುವು ಪಡೆದುಕೊಂಡಿತು. ಭಕ್ತರು ಅಗ್ನಿಸ್ಪರ್ಶವಾಗುವ ವೇಳೆ ಭಕ್ತರು ಣಮೋಕಾರ ಮಂತ್ರ ಪಠಿಸಿದರು.

ನಾಂದಣಿ ಜಿನಸೇನ ಭಟ್ಟಾರಕ ಸ್ವಾಮೀಜಿ, ಕೊಲ್ಲಾಪುರದ ಲಕ್ಷ್ಮೀ ಸೇನಾ ಭಟ್ಟಾರಕ ಸ್ವಾಮೀಜಿ, ವರೂರಿನ ಧರ್ಮಸೇನಾ ಭಟ್ಟಾರಕ ಸ್ವಾಮೀಜಿ, ಅಥಣಿ ಶಾಸಕ ಲಕ್ಷ್ಮಣ ಸವದಿ, ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ವೀಣಾ ಪಟ್ಟಣಕುಡಿ, ಸತೀಶ ಅಪ್ಪಾಜಿಗೌಡ, ಉತ್ತಮ್ ಪಾಟೀಲ ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

19 − 3 =