Breaking News

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ತೋಟಗಾರಿಕೆ ಚಟುವಟಿಕೆ ಕೈಗೊಳ್ಳಲು ಅರ್ಜಿ ಆಹ್ವಾನ

Spread the love

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ತೋಟಗಾರಿಕೆ ಚಟುವಟಿಕೆ ಕೈಗೊಳ್ಳಲು ಅರ್ಜಿ ಆಹ್ವಾನ

ಬೆಳಗಾವಿ :
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ೨೦೨೩-೨೪ನೇ ಸಾಲಿಗೆ ತೋಟಗಾರಿಕೆ ಚಟುವಟಿಕೆಗಳಾದ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಕೂಲಿ ಮತ್ತು ಸಾಮಗ್ರಿ ವೆಚ್ಚವನ್ನು ನೀಡಲಾಗುತ್ತಿದೆ.
ಸದರಿ ಯೋಜನೆಯಡಿ ದ್ರಾಕ್ಷಿ, ಬಾಳೆ, ದಾಳಿಂಬೆ, ಮಾವು, ಸೀಬೆ, ಚಿಕ್ಕು, ನಿಂಬೆ, ಡ್ರಾಗನ್, ಕರಿಬೇವು, ಗುಲಾಬಿ, ನುಗ್ಗೆ, ಜಾಮೂನು, ಹುಣಸೆ, ಸೀತಾಫಲ, ಗೇರು, ತೆಂಗು, ಅಡಿಕೆ, ತಾಳೆ, ಪಪ್ಪಾಯಿ, ಕೋಕೊ, ಹಲಸು, ಕಾಫಿ ಹಾಗೂ ಅಪ್ರಧಾನ ಹಣ್ಣಿನ ಬೆಳೆಗಳಾದ ನೇರಳೆ, ನೆಲ್ಲಿ, ಬೆಣ್ಣೆ ಹಣ್ಣು, ರಾಮಬುತಾನ, ಅಪ್ಪೆಮಿಡಿ ಬೆಳೆಗಳು ಮತ್ತು ಸಾಂಬಾರು ಬೆಳೆಗಳಾದ ದಾಲಚಿನ್ನಿ, ಲವಂಗ, ಕಾಳುಮೆಣಸು, ಜಾಯಿಕಾಯಿ, ಸರ್ವಸಾಂಬಾರ ಬೆಳೆಗಳ ಹೊಸ ತೋಟಗಳನ್ನು ಅಭಿವೃದ್ಧಿಪಡಿಸಲು ಹಾಗೂ ವಿವಿಧ ತೋಟಗಾರಿಕೆ ಬೆಳೆಗಳಾದ ಮಾವು, ಚಿಕ್ಕು, ತೆಂಗು, ನಿಂಬೆ, ಅಡಿಕೆ, ತಾಳೆ ಮತ್ತು ಗೋಡಂಬಿ ಬೆಳೆಗಳ ಪುನಃಶ್ಚೇತನ ಕಾಮಗಾರಿಗಳನ್ನು ಸಹ ಸದರಿ ಯೋಜನೆಯಲ್ಲಿ ತೆಗೆದುಕೊಳ್ಳಲು ಒಂದು ಒಳ್ಳೆಯ ಸದಾವಕಾಶವಿರುತ್ತದೆ.
ಸದರಿ ತೋಟಗಳಿಗೆ ನೀರಾವರಿ ಅನುಕೂಲಕ್ಕಾಗಿ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಲು ಸಹ ಇಲಾಖೆಯ ಪಿ.ಎಂ.ಕೆ.ಎಸ್.ವೈ. ಯೋಜನೆಯಡಿ ಸಹಾಯಧನವನ್ನು ನೀಡಲಾಗುವುದು. ಆಸಕ್ತ ರೈತರು ಹೆಚ್ಚಿನ ಮಾಹಿತಿ ಹಾಗೂ ಅರ್ಹತಾ ಮಾನದಂಡದ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ತಾಲೂಕಿನ ಕಛೇರಿಯನ್ನು ಹಾಗೂ ರೈತ ಸಂಪರ್ಕ ಕೇಂದ್ರ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

twenty − 9 =