Breaking News

Yuva Bharatha

ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ದುರ್ಮರಣ

ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ದುರ್ಮರಣ ಬೆಳಗಾವಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್‌ ತಗುಲಿ ಯುವಕ ಮೃತಪಟ್ಟ ಘಟನೆ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿಯಲ್ಲಿ ಗುರುವಾರ ನಡೆದಿದೆ. ಆಕಾಶ ಶಿವದಾಸ್ ಸಂಕಪಾಳ (27) ಎಂಬ ಯುವಕ ಜುಲೈ 27 ರಂದು ಬೆಳಗ್ಗೆ 8:45 ರ ಸುಮಾರಿಗೆ ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ತಗುಲಿ ಮೃತ ಪಟ್ಟಿದ್ದಾನೆ ಎಂದು ಆತನ ತಂದೆ ಶಿವದಾಸ್ ಬಳವಂತ ನಿಪ್ಪಾಣಿ …

Read More »

ಲಿಂಗರಾಜ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ : ಭಾರತ ಸಾರ್ವಭೌಮತ್ವಕ್ಕೆ ಧಕ್ಕೆ ಬಂದರೆ ಸಹಿಸಲಾರದು : ಚೆನ್ನಪ್ಪಗೋಳ

ಲಿಂಗರಾಜ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ : ಭಾರತ ಸಾರ್ವಭೌಮತ್ವಕ್ಕೆ ಧಕ್ಕೆ ಬಂದರೆ ಸಹಿಸಲಾರದು : ಚೆನ್ನಪ್ಪಗೋಳ ಬೆಳಗಾವಿ : ಭಾರತ ಇಲ್ಲಿಯವರೆಗೆ ಯಾವ ದೇಶದ ಮೇಲೆಯೂ ದಾಳಿ ಮಾಡಿಲ್ಲ. ಆದರೆ ತನ್ನ ಮೇಲೆ ದಾಳಿ ಮಾಡಿದ ವೈರಿಗಳನ್ನು ತಿರುಗಿ ನೋಡುವಂತೆ ಪಾಠ ಕಲಿಸಿದೆ ಎಂದು ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಎಚ್.ಎಂ.ಚೆನ್ನಪ್ಪಗೋಳ ಹೇಳಿದರು. ಲಿಂಗರಾಜ ಕಾಲೇಜಿನಲ್ಲಿ ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ಘಟಕದಿಂದ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ ದಿವಸ್‌ದ 24 ನೇ …

Read More »

ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ

ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ ಬೆಳಗಾವಿ : ಬೆಂಗಳೂರಿನ ಐಎಫ್‌ಐಎಂ ಕಾನೂನು ಶಾಲೆಯು ಏರ್ಪಡಿಸಿದ್ದ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಬೆಳಗಾವಿಯ ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಜೇತರಾಗಿ ಸಾಧನೆ ಮೆರೆದಿದ್ದಾರೆ. ದೇಶದಾದ್ಯಂತ 34 ಕ್ಕೂ ಹೆಚ್ಚು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿ ಮತ್ತು ಬೆಳಗಾವಿಯ ಆರ್‌ಎಲ್ ಕಾನೂನು ಕಾಲೇಜು ನಡುವೆ …

Read More »

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ  ಅಂತರ ಕಾಲೇಜು ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿ

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ  ಅಂತರ ಕಾಲೇಜು ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿ ಬೆಳಗಾವಿ : ವಿದ್ಯಾರ್ಥಿಗಳು ತಮ್ಮ ಕ್ರೀಡಾ ಕೌಶಲವನ್ನು ಅಭಿವೃದ್ಧಿಪಡಿಸಲು ವಿಶ್ವವಿದ್ಯಾಲಯ ನೀಡುವ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ನಿರ್ದೇಶಕ ಡಾ.ಜಗದೀಶ ಗಸ್ತಿ ಸಲಹೆ ನೀಡಿದರು. ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಮತ್ತು ಕೆಎಲ್‌ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯಗಳು ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡ ಅಂತರ ಕಾಲೇಜು ಟೇಬಲ್ ಟೆನಿಸ್ …

Read More »

ಪೊಲೀಸರಿಗೆ ಸಿಹಿ ಸುದ್ದಿ

ಪೊಲೀಸರಿಗೆ ಸಿಹಿ ಸುದ್ದಿ ಬೆಂಗಳೂರು : ತಮ್ಮ ಹುಟ್ಟುಹಬ್ಬ ದಿನ ಕುಟುಂಬದವರಿಗೆ ಸಮಯ ನೀಡಲಾಗದೆ ಪರದಾಡುತ್ತಿದ್ದ ಪೊಲೀಸರಿಗೆ ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಶುಭಸುದ್ದಿ ನೀಡಿದ್ದಾರೆ. ಸದ್ಯಕ್ಕೆ ಇದು ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವ್ಯಾಪ್ತಿಯಲ್ಲಿ ಜಾರಿಗೆ ಬರಲಿದೆ. ಇನ್ನು ಮುಂದೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲು ಒಂದು ದಿನ ರಜೆ ನೀಡುವ ನಿರ್ಧಾರಕ್ಕೆ ಬೆಂಗಳೂರು ಆಯುಕ್ತರು ಬಂದಿದ್ದು ಆಗಸ್ಟ್ 1 …

Read More »

ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ

ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ ಬೆಂಗಳೂರು : ಸಿ.ಟಿ. ರವಿ ಪಕ್ಷದ ರಾಜ್ಯಾಧ್ಯಕ್ಷರಾಗಬೇಕು, ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಪಕ್ಷ ನಾಯಕರಾಗಬೇಕು ಎಂಬ ಚರ್ಚೆ ಬಿಜೆಪಿ ಸಭೆಯಲ್ಲಿ ಆಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಚ್. ಡಿ. ಕುಮಾರಸ್ವಾಮಿ ಪ್ರತಿಪಕ್ಷ ನಾಯಕರಾಗುತ್ತಾರೆ ಎಂಬ ಸುದ್ದಿ ಇದೆಯಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, ಕುಮಾರಸ್ವಾಮಿ …

Read More »

ಗುಡ್ಡ ಕುಸಿತ, ಪ್ರವಾಹ ಮುನ್ಸೂಚನೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ

ಗುಡ್ಡ ಕುಸಿತ, ಪ್ರವಾಹ ಮುನ್ಸೂಚನೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ ಬೆಳಗಾವಿ : ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಖಾನಾಪುರ ಸೇರಿದಂತೆ ಜಿಲ್ಲೆಯ ಜನರು ಕೂಡ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್)ದ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಬೆಳಗಾವಿ ಜಿಲ್ಲೆಯ …

Read More »

ಮಹದಾಯಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ: ಗೋವಾ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ಗೋವಾ ಪೀಠ ಆದೇಶ

ಮಹದಾಯಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ: ಗೋವಾ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ಗೋವಾ ಪೀಠ ಆದೇಶ ಪಣಜಿ : ಮಹದಾಯಿ ವನ್ಯಜೀವಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ ಮೂರು ತಿಂಗಳೊಳಗೆ ಅಧಿಸೂಚನೆ ಹೊರಡಿಸುವಂತೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಸೋಮವಾರ ಗೋವಾ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಅಧಿಸೂಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪಿನಲ್ಲಿ …

Read More »

ಪ್ರಧಾನಿ ಮೋದಿಗಾಗಿ ಅಭಿಮಾನಿಯಿಂದ ಉಡುಪಿ ಕೃಷ್ಣನಿಗೆ ವಜ್ರ ಕವಚ ಸೇವೆ

ಪ್ರಧಾನಿ ಮೋದಿಗಾಗಿ ಅಭಿಮಾನಿಯಿಂದ ಉಡುಪಿ ಕೃಷ್ಣನಿಗೆ ವಜ್ರ ಕವಚ ಸೇವೆ ಉಡುಪಿ : ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಬೇಕು ಹಾಗೂ ಅವರ ಆರೋಗ್ಯ ವೃದ್ಧಿಯಾಗಬೇಕು ಎಂದು ಪ್ರಾರ್ಥಿಸಿ, ಮೋದಿ ಅಭಿಮಾನಿಯೊಬ್ಬರು ಉಡುಪಿ ಶ್ರೀ ಕೃಷ್ಣ ದೇವರಿಗೆ ವಜ್ರಕವಚ ಸೇವೆ ಸಲ್ಲಿಸಿದ್ದಾರೆ. ದೇಶದ 21 ವಿರೋಧ ಪಕ್ಷಗಳು ಜೊತೆಗೂಡಿ ಮೋದಿ ಅವರನ್ನು ಸೋಲಿಸಲು ತಂತ್ರ ಹೆಣೆದಿವೆ. ಮೋದಿ ಅವರ ಆಡಳಿತದಲ್ಲಿ ದೇಶ ಸುಭದ್ರವಾಗುತ್ತಿದೆ. ಆದ್ದರಿಂದ ಮುಂದಿನ ಲೋಕಸಭಾ …

Read More »

ಬೆಳಗಾವಿ ಬಿ.ವಿ..ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಅಂತರ ಕಾಲೇಜು ಟೇಬಲ್ ಟೆನ್ನಿಸ್ ಪಂದ್ಯಾವಳಿ ಆಯೋಜನೆ

ಬೆಳಗಾವಿ ಬಿ.ವಿ..ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಅಂತರ ಕಾಲೇಜು ಟೇಬಲ್ ಟೆನ್ನಿಸ್ ಪಂದ್ಯಾವಳಿ ಆಯೋಜನೆ ಬೆಳಗಾವಿ : ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ಕೆಎಲ್‌ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯಗಳ ವತಿಯಿಂದ ಮಂಗಳವಾರ ಅಂತರ ಕಾಲೇಜು ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು (ಪುರುಷ ಮತ್ತು ಮಹಿಳೆಯರು) ಆಯೋಜಿಸಿತ್ತು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಟೇಬಲ್ ಟೆನ್ನಿಸ್ ಸಂಸ್ಥೆ ಉಪಾಧ್ಯಕ್ಷರು ಮತ್ತು ಬೆಳಗಾವಿ ಜಿಲ್ಲಾ ಟೇಬಲ್ ಟೆನ್ನಿಸ್ ಸಂಸ್ಥೆ ಗೌರವ ಕಾರ್ಯದರ್ಶಿ …

Read More »