ಮತಚಲಾವಣೆ ಅತ್ಯಂತ ಪವಿತ್ರ ಕಾರ್ಯ : ಡಾ. ಎಸ್.ಎಸ್. ತೇರದಾಳ ಯುವ ಭಾರತ ಸುದ್ದಿ ಬೆಳಗಾವಿ : ಪ್ರಜಾಪ್ರಭುತ್ವದ ಯಶಸ್ಸಿಗೆ ಮತಚಲಾವಣೆಯು ಅತ್ಯಂತ ನಿರ್ಣಾಯಕವಾದುದು. ಮತಚಲಾವಣೆಯಲ್ಲಿ ದೇಶದ ಭವಿಷ್ಯವಿದೆ ಎಂದು ಪ್ರಾಚಾರ್ಯ ಡಾ. ಶಂಕರ ಎಸ್. ತೇರದಾಳ ಅಭಿಪ್ರಾಯ ಪಟ್ಟರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ, ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಮತದಾರರ ಜಾಗೃತ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ …
Read More »ಪದ್ಮ ಪ್ರಶಸ್ತಿ ಘೋಷಣೆ
ಪದ್ಮ ಪ್ರಶಸ್ತಿ ಘೋಷಣೆ ಯುವ ಭಾರತ ಸುದ್ದಿ ದೆಹಲಿ: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. 2023ನೇ ಸಾಲಿನ ಪದ್ಮಶ್ರೀ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗೆ ಹಲವರಿಗೆ ಆಯ್ಕೆ ಮಾಡಲಾಗಿದೆ. ಸಾಧಕರಿಗೆ ರಾಷ್ಟ್ರಪತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸದ್ಯಕ್ಕೆ 26 ಮಂದಿಯ ಹೆಸರನ್ನು ಘೋಷಣೆ ಮಾಡಲಾಗಿದೆ. ರಾಜ್ಯದ ರಾಣಿ ಮಾಚಯ್ಯ ಹಾಗೂ ತಮಟೆಯ ತಂದೆ ಎಂದು ಪ್ರಖ್ಯಾತರಾದ ಮುನಿ ವೆಂಕಟಪ್ಪ ಅವರಿಗೆ …
Read More »ರಮೇಶ ಜಾರಕಿಹೊಳಿ ದಾಖಲೆ ಮತಗಳ ಲೀಡ್ ಪಡೆಯಲು ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಳಿಸಿ-ಶಾಸಕ ಪಿ ರಾಜೀವ.!
ರಮೇಶ ಜಾರಕಿಹೊಳಿ ದಾಖಲೆ ಮತಗಳ ಲೀಡ್ ಪಡೆಯಲು ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಳಿಸಿ-ಶಾಸಕ ಪಿ ರಾಜೀವ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ದಾಖಲೆಯ ಗೆಲುವಿನ ಅಂತರವನ್ನು ಇಡಿ ರಾಜ್ಯವೇ ನೋಡಲು ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಂಘಟನೆ ಮಾಡಿ ಅವರು ಮಾಡಿರುವ ಪ್ರಗತಿಪರ ಕಾರ್ಯಗಳ ಜನರ ಮನೆ ಮನಗಳಿಗೆ ತಲುಪಿಸುವ ಕಾರ್ಯಮಾಡಬೇಕು ಎಂದು ಕುಡಚಿ ಮತಕ್ಷೇತ್ರದ ಶಾಸಕ ಪಿ ರಾಜೀವ ಹೇಳಿದರು. ಅವರು, ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲಗಳ …
Read More »ಬೃಹತ್ ಜನಜಾಗೃತಿ ಸಮಾವೇಶ
ಬೃಹತ್ ಜನಜಾಗೃತಿ ಸಮಾವೇಶ ಯುವ ಭಾರತ ಸುದ್ದಿ ಬೆಳಗಾವಿ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸುಕ್ಷೇತ್ರ ತಂಗಡಗಿಯ ಶ್ರೀ ಹಡಪದ ಅಪ್ಪಣ್ಣ ಮಹಾ ಸಂಸ್ಥಾನ ಮಠದ ಆವರಣದಲ್ಲಿ ಫೆ. 1ರಂದು ಸಮುದಾಯ ಭವನ ಉದ್ಘಾಟನೆ, ನೂತನ ಕಟ್ಟಡದ ಅಡಿಗಲ್ಲು ಹಾಗೂ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯ ಉಪಾಧ್ಯಕ್ಷ ಸಂತೋಷ ಹಡಪದ ತಿಳಿಸಿದರು. ಬುಧವಾರ ಬೆಳಗಾವಿಯ …
Read More »ದೆಹಲಿ ಗಣರಾಜ್ಯೋತ್ಸವಕ್ಕೆ ಪಂಗಣ್ಣವರ ಅವರಿಗೆ ಅಹ್ವಾನ
ದೆಹಲಿ ಗಣರಾಜ್ಯೋತ್ಸವಕ್ಕೆ ಪಂಗಣ್ಣವರ ಅವರಿಗೆ ಅಹ್ವಾನ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿಯ ನಿವೃತ್ತ ಪ್ರೊ. ಡಾ. ಎ.ವೈ.ಪಂಗಣ್ಣವರ ಅವರನ್ನು ಈ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರದಿಂದ ಆಮಂತ್ರಿಸಲಾಗಿದೆ. ಬುಡಕಟ್ಟು ಜನಾಂಗದ ಸಂಶೋದನಾ ಸಂಸ್ಥೆ ಶಿಫಾರಸ್ಸಿನ ಮೇರೆಗೆ ಈ ಆಯ್ಕೆ ಮಾಡಲಾಗಿದ್ದು, ಬುಡಕಟ್ಟು ಜನಾಂಗದ ಸಂಶೋದನೆಯಲ್ಲಿ ಡಾ.ಪಂಗಣ್ಣವರ ಅವರು ಸಲ್ಲಿಸಿದ ಸೇವೆ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸಾಧನೆಯನ್ನು ಪರಿಗಣಿಸಿ ಆಯ್ಕೆಯನ್ನು ಮಾಡಲಾಗಿದೆ. ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ …
Read More »ಗೋಕಾಕ : ರಾಷ್ಟ್ರೀಯ ಮತದಾರರ ದಿನ ಉದ್ಘಾಟನೆ
ಗೋಕಾಕ : ರಾಷ್ಟ್ರೀಯ ಮತದಾರರ ದಿನ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ : ನಮ್ಮ ದೇಶದ ಮತದರರನ್ನು ಸಬಲೀಕರಣ, ಜಾಗರೂಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುತ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು. ಬುಧವಾರದಂದು ತಾಲೂಕಾಡಳಿತ,ತಾಪಂ, ನಗರಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು …
Read More »ಬೆಳಗಾವಿಯಲ್ಲಿ ಜ. 28, 29 ರಂದು ಅಖಿಲ ಕರ್ನಾಟಕ ಜೈನ ಸಾಹಿತ್ಯ ಸಮ್ಮೇಳನ
ಬೆಳಗಾವಿಯಲ್ಲಿ ಜ. 28, 29 ರಂದು ಅಖಿಲ ಕರ್ನಾಟಕ ಜೈನ ಸಾಹಿತ್ಯ ಸಮ್ಮೇಳನ ಯುವ ಭಾರತ ಸುದ್ದಿ ಬೆಳಗಾವಿ : ಭರತೇಶ ಶಿಕ್ಷಣ ಸಂಸ್ಥೆ ಕನ್ನಡ ನಾಡು, ನುಡಿ, ಏಳ್ಗಗೆಗಾಗಿ ಹತ್ತಾರು ಕಾರ್ಯಕ್ರಮಗಳನ್ನೂ ಕಳೆದ 50 ವರ್ಷದುದ್ದಕ್ಕೂ ಆಯೋಜಿಸುತ್ತ ಬಂದಿದೆ. ಜೈನಧರ್ಮದ ಪ್ರಸಾರ, ಪ್ರಚಾರಕ್ಕಾಗಿ ಮೂಂಚೂಣಿಯಲ್ಲಿದೆ. ಭಟ್ಟಾರಕ ಪರಂಪರೆಯನ್ನು ಮುಂದುವರೆಸಲು ಸಾಕಷ್ಟು ಪ್ರಯತ್ನಪಟ್ಟಿದೆ. ಕನ್ನಡ ವಿಶ್ವವಿದ್ಯಾಲಯ ಹಂಪಿಯ ಹಿರಿತನದಲ್ಲಿ ಯಕ್ಷ-ಯಕ್ಷಣಿಯರ ಪರಿಕಲ್ಪನೆ, ಜೈನ ಶಾಸನಗಳು, ಚಂಪು ಕಾವ್ಯ ಕುರಿತು ಹಾಗೂ …
Read More »ರಕ್ತದಾನವೇ ಶ್ರೇಷ್ಠ ದಾನ
ರಕ್ತದಾನವೇ ಶ್ರೇಷ್ಠ ದಾನ ಯುವ ಭಾರತ ಸುದ್ದಿ ಬೆಳಗಾವಿ : ಎಲ್ಲ ದಾನಗಳಲ್ಲಿ ರಕ್ತದಾನ ಅತ್ಯಮೂಲ್ಯವಾದುದು. ಇದರಿಂದ ದೈಹಿಕ ಆರೋಗ್ಯವು ಉತ್ತಮವಾಗುವದಲ್ಲದೇ ತನ್ನಿಂದ ಇನ್ನೊಬ್ಬರಿಗೆ ಜೀವದಾನವಾಯಿತು ಎಂಬ ಆತ್ಮ ಸಂತೋಷವನ್ನು ಹೊಂದಬಹುದಾಗಿದೆ ಎಂದು ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ರಕ್ತಭಂಡಾರದ ಅಧಿಕಾರಿ ಡಾ. ಅಶೋಕ ಅಲತಗಿ ಹೇಳಿದರು. ನಗರದ ಉದ್ಯಮಬಾಗ ಅಶೋಕ ಐರನ್ ನ ಪ್ಲಾಂಟ 3 ರಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. 18 ವರ್ಷ …
Read More »ಎತ್ತುಗಳ ಮೂಕ ರೋಧನೆಗೆ ಸರಕಾರ ಹಾಕುವುದೇ ಕಡಿವಾಣ…..?
ಎತ್ತುಗಳ ಮೂಕ ರೋಧನೆಗೆ ಸರಕಾರ ಹಾಕುವುದೇ ಕಡಿವಾಣ…..? ಸಿದ್ದರೂಢ ಬಣ್ಣದ, ರಡ್ಡೇರಹಟ್ಟಿ : ಕೃಷಿ ಕಾಯಕದೊಂದಿಗೆ ಎತ್ತುಗಳನ್ನು ತಮ್ಮ ಜೀವಕ್ಕಿಂತ ಹೆಚ್ಚಾಗಿ ಕಾಳಜಿಯಿಂದ ಸಾಕಿ ಸಲಹುತ್ತಿದ್ದ ರೈತರು ಇಂದು ತಮ್ಮ ಸ್ವಾರ್ಥಕ್ಕಾಗಿ ದಯೆಯನ್ನು ಮರೆತು ಮೂಕ ಜಾನುವಾರಗಳನ್ನು ಇಟ್ಟುಕೊಂಡು ಹಣ ಗಳಿಕೆಯ ಆಸೆಗಾಗಿ ಅವುಗಳಿಗೆ ಹಿಂಸೆ ನೀಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ – ಕಾಗವಾಡ ತಾಲೂಕಿನಲ್ಲಿ ಐದಕ್ಕೂ ಹೆಚ್ಚು ಕಬ್ಬಿನ ಕಾರ್ಖಾನೆಗಳಲ್ಲಿ ಎತ್ತುಗಳು ಕಬ್ಬನ್ನು ಸಾಗಾಣಿಕೆ ಮಾಡುತ್ತಿರುವ ಈ ದೃಶ್ಯದಲ್ಲಿನ …
Read More »ಹೊರನಾಡು ಕನ್ನಡಿಗರ ಶೈಕ್ಷಣಿಕ, ಉದ್ಯೋಗ ಸಮಸ್ಯೆ ಕುರಿತು ಸಭೆ
ಹೊರನಾಡು ಕನ್ನಡಿಗರ ಶೈಕ್ಷಣಿಕ, ಉದ್ಯೋಗ ಸಮಸ್ಯೆ ಕುರಿತು ಸಭೆ ಯುವ ಭಾರತ ಸುದ್ದಿ ಬೆಂಗಳೂರು : ಹೊರನಾಡು ಕನ್ನಡಿಗರು ಎದುರಿಸುತ್ತಿರುವ ಶೈಕ್ಷಣಿಕ ಮತ್ತು ಉದ್ಯೋಗ ಸಮಸ್ಯೆಗಳನ್ನು ಚರ್ಚಿಸಲು ಇಂದು ಬೆಂಗಳೂರಿನ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನೆರೆಯ ಆರು ರಾಜ್ಯಗಳ ಕನ್ನಡ ಪರ ಸಂಘಟನೆಗಳ ಸಭೆ ನಡೆಯಿತು. ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ ಅಧ್ಯಕ್ಷತೆಯಲ್ಲಿ ನಡೆದ ಇಂದಿನ ಸಭೆಯಲ್ಲಿ ಮಹಾರಾಷ್ಟ್ರ, ಗೋವೆ,ಆಂಧ್ರಪ್ರದೇಶ,ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಸುಮಾರು 50 …
Read More »