Breaking News

Yuva Bharatha

ಶುಕ್ರವಾರದಿಂದ ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಶುಕ್ರವಾರದಿಂದ ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯುವ ಭಾರತ ಸುದ್ದಿ ಹಾವೇರಿ: ಹಾವೇರಿಯಲ್ಲಿ ಆರಂಭವಾಗಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶುಕ್ರವಾರ(ಜನವರಿ 6)ದಿಂದ ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಹಿರಿಯ ಕವಿ ಡಾ.ದೊಡ್ಡರಂಗೇಗೌಡ ಅವರ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದ್ದು, ಹಾವೇರಿ-ಹುಬ್ಬಳ್ಳಿ ರಸ್ತೆಯ ಶ್ರೀ ಅಜ್ಜಯ್ಯ ದೇವಸ್ಥಾನದ ಎದುರು ವೇದಿಕೆ ಸಿದ್ಧವಾಗಿದ್ದು, ಅಕ್ಷರ ಜಾತ್ರೆಗೆ …

Read More »

ಸಾಹಿತ್ಯ ಸಮ್ಮೇಳನದಲ್ಲಿ ಅವಧಿ ಮೀರಿ ಮಾತನಾಡಿದರೆ ಮೈಕ್ ಆಫ್ !

ಸಾಹಿತ್ಯ ಸಮ್ಮೇಳನದಲ್ಲಿ ಅವಧಿ ಮೀರಿ ಮಾತನಾಡಿದರೆ ಮೈಕ್ ಆಫ್ ! ಯುವ ಭಾರತ ಸುದ್ದಿ ಹಾವೇರಿ : ಹಾವೇರಿಯಲ್ಲಿ ಜ.6 ರಿಂದ ಆರಂಭವಾಗುವ ಸಾಹಿತ್ಯ ಸಮ್ಮೇಳನದ ಉದ್ಘಾಟನೆ, ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಮಯ ಪರಿಪಾಲನೆಯ ಪರಂಪರೆಗೆ ಸಾಹಿತ್ಯ ಪರಿಷತ್ತು ಒತ್ತು ನೀಡಿದೆ. ಸಮಯ ಮಿತಿ ಮೀರುವ ಭಾಷಣಕಾರರಿಗೆ ಕೆಂಪು ದೀಪದ ಎಚ್ಚರಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಕೆಂಪು ದೀಪದ ಎಚ್ಚರಿಕೆ ಮರೆತು ಮಾತನಾಡಿದರೆ ಸ್ವಯಂ ಚಾಲಿತವಾಗಿ ಮೈಕ್ ಆಫ್ ಆಗಲಿದೆ. …

Read More »

ಮನ್ನಿಕೇರಿ : ಮಹಾಂತಲಿಂಗೇಶ್ವರ ಸಭಾ ಭವನ, ಪ್ರಸಾದ ನಿಲಯ, ಅತಿಥಿ ಗೃಹ, ಜಾತ್ಯಾತೀತ ಹಿಂದೂ ಸಮಾವೇಶ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಮನ್ನಿಕೇರಿ : ಮಹಾಂತಲಿಂಗೇಶ್ವರ ಸಭಾ ಭವನ, ಪ್ರಸಾದ ನಿಲಯ, ಅತಿಥಿ ಗೃಹ, ಜಾತ್ಯಾತೀತ ಹಿಂದೂ ಸಮಾವೇಶ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಸದ್ಭಳಕೆ ಮಾಡಿಕೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ಬೆಂಕಿ ಹೊತ್ತಿಕೊಂಡು ಸಂಪೂರ್ಣ ಕರಕಲಾದ ಬಸ್

ಬೆಂಕಿ ಹೊತ್ತಿಕೊಂಡು ಸಂಪೂರ್ಣ ಕರಕಲಾದ ಬಸ್ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹತ್ತರಗಿ ಟೋಲ್ ನಾಕಾ ಸಮೀದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ. ಕೊಲ್ಲಾಪುರ ಕಡೆಯಿಂದ ಬೆಳಗಾವಿ ಕಡೆಗೆ ಗುರುವಾರ ಸಂಜೆ ವೇಳೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸು ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ …

Read More »

ಸಿಎಂಗೆ 24 ಗಂಟೆಗಳ ಗಡುವು ಕೊಟ್ಟ ಯತ್ನಾಳ

ಸಿಎಂಗೆ 24 ಗಂಟೆಗಳ ಗಡುವು ಕೊಟ್ಟ ಯತ್ನಾಳ ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು 24 ಗಂಟೆಗಳ ಗಡುವು ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ತಾಯಿ ಮೇಲೆ ಆಣೆ ಮಾಡಿದಂತೆ ನಡೆದುಕೊಳ್ಳಲಿ. ಇಲ್ಲದಿದ್ದರೆ ಅವರು ಮತ್ತು ಬಿಜೆಪಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. …

Read More »

ಶ್ರೀ ಸಿದ್ದೇಶ್ವರ ಸ್ವಾಮೀಜಿ ಹಾಕಿಕೊಟ್ಟ ದಾರಿಯಲ್ಲಿ ನಡೆಯೋಣ

ಶ್ರೀ ಸಿದ್ದೇಶ್ವರ ಸ್ವಾಮೀಜಿ ಹಾಕಿಕೊಟ್ಟ ದಾರಿಯಲ್ಲಿ ನಡೆಯೋಣ ಯುವ ಭಾರತ ಸುದ್ದಿ ಗೋಕಾಕ : ಜ್ಞಾನಯೋಗಿ, ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮಿಗಳ ಅಮೃತ ಹಸ್ತದಿಂದ ಪ್ರಾರಂಭವಾದ ರೋಟರಿ ರಕ್ತ ಭಂಡಾರ ನಿರಾತಂಕವಾಗಿ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ರೋಟರಿ ಸೇವಾ ಸಂಘದ ಚೆರಮನ್ ಮಲ್ಲಿಕಾರ್ಜುನ ಕಲ್ಲೋಳಿ ಹೇಳಿದರು. ಬುಧವಾರದಂದು ನಗರದ ರೋಟರಿ ರಕ್ತ ಭಂಡಾರದ ಸಭಾಂಗಣದಲ್ಲಿ ರೋಟರಿ ಪರಿವಾರದವರು ಹಮ್ಮಿಕೊಂಡ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ …

Read More »

ಗೋಕಾಕ ಎಲ್.ಡಿ.ಎಸ್.ಫೌಂಡೇಶನ್ : ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೋತ್ಸವ

ಗೋಕಾಕ ಎಲ್.ಡಿ.ಎಸ್.ಫೌಂಡೇಶನ್ : ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೋತ್ಸವ ಯುವ ಭಾರತ ಸುದ್ದಿ ಗೋಕಾಕ : ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ಬುದ್ಧ, ಬಸವಣ್ಣ, ಗಾಂಧಿಜೀ ಅವರ ಸಾಲಿಗೆ ಸೇರುವ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು ನುಡಿದಂತೆ ನಡೆದು ನಡೆದಾಡುವ ದೇವರೆಂದು ಪ್ರಸಿದ್ಧಿ ಪಡೆದವರು. ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ಸಹ ಬಾಳಿ ಬದುಕಬೇಕು ಎಂದು ಜಾನಪದ ತಜ್ಞ ಡಾ.ಸಿ.ಕೆ.ನಾವಲಗಿ ಹೇಳಿದರು. ಬುಧವಾರದಂದು ಸಾಯಂಕಾಲ ನಗರದಲ್ಲಿ ಇಲ್ಲಿನ ಎಲ್.ಡಿ.ಎಸ್.ಫೌಂಡೇಶನ್ …

Read More »

ಭೀಕರ ಅಪಘಾತಕ್ಕೆ ಆರು ಯಲ್ಲಮ್ಮ ಭಕ್ತರ ದುರ್ಮರಣ

ಭೀಕರ ಅಪಘಾತಕ್ಕೆ ಆರು ಯಲ್ಲಮ್ಮ ಭಕ್ತರ ದುರ್ಮರಣ ಯುವ ಭಾರತ ಸುದ್ದಿ ಬೆಳಗಾವಿ : ಸುಪ್ರಸಿದ್ದ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ವಾಹನ ಮರಕ್ಕೆ ಗುದ್ದಿದ ಪರಿಣಾಮ ನಡೆದ ಭೀಕರ ಅಪಘಾತದಲ್ಲಿ ಆರು ಭಕ್ತರು ಮೃತ ಪಟ್ಟಿದ್ದಾರೆ. ಚಿಂಚನೂರು ವಿಠ್ಠಲ ದೇವಸ್ಥಾನದ ಹತ್ತಿರ ಈ ಅಪಘಾತ ಸಂಭವಿಸಿದೆ. ಮಹೀಂದ್ರಾ ವಾಹನ ಆಲದ ಮರಕ್ಕೆ ಗುದ್ಧಿ ಇವರೆಲ್ಲ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಹುಲಕುಂದ ನಿವಾಸಿಗಳು ಮೃತಪಟ್ಟಿದ್ದು ಮಧ್ಯರಾತ್ರಿ ಸವದತ್ತಿಯ ಯಲ್ಲಮ್ಮ ಗುಡ್ಡಕ್ಕೆ ತೆರಳುತ್ತಿದ್ದರು. …

Read More »

ಐಟಿಐ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳ ಜ.6 ರಂದು

ಐಟಿಐ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳ ಜ.6 ರಂದು ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ), ಉದ್ಯಮಬಾಗದಲ್ಲಿ ಜನವರಿ 6 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಹಾಗೂ ಅಪ್ರೆಂಟಿಸ್ ಶಿಪ್ ಮೇಳವನ್ನು ಆಯೋಜಿಸಲಾಗಿದೆ. ಐ ಟಿ ಐ ಪಾಸಾದ ಎಲ್ಲ ವೃತ್ತಿಯ ಅಭ್ಯರ್ಥಿಗಳು ಅವಶ್ಯವಿರುವ (ಎಸ್.ಎಸ್.ಎಲ್.ಸಿ., ಐಟಿಐ ಅಂಕಪಟ್ಟಿ, ಆಧಾರ ಕಾರ್ಡ ಹಾಗೂ ಫೋಟೋ ಇತ್ಯಾದಿಗಳನ್ನು) ದಾಖಲಾತಿಗಳೊಂದಿಗೆ ಸರ್ಕಾರಿ ಕೈಗಾರಿಕಾ ತರಬೇತಿ …

Read More »

ಕೊಲ್ಹಾರ ತಾಲೂಕಿನ ವಿವಿಧೆಡೆ ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ

ಕೊಲ್ಹಾರ ತಾಲೂಕಿನ ವಿವಿಧೆಡೆ ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ ಅಭಿನವ ಸ್ವಾಮಿ ವಿವೇಕಾನಂದ, ನಡೆದಾಡುವ ದೇವರು, ಶತಮಾನದ ಸಂತ ಲಿಂಗೈಕ್ಯ ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳಿಗೆ ಕೊಲ್ಹಾರ ತಾಲೂಕಿನ ವಿವಿದಡೆ ಭಾವಪೂರ್ಣ ಶೃದ್ದಾಂಜಲಿ ಸಲ್ಲಿಸಲಾಯಿತು. ಯುವ ಭಾರತ ಸುದ್ದಿ , ಹಣಮಾಪೂರ : ತಾಲೂಕಿನ ಹಣಮಾಪೂರ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಭಕ್ತರು ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೌನಚರಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದು ಶ್ರದ್ದಾಂಜಲಿ ಸಲ್ಲಿಸಿದರು. …

Read More »