Breaking News

Yuva Bharatha

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಶಿವಪ್ರಿಯಾ ಕಡೇಚೂರ ನೇಮಕ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಶಿವಪ್ರಿಯಾ ಕಡೇಚೂರ ನೇಮಕ ಬೆಳಗಾವಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳಗಾವಿ ಜಿಲ್ಲಾ ಅಧಿಕಾರಿಗಳ ಹುದ್ದೆಗೆ ಶಿವಪ್ರಿಯಾ.ಬಿ.ಕಡೇಚೂರ ನಿಯೋಜಿಸಿ ಆದೇಶಿಸಿರುತ್ತಾರೆ. ಜು.೧೦ ೨೦೨೩ ರಂದು ಸದರಿ ಹುದ್ದೆಗೆ ಹಾಜರಾಗಿರುತ್ತಾರೆ ಇವರು ಈ ಹಿಂದೆ ಬೆಳಗಾವಿ ಜಿಲ್ಲೆಯ ಪ್ರವಾಸೋಧ್ಯಮ ಇಲಾಖೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

Read More »

ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ

ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ ಬೆಳಗಾವಿ : ಹಿರಿಯ ನಾಗರಿಕರ ದಿನಾಚರಣೆ ೨೦೨೩ ರ ಹಿನ್ನೆಲೆ ಹಿರಿಯ ನಾಗರಿಕರ ವೈಯಕ್ತಿಕ ಹಾಗೂ ಸಂಸ್ಥೆಯ ರಾಜ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ( ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ, ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿರುವ / ಸಲ್ಲಿಸುತ್ತಿರುವ (೬೦ ವರ್ಷ ಮೇಲ್ಪಟ್ಟ ) ಹಿರಿಯ ನಾಗರಿಕರು …

Read More »

ಗೃಹಲಕ್ಷ್ಮೀ ಯೋಜನೆ: ಜು.19 ರಿಂದ ನೋಂದಣಿ : ಫಲಾನುಭವಿಗಳ ನೋಂದಣಿ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

  ಬೆಳಗಾವಿ : ಸರಕಾರದ ಮಾರ್ಗಸೂಚಿಯ ಪ್ರಕಾರ ಗೃಹಲಕ್ಷ್ಮೀ ಫಲಾನುಭವಿಗಳ ಸಮರ್ಪಕ ನೋಂದಣಿಗಾಗಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿಗೆ ಸಂಬಂಧಿಸಿ ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ ಬಳಿಕ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜುಲೈ ೧೯ …

Read More »

ಅನ್ನಭಾಗ್ಯ ಯೋಜನೆ: ಹಣ ವರ್ಗಾವಣೆ

ಅನ್ನಭಾಗ್ಯ ಯೋಜನೆ: ಹಣ ವರ್ಗಾವಣೆ ಬೆಳಗಾವಿ : ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಿಸಲಾಗುವ ೦೫ ಕೆ.ಜಿ ಆಹಾರಧಾನ್ಯದ ಬದಲಾಗಿ ಪ್ರತಿಕೆ.ಜಿಗೆ ರೂ.೩೪/- ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಆಃಖಿ ಮೂಲಕ ಹಣವನ್ನು ವರ್ಗಾಯಿಸಲಾಗುವುದು. ಆದ್ಯತಾ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ೫ ಕೆ.ಜಿ …

Read More »

ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ

ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ ಗದಗ: ಪೂಜ್ಯರ ಅಭಿಮಾನಿ ಭಕ್ತರ ಮಹಾ ಬಳಗವಾದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ‘ತ್ರಿಭಾಷಾ ಕವಿ’ ಗುರು ಪುಟ್ಟರಾಜರ ಸಾಹಿತ್ಯ ಸೇವೆಯನ್ನು ಸ್ಮರಿಸಿಕೊಳ್ಳುವ ಘನ ಉದ್ದೇಶದಿಂದ, ಕಳೆದ ೨೩ ವರ್ಷಗಳಿಂದಲೂ ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿ ನೀಡುತ್ತಾ ಬಂದಿದೆ. ಅದರಂತೆ ಈ ವರ್ಷವೂ ಕೂಡಾ ಈ ಪ್ರಶಸ್ತಿಗಾಗಿ ೨೦೨೧-೨೨ ಮತ್ತು ೨೦೨೨-೨೩ ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ …

Read More »

4 ಸಾವಿರ ಬಸ್ ಖರೀದಿ, 13 ಸಾವಿರ ಸಿಬ್ಬಂದಿ ನೇಮಕ

4 ಸಾವಿರ ಬಸ್ ಖರೀದಿ, 13 ಸಾವಿರ ಸಿಬ್ಬಂದಿ ನೇಮಕ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 4,000 ಬಸ್‌ಗಳನ್ನು ಖರೀದಿಸಲಾಗುವುದು ಮತ್ತು 13,000 ಚಾಲಕರು, ಕಂಡಕ್ಟರ್‌ಗಳು ಮತ್ತು ಮೆಕಾನಿಕ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿಯಿಂದ ಸ್ವಾಗತಿಸಿದ್ದು, ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ ಇದೆ ಎಂಬ ಮಾಹಿತಿ …

Read More »

ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ : ಸಿದ್ದರಾಮಯ್ಯ

ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ : ಸಿದ್ದರಾಮಯ್ಯ ಬೆಂಗಳೂರು : ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದರು. ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ …

Read More »

ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸತೀಶ ಜಾರಕಿಹೊಳಿಗೆ ಕರವೇ ತಾಲೂಕು ಪದಾಧಿಕಾರಿಗಳ ಮನವಿ

ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸತೀಶ ಜಾರಕಿಹೊಳಿಗೆ ಕರವೇ ತಾಲೂಕು ಪದಾಧಿಕಾರಿಗಳ ಮನವಿ ಮುರಗೋಡ: ಮುರಗೋಡದಲ್ಲಿರುವ ಚಿಕ್ಕ ಪ್ರವಾಸಿ ಮಂದಿರವನ್ನು ಹೆಚ್ಚಿನ ಕೊಠಡಿಗಳನ್ನೊಳಗೊಂಡ ಸುಸಜ್ಜಿತ ನೂತನ ಪ್ರವಾಸಿ ಮಂದಿರವನ್ನಾಗಿ ನಿರ್ಮಾಣ ಮಾಡಬೇಕು, ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು. ಹೆಚ್ಚಿನ ಪೊಲೀಸ್ ಸಿಬ್ಬಂದಿ, ಕೊಠಡಿ ನಿರ್ಮಿಸಬೇಕು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸವದತ್ತಿ ತಾಲೂಕು ಘಟಕದ ಪದಾಧಿಕಾರಿಗಳ ವತಿಯಿಂದನೂತನ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರಿಗೆ ಬೆಂಗಳೂರಿನ ಡಾಲರ್ಸ್ …

Read More »

ಚಂದ್ರಯಾನದಲ್ಲಿ ಬೆಳಗಾವಿಗರ ಛಾಪು

ಚಂದ್ರಯಾನದಲ್ಲಿ ಬೆಳಗಾವಿಗರ ಛಾಪು ಬೆಳಗಾವಿ : ಭಾರತ ಶುಕ್ರವಾರ ನಭಕ್ಕೆ ಹಾರಿಸಿದ ಚಂದ್ರಯಾನ-3 ರಲ್ಲಿ ಬೆಳಗಾವಿಗರ ಪಾತ್ರ ಇದೀಗ ಸದ್ದು ಮಾಡುತ್ತಿದೆ. ಬೆಳಗಾವಿಯವರೇ ಆಗಿರುವ ಸರ್ವೋ ಕಂಟ್ರೋಲ್ಸ್ ಆ್ಯಂಡ್ ಹೈಡ್ರಾಲಿಕ್‌ ಇಂಡಿಯಾ ಲಿಮಿಟೆಡ್ ಕಂಪನಿ ಸಿದ್ಧಪಡಿಸಿರುವ ಕೆಲ ಬಿಡಿ ಭಾಗಗಳು ಇದೀಗ ಚಂದ್ರಯಾನ ದಲ್ಲಿ ಗುರುತಿಸಿಕೊಂಡಿವೆ. ಈ ಗಗನ ನೌಕೆಯಲ್ಲಿ ಬಳಸಿರುವ ಹೈಡ್ರೋಲಿಕ್ ಉಪಕರಣಗಳು, ವಾಲ್ವ್ ಗಳು, ಎಲೆಕ್ಟ್ರಾನಿಕ್ ಸೆನ್ಸರ್ ಗಳನ್ನು ಕಂಪನಿಯಿಂದ ರವಾನಿಸಲಾಗಿದೆ ಎಂದು ಇದರ ಮಾಲಿಕ ಮತ್ತು …

Read More »

ವರ್ಗಾವಣೆಯಲ್ಲಿ ದಂಧೆ ಆರೋಪ ಸತ್ಯಕ್ಕೆ ದೂರ

ವರ್ಗಾವಣೆಯಲ್ಲಿ ದಂಧೆ ಆರೋಪ ಸತ್ಯಕ್ಕೆ ದೂರ ಬೆಂಗಳೂರು, ಜುಲೈ13: “ನನ್ನ ಸುದೀರ್ಘ ರಾಜಕಾರಣ ಜೀವನದಲ್ಲಿ ವರ್ಗಾವಣೆಯಲ್ಲಿ ಭ್ರಷ್ಟಾಚಾರವಾಗಿದೆ ಎಂಬ ಯಾವ ಹಗರಣ, ಆರೋಪಗಳೂ ಇಲ್ಲ. ಸರ್ಕಾರ ರಚನೆಯಾದ ಮೊದಲನೇ ದಿನವೇ ಯಾವ ಕಾರಣಕ್ಕೂ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೀಬಾರದು ಎಂದು ಸ್ಪಷ್ಟವಾಗಿ ನಮ್ಮ ಸಚಿವರಲ್ಲಿ ಮನವಿ ಮಾಡಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಯಾರಾದರೂ ಒಬ್ಬರು, ನನ್ನ ಮೇಲೆ ಈವರೆಗೆ ಆರೋಪ ಮಾಡಿಲ್ಲ. ಲಂಚ ತೆಗೆದುಕೊಂಡಿದ್ದೇನೆ ಎಂದು ಯಾರಾದರೂ ಸಾಬೀತು ಮಾಡಿದರೆ ರಾಜಕೀಯ …

Read More »