Breaking News

Yuva Bharatha

ನೀಟ್ ಪರೀಕ್ಷೆ – ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಪೂಜೇರಿ ಸಾಧನೆ!!

ನೀಟ್ ಪರೀಕ್ಷೆ – ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಪೂಜೇರಿ ಸಾಧನೆ!! ಯುವ ಭಾರತ ಸುದ್ದಿ  ಗೋಕಾಕ : ವೈದ್ಯಕೀಯ ಅರ್ಹತಾ ಪರೀಕ್ಷೆ(ನೀಟ್)ಯಲ್ಲಿ ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಬಡಕಪ್ಪ ಪೂಜೇರಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿ ಅವರು 645 ಅಂಕ ಪಡೆದುಕೊಂಡಿದ್ದಾರೆ. 1861 ನೇ ರ್ಯಾಂಕ್ ಪಡೆಯುವ ಮೂಲಕ ಗೋಕಾಕ ತಾಲೂಕು ಹಾಗೂ ಹಿರೇನಂದಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. ರಮೇಶ ಅವರು ಬೆಂಗಳೂರು …

Read More »

ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ – ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ!

ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ – ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ! ಗೋಕಾಕ : ಸದಾ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ನಾಡಿನ ಹಿರಿಯ ರಾಜಕಾರಣಿ, ಸಚಿವ ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದರು. ಇಲ್ಲಿಯ ತಮ್ಮ ಗೃಹ ಕಛೇರಿ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅಗಲಿದ …

Read More »

ಉಮೇಶ್ ಕತ್ತಿ ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದರು ಲಖನ್ ಜಾರಕಿಹೊಳಿ ಸಂತಾಪ.!

ಉಮೇಶ್ ಕತ್ತಿ ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದರು ಲಖನ್ ಜಾರಕಿಹೊಳಿ ಸಂತಾಪ.! ಗೋಕಾಕ: ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ೨೫ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು ಎಂದು ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ತಿಳಿಸಿದ್ದಾರೆ. ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ ಕತ್ತಿಯವರು ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ …

Read More »

ಸಚಿವ ಕತ್ತಿ ನಿಧನದಿಂದ ಬೆಳಗಾವಿಗೆ ತುಂಬಲಾರದ ನಷ್ಟವಾಗಿದೆ.-ಸತೀಶ ಜಾರಕಿಹೊಳಿ.!

ಸಚಿವ ಕತ್ತಿ ನಿಧನದಿಂದ ಬೆಳಗಾವಿಗೆ ತುಂಬಲಾರದ ನಷ್ಟವಾಗಿದೆ.-ಸತೀಶ ಜಾರಕಿಹೊಳಿ.! ಗೋಕಾಕ: ಹಿರಿಯ ರಾಜಕಾರಣಿ ಮತ್ತು ಆತ್ಮೀಯರಾಗಿದ್ದ ಸಚಿವ ಉಮೇಶ ಕತ್ತಿ ಅವರ ನಿಧನ ಸುದ್ದಿ ತಿಳಿದು ತೀವ್ರ ನೋವಾಗಿದೆ. ಅವರಿಗೆ ನನ್ನ ಅಂತಿಮ ಗೌರವ ನಮನಗಳನ್ನು ಸಲ್ಲಿಸುತ್ತ ಅವರ ಕುಟುಂಬ ಮತ್ತು ಅಭಿಮಾನಿ ಬಳಗಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಉಮೇಶ ಕತ್ತಿ ಅವರು ಉತ್ತಮ ಹೃದಯವಂತಿಕೆಯ ವ್ಯಕ್ತಿತ್ವ. ನೇರ ಮಾತುಗಳು. …

Read More »

ಬಾಲ್ಯದ ಗೆಳೆಯನ ಅಗಲಿಕೆಗೆ ತೀವೃ ಸಂತಾಪ ಸೂಚಿಸಿ ಶಾಸಕ ರಮೇಶ ಜಾರಕಿಹೊಳಿ.!

ಬಾಲ್ಯದ ಗೆಳೆಯನ ಅಗಲಿಕೆಗೆ ಸಂತಾಪ ಸೂಚಿಸಿ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಆಹಾರ ನಾಗರಿಕ ಮತ್ತು ಅರಣ್ಯ ಸಚಿವ ಉಮೇಶ ಕತ್ತಿಯವರ ನಿಧನಕ್ಕೆ ಶಾಸಕ ರಮೇಶ ಜಾರಕಿಹೊಳಿ ತೀವೃ ಸಂತಾಪ ಸೂಚಿಸಿದ್ದಾರೆ. ಕತ್ತಿ ಹಾಗೂ ಜಾರಕಿಹೊಳಿ ಕುಟುಂಬ ವಿದ್ಯಾ ಜೀವನದಿಂದಲೂ ಕೂಡಿ ಬಂದಿದೆ. ಉಮೇಶ ಕತ್ತಿಯವರು ಉತ್ತರಕರ್ನಾಟಕದ ಬಗ್ಗೆ ವಿಶೇಷ ಕಾಳಜಿಹೊಂದಿರುವ ವ್ಯಕ್ತಿಯಾಗಿದ್ದರು, ಅವರ ಅಗಲಿಕೆಯಿಂದ ಉತ್ತರಕರ್ನಾಟಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಉಮೇಶ ಕತ್ತಿ ಕೃಷಿಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದವರು, …

Read More »

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ!

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ ಯುವ ಭಾರತ ಸುದ್ದಿ ಗೋಕಾಕ: ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು 2 ದಶಕದ …

Read More »

ಜಲಾವೃತಗೊಂಡ ಮನೆಯಲ್ಲಿ ಸಿಲುಕಿದ ಹಸುಗೂಸು ಬಾಣಂತಿ ರಕ್ಷಿಸಿದ ಮಾಣಿಕವಾಡಿ ಗ್ರಾಮಸ್ಥರು.!

ಜಲಾವೃತಗೊಂಡ ಮನೆಯಲ್ಲಿ ಸಿಲುಕಿದ ಹಸುಗೂಸು ಬಾಣಂತಿ ರಕ್ಷಿಸಿದ ಮಾಣಿಕವಾಡಿ ಗ್ರಾಮಸ್ಥರು.! ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ೧೧ಂಟೆಗೆ ಸುರಿದ ಭಾರಿ ಮಳೆಯಿಂದಾಗಿ ಇಡಿ ಗ್ರಾಮವೇ ಸಂಪೂರ್ಣ ಜಲಾವೃತವಾಗಿತ್ತು, ಗ್ರಾಮ ಮನೆಯೊಂದರಲ್ಲಿ ಸಿಲುಕಿಕೊಂಡಿದ್ದ ಹಸುಗೂಸು ಸೇರಿ ಬಾಣಂತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮಳೆಯಿಂದ ಮಾಣಿಕವಾಡಿ ಗ್ರಾಮ ಏಕಾಏಕಿ ಜಲಾವೃತ್ತಗೊಂಡ ಹಿನ್ನಲೆ ಮನೆಯಲ್ಲಿಯೇ ಸಿಲುಕಿದ್ದ ೧೨ದಿನದ ಹಸುಗೂಸು ಮತ್ತು ಬಾಣಂತಿ ತಾಯಿಯನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮತ್ತು ಒಬ್ಬರೊಬ್ಬರು ಕೈ ಹಿಡಿದು …

Read More »

ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ!!

ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ          ಅರಭಾವಿಯಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.  ಜ್ಯೂನಿಯರ್ ಕಾಲೇಜುಗಳ ಆರಂಭಕ್ಕೆ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಕೆ. ಮೂಡಲಗಿ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ …

Read More »

ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ತುರ್ತು ಸ್ಫಂಧಿಸಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.!

ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ತುರ್ತು ಸ್ಫಂಧಿಸಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.! ಯುವಭಾರತ ಸುದ್ದಿ ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, …

Read More »

ಗೋಕಾಕನಲ್ಲಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ!!

ಗೋಕಾಕನಲ್ಲಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ!! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನಾಧ್ಯಂತ ಸೋಮವಾರ ಒಂದು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಸುರಿದ ಭಾರಿ ಮಳೆಗೆ ಇನ್ನಿಲ್ಲದ ಆವಾಂತರಗಳು ಸೃಷ್ಟಿಯಾಗಿವೆ. ಗೋಕಾಕ ನಗರ ಸೇರಿ ತಾಲೂಕಿನ ವಿವಿಧೆಡೆ ಮಳೆಯಿಂದಾಗಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿಯುವ ದೃಶ್ಯ ಕಂಡು ಬಂದಿತು. ಅಲ್ಲದೇ ನೂರಾರು ಮನೆ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ನೀರು ನುಗ್ಗಿರುವ ಹಿನ್ನಲೆ ನೀರು ಹೋರಹಾಕಲು ಜನರು ಪರದಾಟ …

Read More »