Breaking News

Yuva Bharatha

ರಾಜ್ಯದ ಹಲವಡೆ ಕುಡಿಯುವ ನೀರಿಗೆ ಅಭಾವ : ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ರಾಜ್ಯದ ಹಲವಡೆ ಕುಡಿಯುವ ನೀರಿಗೆ ಅಭಾವ : ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಬೆಂಗಳೂರು : ಮುಂಗಾರು ಮಳೆ ವಿಳಂಬವಾದ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ಕುಡಿಯುವ ನೀರಿನ ಅಭಾವ ತಲೆದೂರಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನದಿಗಳು, ಹಳ್ಳ, ಕೆರೆಗಳು ಖಾಲಿಯಾಗಿದ್ದು, ನೀರಿನ ಕೊರತೆ ಉಂಟಾಗಿದೆ. ಈ ಬಾರಿ ಅತಿ ಬಿಸಿಲು ಕಾಣಿಸಿಕೊಂಡಿದೆ. ನಿರೀಕ್ಷೆಯಂತೆ ಮುಂಗಾರು ಮಳೆ ಸಹ ಆಗಮನವಾಗಿಲ್ಲ. …

Read More »

ವಿದ್ಯಾರ್ಥಿಗೆ ಸಹಾಯ ಮಾಡಿದ ಕೆ.ಎಲ್.ರಾಹುಲ್

ವಿದ್ಯಾರ್ಥಿಗೆ ಸಹಾಯ ಮಾಡಿದ ಕೆ.ಎಲ್.ರಾಹುಲ್ ಬಾಗಲಕೋಟೆ : ಮಹಾಲಿಂಗಪುರದ ಬಡ ವಿದ್ಯಾರ್ಥಿ ಅಮೃತ ಮಾವಿನಕಟ್ಟಿ ವಿದ್ಯಾಭ್ಯಾಸಕ್ಕೆ ಭಾರತೀಯ ತಂಡದ ಕ್ರಿಕೆಟಿಗ ಕೆ.ಎಲ್‌. ರಾಹುಲ್‌ ಅವರು ಸಹಕಾರ ನೀಡುವ ಮೂಲಕ ಬಡ ಕುಟುಂಬಕ್ಕೆ ಆಸರೆಯಾಗಿ ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಮಹಾಲಿಂಗಪುರದ ಅಯೋಧ್ಯ ನಗರದ ನಿವಾಸಿ ಅಮೃತ ದಾನಪ್ಪ ಮಾವಿನಕಟ್ಟಿ ಹಾಗೂ ಮತ್ತೊರ್ವ ಸಹೋದರ ಅಮಿತ್‌ ದಶಕದ ಹಿಂದೆ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾದರು. ಆಗ ದೊಡ್ಡಪ್ಪ …

Read More »

ಟ್ರಾಕ್ ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಟ್ರಾಕ್ ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು ರಡ್ಡೇರಹಟ್ಟಿ : ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಸೋಮವಾರ ಟ್ರಕ್ ಮತ್ತು ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ . ರಡ್ಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಭೀಮಪ್ಪ ಬಾಂವಿ (31) ಸಾವಿಗೀಡಾಗಿದ್ದಾನೆ. ಟ್ರಕ್ ಚಾಲಕ ಕುಡಿದು ಚಲಾಯಿಸಿದ್ದರಿಂದ ಆತನ ನಿಯಂತ್ರಣ ತಪ್ಪಿ ಓರ್ವನ ಬಲಿಯಾಗಿದೆ.ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮೊದಲ ದಿನ ಬಸ್ ನಲ್ಲಿ 5.71 ಲಕ್ಷ ಮಹಿಳೆಯರ ಪ್ರಯಾಣ: ಇದರ ವೆಚ್ಚ ಎಷ್ಟು ?

ಮೊದಲ ದಿನ ಬಸ್ ನಲ್ಲಿ 5.71 ಲಕ್ಷ ಮಹಿಳೆಯರ ಪ್ರಯಾಣ: ಇದರ ವೆಚ್ಚ ಎಷ್ಟು ? ಬೆಂಗಳೂರು: ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು, ಭಾನುವಾರ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12 ವರೆಗೆ ರಾಜ್ಯಾದ್ಯಂತ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಮಹಿಳಾ …

Read More »

ಭಾರೀ ಸಂಚಲನ : ತೆರೆ ಮೇಲೆ ಬರುತ್ತಾ ಕಾಂತಾರ-2

ಭಾರೀ ಸಂಚಲನ : ತೆರೆ ಮೇಲೆ ಬರುತ್ತಾ ಕಾಂತಾರ-2 ಬೆಂಗಳೂರು : ನಟ , ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಸ್ಕ್ರಿಪ್ಟ್ ಅನ್ನು ಬಹುತೇಕ ಮುಗಿಸಿದ್ದಾರೆ. ಕಾಂತಾರ ಚಿತ್ರಕ್ಕೆ ಮಾತುಗಳನ್ನೂ ಹೆಣೆದಿರುವ ಅವರು ಸ್ಕ್ರಿಪ್ಟ್ ಗೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಇದೀಗ ಹೊರ ಬಿದ್ದಿದೆ.   ಇದರ ಜೊತೆ ಜೊತೆಗೆ ಶೂಟಿಂಗ್ ಸ್ಥಳಗಳನ್ನೂ ಅವರು ಹುಡುಕುತ್ತಿದ್ದು, ಈ ಎಲ್ಲವನ್ನೂ ಮುಗಿಸಿಕೊಂಡು ಆಗಸ್ಟ್ ನಲ್ಲಿ ಚಿತ್ರಕ್ಕೆ ಮುಹೂರ್ತ ಮಾಡಲಿದ್ದಾರೆ …

Read More »

ಮೋದಿ ಮತ್ತೆ ವಿಶ್ವದ ನಂಬರ್ ಒನ್ ಜನಪ್ರಿಯ ನಾಯಕ

ಮೋದಿ ಮತ್ತೆ ವಿಶ್ವದ ನಂಬರ್ ಒನ್ ಜನಪ್ರಿಯ ನಾಯಕ ದೆಹಲಿ : ಜಗತ್ತಿನ ವಿವಿಧ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲಿ ಆಗಾಗ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರಾಗಿ ಹೊರಹೊಮ್ಮುತ್ತಿದ್ದಾರೆ. ಇದೀಗ ಹೊರಬಂದ ಮಾಹಿತಿಯಂತೆ ಮೋದಿ ಅವರು ಮತ್ತೊಮ್ಮೆ ವಿಶ್ವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆಯ ಗ್ಲೋಬಲ್ ಲೀಡರ್ ಶಿಪ್ ಅಪ್ರುವಲ್ ಸಮೀಕ್ಷೆ ಪ್ರಕಾರ ಶೇ.71ರಷ್ಟು ರೇಟಿಂಗ್ ಪಡೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ವಿಶ್ವದ ಜನಪ್ರಿಯ …

Read More »

ತಮಿಳು ವ್ಯಕ್ತಿ ಪ್ರಧಾನಿ : ಅಮಿತ್ ಶಾ

ತಮಿಳು ವ್ಯಕ್ತಿ ಪ್ರಧಾನಿ : ಅಮಿತ್ ಶಾ ಚೆನ್ನೈ: ಭವಿಷ್ಯದಲ್ಲಿ ತಮಿಳರೊಬ್ಬರನ್ನು ಪ್ರಧಾನಿಯನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಾನುವಾರ ಚೆನ್ನೈಗೆ ಭೇಟಿ ನೀಡಿದ್ದ ಅವರು ಬಿಜೆಪಿ ಮುಖಂಡರ, ಕಾರ್ಯಕರ್ತರ ಗೋಪ್ಯ ಸಭೆಯನ್ನು ಏರ್ಪಡಿಸಿದ್ದರು. ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಅವರು ‘ಭವಿಷ್ಯದಲ್ಲಿ ತಮಿಳರೊಬ್ಬರನ್ನು ಪ್ರಧಾನಿಯನ್ನಾಗಿ ಮಾಡಲಾಗುವುದೆಂದು’ ಹೇಳಿರುವುದಾಗಿ ಮೂಲಗಳು ತಿಳಿಸಿವೆ. 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತಮಿಳುನಾಡಿನಲ್ಲಿ ಕನಿಷ್ಠ 20 ಸ್ಥಾನಗಳನ್ನು …

Read More »

ಖಾಸಗಿ ಬಸ್’ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಿದ್ದರೆ ಬಿಜೆಪಿ ಪ್ರತಿಭಟನೆ : ನಳಿನ್ ಕುಮಾರ್ ಕಟೀಲು

ಖಾಸಗಿ ಬಸ್’ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಿದ್ದರೆ ಬಿಜೆಪಿ ಪ್ರತಿಭಟನೆ : ನಳಿನ್ ಕುಮಾರ್ ಕಟೀಲು ಬೆಂಗಳೂರು: ಖಾಸಗಿ ಬಸ್’ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಿದ್ದರೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪುರಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್ಗಳು ಹೆಚ್ಚು ಸಂಚರಿಸುತ್ತವೆ. ಖಾಸಗಿ ಬಸ್ಗಳಲ್ಲಿ ಮಹಿಳೆಯರಿಗೆ …

Read More »

ಪ್ರತ್ಯೇಕ ಮಂಡಳಿ ರಚನೆ: ದ್ವಾರಕನಾಥ್ ನೇತೃತ್ವದ ಅಲೆಮಾರಿ ಮುಖಂಡರಿಂದ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಮನವಿ

ಪ್ರತ್ಯೇಕ ಮಂಡಳಿ ರಚನೆ: ದ್ವಾರಕನಾಥ್ ನೇತೃತ್ವದ ಅಲೆಮಾರಿ ಮುಖಂಡರಿಂದ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಬೆಂಗಳೂರು: ಅಲೆಮಾರಿ ಜನಾಂಗಕ್ಕೆ ಸೇರಿದ 93 ಸಮುದಾಯಗಳ ಜನರಿಗೆ ಸರಿಯಾಗಿ ಗುರುತು ಇಲ್ಲವಾಗಿದ್ದು, ಸರ್ಕಾರ ಇವರ ಸಮಸ್ಯೆ ಬಗೆಹರಿಸಿ ಅವರ ರಕ್ಷಣೆಗೆ ಪ್ರತ್ಯೇಕ ಮಂಡಳಿ ರಚಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಡಾ. ಸಿಎಸ್ ದ್ವಾರಕನಾಥ್ ಅವರ ನೇತೃತ್ವದ ಅಲೆಮಾರಿ ಸಮುದಾಯದ ಮುಖಂಡರ ನಿಯೋಗವು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ …

Read More »

ಶಾಲೆ ಬಿಡುವ ಮಕ್ಕಳ ಸಂಖ್ಯೆ ಎಷ್ಟು ?

ಶಾಲೆ ಬಿಡುವ ಮಕ್ಕಳ ಸಂಖ್ಯೆ ಎಷ್ಟು ? ನವದೆಹಲಿ: 2021-22ರಲ್ಲಿ ಪ್ರೌಢಶಿಕ್ಷಣ ಹಂತದಲ್ಲಿ ಶಾಲೆ ಬಿಟ್ಟಮಕ್ಕಳ ರಾಷ್ಟ್ರೀಯ ಸರಾಸರಿ ಸೇ.12.6ರಷ್ಟಿದ್ದರೆ, ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಈ ಪ್ರಮಾಣ ಇನ್ನೂ ಅಧಿಕವಾಗಿದೆ ಎಂದು ವರದಿಯೊಂದು ತಿಳಿಸಿದೆ. ಆದರೆ ಇದ್ದಿದ್ದರಲ್ಲಿ ಖುಷಿಯ ವಿಷಯವೆಂದರೆ 2020-21ಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಶಾಲೆ ಬಿಡುವ ಮಕ್ಕಳ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. 2023-24ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಜಾರಿಯ ಕುರಿತು ಚರ್ಚಿಸಲು ಹಮ್ಮಿಕೊಂಡಿದ್ದ ಶಿಕ್ಷಣ ಇಲಾಖೆ ವ್ಯಾಪ್ತಿಗೆ …

Read More »