Breaking News

Yuva Bharatha

ಮತ್ತೊಂದು ಸಮೀಕ್ಷೆಯಲ್ಲೂ ಅಚ್ಚರಿ ಫಲಿತಾಂಶ

ಮತ್ತೊಂದು ಸಮೀಕ್ಷೆಯಲ್ಲೂ ಅಚ್ಚರಿ ಫಲಿತಾಂಶ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವುದರ ಜತೆಗೆ ಬಹುಮತದ ಸನಿಹಕ್ಕೆ ಬರಲಿದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಜನ್‌ ಕೀ ಬಾತ್‌ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ಏ.15 ರಿಂದ ಮೇ 1ರವರೆಗೆ ರಾಜ್ಯಾದ್ಯಂತ 30 ಸಾವಿರ ಮಂದಿಯನ್ನು ಸಂದರ್ಶಿಸಿ ಸಿದ್ಧಪಡಿಸಿರುವ ಈ ಸಮೀಕ್ಷಾ ವರದಿಯ ಪ್ರಕಾರ, ಬಿಜೆಪಿ 100-114 ಸ್ಥಾನಗಳನ್ನು …

Read More »

ಬೆಂಗಳೂರಲ್ಲಿ ಎರಡು ದಿನ ಮೋದಿ ರೋಡ್ ಶೋ..!

ಬೆಂಗಳೂರಲ್ಲಿ ಎರಡು ದಿನ ಮೋದಿ ರೋಡ್ ಶೋ..! ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಶನಿವಾರ ಮತ್ತು ಭಾನುವಾರ ಎರಡು ದಿನ ರೋಡ್ ಶೊ ನಡೆಸಿ ಮತಯಾಚಿಸಲಿದ್ದಾರೆ ಎಂದು ತಿಳಿಸಲಾಗಿದೆ. ಈಗಾಗಲೇ ರಾಜ್ಯದ ಹಲವೆಡೆ ಬೃಹತ್ ಸಮಾವೇಶ ಹಾಗೂ ರೋಡ್ ಶೊ ನಡೆಸಿ ಮೋದಿ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದಾರೆ. ಈಗ ಬೆಂಗಳೂರಿನಲ್ಲಿ ಮತಬೇಟೆ …

Read More »

ಪುತ್ರಿಗೂ ಆಸ್ತಿ ಮೇಲೆ ಸಮಾನ ಹಕ್ಕಿದೆ: ಹೈಕೋರ್ಟ್‌

ಪುತ್ರಿಗೂ ಆಸ್ತಿ ಮೇಲೆ ಸಮಾನ ಹಕ್ಕಿದೆ: ಹೈಕೋರ್ಟ್‌ ಯುವ ಭಾರತ ಸುದ್ದಿ ಬೆಂಗಳೂರು : ತಂದೆಯು ಜಮೀನು ಅಡವಿಟ್ಟು ಸಹೋದರಿಗೆ ಮದುವೆ ನೆರವೇರಿಸಿದ್ದು, ಚಿನ್ನಾಭರಣ ಸಹ ಕೊಡಿಸಿದ್ದಾರೆ. ತಂದೆಯ ಸಾಲ ತೀರಿಸಿ ನಾನು ಜಮೀನು ಹಿಂದಕ್ಕೆ ಪಡೆದಿದ್ದೇನೆ. ಆದ್ದರಿಂದ ತಂದೆಯ ಸಹೋದರಿಗೆ ತಂದೆ ಆಸ್ತಿ ಮೇಲೆ ಸಮಾನ ಹಕ್ಕು ಇಲ್ಲ ಮತ್ತು ಆಕೆಗೆ ಆಸ್ತಿಯಲ್ಲಿ ಪಾಲು ಕೊಡಲಾಗದು” ಎಂಬ ವಾದ ತಿರಸ್ಕರಿಸಿರುವ ಕರ್ನಾಟಕ ಹೈಕೋರ್ಟ್, ತಂದೆಯ ಆಸ್ತಿಯಲ್ಲಿ ಪುತ್ರನ ಜೊತೆಗೆ …

Read More »

ಚುನಾವಣೆ ಗೆಲ್ಲಲು ಯಡಿಯೂರಪ್ಪ ಪುತ್ರನ ಮೂಲಕ ಕೊನೆ ಕ್ಷಣದಲ್ಲಿ ಬಿಗ್ ಪ್ಲಾನ್ ಮಾಡಿದ ಬಿಜೆಪಿ

ಚುನಾವಣೆ ಗೆಲ್ಲಲು ಯಡಿಯೂರಪ್ಪ ಪುತ್ರನ ಮೂಲಕ ಕೊನೆ ಕ್ಷಣದಲ್ಲಿ ಬಿಗ್ ಪ್ಲಾನ್ ಮಾಡಿದ ಬಿಜೆಪಿ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಂಡಿರುವ ಬಿಜೆಪಿ ಇದೀಗ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುಪುತ್ರ ವಿಜಯೇಂದ್ರ ಅವರಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದೆ. ಜೊತೆಗೆ ಹೆಲಿಕಾಪ್ಟರ್ ಸೌಲಭ್ಯವನ್ನು ಸಹ ನೀಡಿದೆ. ಯಡಿಯೂರಪ್ಪ ಅವರನ್ನು ಎಷ್ಟು ಸಾಧ್ಯವೋ ಅಷ್ಟು ಪ್ರಮಾಣದಲ್ಲಿ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತದೆ. ಲಿಂಗಾಯತ …

Read More »

SSLC Result ಯಾವಾಗ ಗೊತ್ತಾ ?

SSLC Result ಯಾವಾಗ ಗೊತ್ತಾ ? ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಶೀಘ್ರದಲ್ಲೇ 2022-23 ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶೀಘ್ರವೇ ಪ್ರಕಟಿಸಲಿದೆ. ಉನ್ನತ ಮೂಲಗಳ ಪ್ರಕಾರ ಮೇ 8 ರಂದು ಬಹುತೇಕ ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ. ಫಲಿತಾಂಶ ಬಿಡುಗಡೆ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದು ಯಾವ ದಿನಾಂಕದಂದು ಫಲಿತಾಂಶ ಬಿಡುಗಡೆ ಮಾಡಬೇಕು ಎಂಬ …

Read More »

ಮದುವೆಯಾಗದ ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ ಕರುಣಿಸಲಾಗುವುದು !

ಮದುವೆಯಾಗದ ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ ಕರುಣಿಸಲಾಗುವುದು ! ಯುವ ಭಾರತ ಸುದ್ದಿ ಬೆಳಗಾವಿ : ಗೋಕಾಕ ಹಾಗೂ ಅರಬಾವಿಯಲ್ಲಿ ಪಕ್ಷೇತರ ಸಹೋದರರಿಬ್ಬರೂ(ಕುಳ್ಳೂರ) ಕಣಕ್ಕಿಳಿದಿದ್ದು ಅವರು ನೀಡಿರುವ ಚುನಾವಣಾ ಪ್ರಣಾಳಿಕೆಯ ಭರವಸೆ ವಿಶೇಷ ರೀತಿಯಲ್ಲಿ ಗಮನ ಸೆಳೆದಿದೆ. ಗೋಕಾಕ ಹಾಗೂ ಅರಬಾವಿ ಮತಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆಗೊಳಿಸಿರುವ ಪ್ರಣಾಳಿಕೆ ಇದೀಗ ನಾಡಿನೆಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಅರಬಾವಿ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ …

Read More »

ಕುತೂಹಲ ಕೆರಳಿಸಿದ ಭೇಟಿ : ಬೆಳಗಾವಿಗಿಂದು ಮಾಜಿ ಸಿಎಂ

ಕುತೂಹಲ ಕೆರಳಿಸಿದ ಭೇಟಿ : ಬೆಳಗಾವಿಗಿಂದು ಮಾಜಿ ಸಿಎಂ ಬೆಳಗಾವಿ : ಕಾಂಗ್ರೆಸ್ ಪರ ಮತಯಾಚನೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಗಮಿಸುತ್ತಿರುವುದು ಕುತೂಹಲ ಕೆರಳಿಸಿದೆ. ಅವರ ಮತ ಬೇಟೆಗೆ ಬೆಳಗಾವಿಯ ಲಿಂಗಾಯತ ಮತದಾರರು ಯಾವ ರೀತಿಯಲ್ಲಿ ಸ್ಪಂದನೆ ನೀಡಲಿದ್ದಾರೆ ಎನ್ನುವುದು ಕಾದುನೋಡಬೇಕಿದೆ. ಇಷ್ಟೊಂದು ವರ್ಷಗಳ ಕಾಲ ಜಗದೀಶ ಶೆಟ್ಟರ್ ಅವರು ಬಿಜೆಪಿ ನಾಯಕರಾಗಿ ಆಗಮಿಸುತ್ತಿದ್ದರು. ಆದರೆ, ಈಗ ಮಾತ್ರ ಕಾಂಗ್ರೆಸ್ ನಾಯಕರಾಗಿ ಬದಲಾಗಿದ್ದಾರೆ. ಬಿಜೆಪಿ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ …

Read More »

MES ಗೆ ಕಾಂಗ್ರೆಸ್ ಒಕೆ… ಬಿಜೆಪಿ ಮೇಲೆ ದ್ವೇಷ ಏಕೆ ?

MES ಗೆ ಕಾಂಗ್ರೆಸ್ ಒಕೆ… ಬಿಜೆಪಿ ಮೇಲೆ ದ್ವೇಷ ಏಕೆ ? ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಮರಾಠಿ ಭಾಷಿಕರ ಸ್ವಾಭಿಮಾನದ ಸಂಕೇತ ಎಂದು ಗುರುತಿಸಿಕೊಂಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಇದೀಗ ಚುನಾವಣೆಯ ಹೊತ್ತಿನಲ್ಲಿ ದ್ವಿಮುಖ ನೀತಿ ಅನುಸರಿಸಲು ಮುಂದಾಗಿರುವುದು ಬೆಳಕಿಗೆ ಬಂದಿದೆ. ಕಾಂಗ್ರೆಸ್ ಬಗ್ಗೆ ಸಾಪ್ಟ್ ಹಾಗೂ ಬಿಜೆಪಿಯನ್ನು ತೀವ್ರವಾಗಿ ವಿರೋಧಿಸಲು ಮುಂದಾಗಿರುವುದು ಇದಕ್ಕೆ ಸ್ವತಃ ಮರಾಠಿ ಭಾಷಿಕರಿಂದಲೇ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕರ್ನಾಟಕ ವಿಧಾನಸಭಾ …

Read More »

ಸಾಧಕರಿಗೆ ಶಿರಬಾಗಿ ನಮಿಸಿದ ಮೋದಿ

ಸಾಧಕರಿಗೆ ಶಿರಬಾಗಿ ನಮಿಸಿದ ಮೋದಿ ಯುವ ಭಾರತ ಸುದ್ದಿ ಅಂಕೋಲಾ : ಬಿಜೆಪಿ ಪ್ರಚಾರಾರ್ಥ ಅಂಕೋಲಾಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಬುಡಕಟ್ಟು ಹಾಲಕ್ಕಿ ಸಮುದಾಯದ ಪದ್ಮಪ್ರಶಸ್ತಿ ಪುರಸ್ಕೃತರಾದ ಸುಕ್ರಿ ಗೌಡ ಮತ್ತು ತುಳಸಿ ಗೌಡ ಅವರನ್ನು ಭೇಟಿಯಾದರು, ನಂತರ ಅವರಿಗೆ ಶಿರಬಾಗಿ ನಮಸ್ಕರಿಸಿದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯ ಟೋಲ್ ಗೇಟ್ ಬಳಿಯ ಗೌರಿಕೆರೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜಿಲ್ಲೆಯ ಆರು ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಬುಧವಾರ ಬೃಹತ್‌ …

Read More »

PFI ಒತ್ತಡದಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಹಿಮಂತ ಬಿಸ್ವಾ ಶರ್ಮಾ

PFI ಒತ್ತಡದಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಹಿಮಂತ ಬಿಸ್ವಾ ಶರ್ಮಾ ಯುವ ಭಾರತ ಸುದ್ದಿ ಬೆಂಗಳೂರು: ಪಿಎಫ್ ಐ ಒತ್ತಡದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನ ಪ್ರಣಾಳಿಕೆ ಸಿದ್ಧಗೊಂಡಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜರಂಗದಳವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿರುವ ಕಾಂಗ್ರೆಸ್, ಪಿಎಫ್ ಐ ಅನ್ನು ಏಕೆ ನಿಷೇಧಿಸಿರಲಿಲ್ಲ. ಕಾಂಗ್ರೆಸ್ ಇಂಡಿಯನ್ ಮುಸ್ಲಿಂ ಲೀಗ್ ನೊಂದಿಗೆ ಮೈತ್ರಿ …

Read More »