Breaking News

Yuva Bharatha

ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ : ದ.ಕ. ಪ್ರಥಮ

ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ : ದ.ಕ. ಪ್ರಥಮ ಯುವ ಭಾರತ ಸುದ್ದಿ ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ.ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ, ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

Read More »

ಪಕ್ಷ ವಹಿಸುವ ಯಾವುದೇ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇನೆ – ಡಾ.ಸೋನಾಲಿ ಸರ್ನೋಬತ್

ಪಕ್ಷ ವಹಿಸುವ ಯಾವುದೇ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇನೆ – ಡಾ.ಸೋನಾಲಿ ಸರ್ನೋಬತ್ ಬೆಳಗಾವಿ: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಹಿಸುವ ಯಾವುದೇ ಕೆಲಸವನ್ನು ನಿಷ್ಠೆಯಿಂದ ಮಾಡುವುದಾಗಿ ಖಾನಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಬೆಳಗಾವಿ ಜಿಲ್ಲಾ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ, ಹಿರಿಯ ಸಾಮಾಜಿಕ ಕಾರ್ಯಕರ್ತೆ ಡಾ.ಸೋನಾಲಿ ಸರ್ನೋಬತ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾನು ಖಾನಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಟೆಕೆಟ್ ಕೇಳಿದ್ದೆ. ಇಡೀ …

Read More »

ಭೀಕರ ಅಪಘಾತಕ್ಕೆ ರೈತರಿಬ್ಬರ ಬಲಿ

ಭೀಕರ ಅಪಘಾತಕ್ಕೆ ರೈತರಿಬ್ಬರ ಬಲಿ ಯುವ ಭಾರತ ಸುದ್ದಿ ಖಾನಾಪುರ : ಗುರುವಾರ ಮಧ್ಯರಾತ್ರಿ ವಾಹನ ಹರಿದು ಇಬ್ಬರು ರೈತರು ಬಲಿಯಾದ ಘಟನೆ ಗೋದೊಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಗೋಧೋಳಿ ಗ್ರಾಮದ ಮಹಾಬಲೇಶ್ವರ ಶಿಂಧೆ( 65), ಪುಂಡಲಿಕ್ ರೆಡೇಕಾರ (72 ) ಮೃತಪಟ್ಟಿದ್ದಾರೆ. ಪುಂಡಲಿಕ್ ಅವರ ಹಿರಿಯ ಸಹೋದರ ಕೃಷ್ಣರೇಡೆಕರ (74)ಗಾಯಗೊಂಡು ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೊಬ್ಬರು ಮಂಜುನಾಥ (47) ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗೋದೊಳ್ಳಿ ಗ್ರಾಮದ ನಾಲ್ವರು ರೈತರು …

Read More »

ಪಿಯುಸಿ ಫಲಿತಾಂಶಕ್ಕೆ ಕ್ಷಣಗಣನೆ

ಪಿಯುಸಿ ಫಲಿತಾಂಶಕ್ಕೆ ಕ್ಷಣಗಣನೆ ಯುವ ಭಾರತ ಸುದ್ದಿ ಬೆಂಗಳೂರು: 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶವನ್ನು ಶುಕ್ರವಾರ ಬೆಳಿಗ್ಗೆ 11ಕ್ಕೆ ಪ್ರಕಟಿಸಲಾಗುವುದು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹೇಳಿದೆ.   ವಿದ್ಯಾರ್ಥಿಗಳು, ಪೋಷಕರು ಫಲಿತಾಂಶವನ್ನು https://karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು ಎಂದು ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ.

Read More »

ಬಿಜೆಪಿ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ನೀಡುವೆ : ರಾಜು ಕಿರಣಗಿ ವಾಗ್ದಾನ

ಬಿಜೆಪಿ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ನೀಡುವೆ : ರಾಜು ಕಿರಣಗಿ ವಾಗ್ದಾನ ಯುವ ಭಾರತ ಸುದ್ದಿ ರಾಯಬಾಗ : ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ರಾಯಬಾಗ ಮತಕ್ಷೇತ್ರದಲ್ಲಿ ಹಾಲಿ ಶಾಸಕ ದುರ್ಯೋಧನ ಐಹೊಳೆ ಅವರಿಗೆ ನನ್ನ ಸಂಪೂರ್ಣ ಬೆಂಬಲ ಇದೆ. ಅವರ ಬಗ್ಗೆ ಯಾವುದೇ ಮನಸ್ತಾಪ ಇಲ್ಲ. ಅವರನ್ನು ಬೆಂಬಲಿಸುವುದಾಗಿ ಬಿಜೆಪಿ ಧುರೀಣ ರಾಜು ಕಿರಣಗಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು‌, ನಾನು ಬಿಜೆಪಿ ತತ್ವ ಸಿದ್ಧಾಂತ …

Read More »

ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ ಕಾರ್ಯದ ಮುಂದೆ ಗ್ಯಾರೆಂಟಿ ಕಾರ್ಡ್ ನೆಲಕಚ್ಚಲಿದೆ : ಅರುಣ ಸಿಂಗ್

ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ ಕಾರ್ಯದ ಮುಂದೆ ಗ್ಯಾರೆಂಟಿ ಕಾರ್ಡ್ ನೆಲಕಚ್ಚಲಿದೆ : ಅರುಣ ಸಿಂಗ್ ಯುವ ಭಾರತ ಸುದ್ದಿ ಬೆಳಗಾವಿ: ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳ ಮುಂದೆ ಗ್ಯಾರೆಂಟಿ ಕಾರ್ಡ್ ಹಂಚುತ್ತಿರುವ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭವಿಷ್ಯ ನುಡಿದರು. ಗುರುವಾರ ಬೆಳಗಾವಿ ವಿಭಾಗದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಹಾಗೂ ಜಿಲ್ಲೆಯಾದ್ಯಂತ ನಡೆದಿರುವ ರೈಲ್ವೆ …

Read More »

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು : ಪಿಯುಸಿ ಪರೀಕ್ಷಾ ಫಲಿತಾಂಶ ಏ.21 ರಂದು (ಶುಕ್ರವಾರ) ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಈ ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ https://karresults.nic.in ಮೂಲಕ ವೀಕ್ಷಿಸಬಹುದು. ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಸಿಗಲಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.

Read More »

ಇಟಗಿ : ಕೂಲಿ ಕಾರ್ಮಿಕರಿಗೆ ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ರಮ

    ಇಟಗಿ : ನಿಮ್ಮ ಅಮೂಲ್ಯವಾದ ಮತದಾನದ ಹಕ್ಕಿನಿಂದ ವಂಚಿತರಾಗದೇ ಎಲ್ಲರೂ ಮೇ ೧೦ ರಂದು ತಪ್ಪದೇ ಮತಗಟ್ಟೆಗೆ ಬಂದು ಮತದಾನದಲ್ಲಿ ಪಾಲ್ಗೊಳ್ಳಿ ಎಂದು ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ವಿರೇಶ ಸಜ್ಜನ್ ಹೇಳಿದರು. ಇಟಗಿ ಗ್ರಾಮದ ಬೆಣಚಮರ್ಡಿ ಕೆರೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ವತಿಯಿಂದ ನಡೆಯುತ್ತಿರುವ ಕೆರೆ ಹೂಳು ತೆಗೆಯುವ ಕೂಲಿ ಕಾರ್ಮಿಕರಿಗೆ ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ನಮ್ಮ ದೇಶದ …

Read More »

ಕೊನೆ ಕ್ಷಣದಲ್ಲಿ ಡಿಕೆಸು ನಾಮಪತ್ರ !

ಕೊನೆ ಕ್ಷಣದಲ್ಲಿ ಡಿಕೆಸು ನಾಮಪತ್ರ ! ಯುವ ಭಾರತ ಸುದ್ದಿ ಕನಕಪುರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕಾರವಾಗುವ ಆತಂಕದ ಹಿನ್ನೆಲೆಯಲ್ಲಿ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿ ಬಿಜೆಪಿಯಿಂದ ಆರ್. ಅಶೋಕ್ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಹಲವು ಪ್ರಕರಣಗಳ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕಾರಗೊಂಡರೆ ಮುನ್ನೆಚ್ಚರಿಕೆ ಕ್ರಮವಾಗಿ ಡಿ.ಕೆ. ಸುರೇಶ್ ಅಭ್ಯರ್ಥಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ …

Read More »

ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನ

ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆ ದಿನವಾಗಿದೆ. ಅಂತಿಮವಾಗಿ ಯಾರ್ಯಾರು ನಾಮಪತ್ರ ಸಲ್ಲಿಸುತ್ತಾರೆ ಎನ್ನುವುದು ಇಂದು ಸಂಜೆಯೊಳಗೆ ನಿರ್ಧಾರವಾಗಲಿದೆ. ನಾಮಪತ್ರ ಹಿಂಪಡೆಯಲು 24 ಕೊನೆಯ ದಿನ. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದೆ.

Read More »