ರಾಮದುರ್ಗದಲ್ಲಿ ಕಾಂಗ್ರೆಸ್ ತೊರೆದ ಟಿಕೆಟ್ ಆಕಾಂಕ್ಷಿ ಯುವ ಭಾರತ ಸುದ್ದಿ ಬೆಳಗಾವಿ : ರಾಮದುರ್ಗ ವಿಧಾನ ಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತಗೊಂಡ ಚಿಕ್ಕರೇವಣ್ಣ ಕೊನೆಗೂ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ‘ಯಾವುದೇ ಷರತ್ತು ವಿಧಿಸದೆ ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ಚಿಕ್ಕ ರೇವಣ್ಣ ಅವರು ಸ್ಪಷ್ಟಪಡಿಸಿದ್ದಾರೆ’. ಕುರುಬ ಸಮಾಜಕ್ಕೆ ಸೇರಿರುವ ಇವರು ರಾಮದುರ್ಗ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವಂತೆ ಚಿಕ್ಕರೇವಣ್ಣ ಅವರ ಬೆಂಬಲಿಗರು ಇತ್ತೀಚಿಗೆ ಕಾಂಗ್ರೆಸ್ ಪಕ್ಷದ …
Read More »ಅಭಿಷೇಕ್ ಅಂಬರೀಶ್ ವಿವಾಹಕ್ಕೆ ಪ್ರಧಾನಿ ಮೋದಿಗೆ ಆಹ್ವಾನಿಸಿದ ಸುಮಲತಾ !
ಅಭಿಷೇಕ್ ಅಂಬರೀಶ್ ವಿವಾಹಕ್ಕೆ ಪ್ರಧಾನಿ ಮೋದಿಗೆ ಆಹ್ವಾನಿಸಿದ ಸುಮಲತಾ ! ಯುವ ಭಾರತ ಸುದ್ದಿ ನವದೆಹಲಿ: ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಗ ಅಭಿಷೇಕ್ ಅಂಬರೀಶ್ ವಿವಾಹ ನಿಶ್ಚಯವಾಗಿದ್ದು,ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ ನೀಡಲಾಗಿದೆ. ಸ್ವತಃ ಅಭಿಷೇಕ್ ಅಂಬರೀಶ್ ಮತ್ತು ಮಂಡ್ಯ ಸಂಸದೆ ಸಮಲತಾ ಅಂಬರೀಶ್ ಆಹ್ವಾನ ಪತ್ರಿಕೆ ನೀಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿರುವ ತಾಯಿ- ಮಗ ಇನ್ನೆರಡು ತಿಂಗಳಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ …
Read More »9 ರಿಂದ ಸಾವಳಗಿ ಶ್ರೀ ಜಗದ್ಗುರು ಶ್ರೀ ಶಿವಲಿಂಗೇಶ್ವರ ಮಹಾ ಜಾತ್ರೆ
9 ರಿಂದ ಸಾವಳಗಿ ಶ್ರೀ ಜಗದ್ಗುರು ಶ್ರೀ ಶಿವಲಿಂಗೇಶ್ವರ ಮಹಾ ಜಾತ್ರೆ ಯುವ ಭಾರತ ಸುದ್ದಿ ಸಾವಳಗಿ : ಘಟಪ್ರಭಾ ತೀರದ ಇತಿಹಾಸ ಪ್ರಸಿದ್ದ ಪರಮ ಜಾಗ್ರತ ಸ್ಥಾನವು ಆದ ಗೋಕಾಕ ತಾಲೂಕಿನ ಪುಣ್ಯಕ್ಷೇತ್ರ ಸಾವಳಗಿಯ ಶ್ರೀ ಜಗದ್ಗುರು ಶ್ರೀ ಶಿವಲಿಂಗೇಶ್ವರ ಸಿದ್ಧ ಸಂಸ್ಥಾನ ಪೀಠವು ಸುಮಾರು 7೦೦ ವರ್ಷಗಳಿಂದಲೂ ಹಿಂದೂ-ಮುಸ್ಲಿಂ ಧರ್ಮ ಸಮನ್ವಯದ ಗೌರವವನ್ನು ಹೊಂದಿ ತನ್ನದೇ ಆದ ಭವ್ಯ ಪರಂಪರೆಯಿಂದ ಕಂಗೊಳಿಸುತ್ತಿದೆ. ಈ ಪರಮಪಾವನ ಕ್ಷೇತ್ರದ ಪರಂಪರಾಗತ …
Read More »ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಯುವ ಭಾರತ ಸುದ್ದಿ ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು 14 ಪ್ರತಿಪಕ್ಷಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸಲು ವಿರೋಧ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಅನಿಯಂತ್ರಿತವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಮತ್ತು ಈ ಬಗ್ಗೆ ಮಾರ್ಗಸೂಚಿಗಳನ್ನು ಸೂಚಿಸಬೇಕು ಎಂದು …
Read More »ಬಿಜೆಪಿ ಸೇರ್ಪಡೆಗೊಂಡ ಮಾಜಿ ಸಂಸದ
ಬಿಜೆಪಿ ಸೇರ್ಪಡೆಗೊಂಡ ಮಾಜಿ ಸಂಸದ ಯುವ ಭಾರತ ಸುದ್ದಿ ಬೆಂಗಳೂರು : ನಾಗಮಂಗಲ ಒಕ್ಕಲಿಗ ಮುಖಂಡ, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹಾಗೂ ಪಕ್ಷಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಶಿವರಾಮೇಗೌಡ ಬಿಜೆಪಿಗೆ ಸೇರ್ಪಡೆಯಾದರು. ಇದೇ ವೇಳೆ ಶಿವರಾಮೇಗೌಡ ಪುತ್ರ ಚೇತನ್ ಅವರನ್ನೂ ಒಳಗೊಂಡಂತೆ …
Read More »ಕೆ.ಕೆ.ಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ವಾಹನ
ಕೆ.ಕೆ.ಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ವಾಹನ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಕೆ.ಕೆ.ಕೊಪ್ಪ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಂತ್ರಿಕ ದೋಷದಿಂದ ವಾಹನಕ್ಕೆ ಬೆಂಕಿ ಹೊಂದಿಕೊಂಡಿದೆ. ಇದರಿಂದ ಐದು ಲಕ್ಷದ ಹಾನಿಯಾಗಿದೆ. ಧಾರವಾಡದಿಂದ ಬೆಳಗಾವಿಗೆ ವಾಷಿಂಗ್ ಮಷಿನ್ ಸಾಗಿಸುತ್ತಿದ್ದ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ವಾಷಿಂಗ್ ಮಷಿನ್ ಕೆಳಗಿಳಿಸಿದ್ದಾರೆ. ಅಷ್ಟರಲ್ಲೇ ಎರಡು ಮಷಿನ್ ಸಂಪೂರ್ಣ ಸುಟ್ಟು ಹೋಗಿದೆ. ಪೆಟ್ರೋಲಿಂಗ್ ಮಾಡುತ್ತಿದ್ದ …
Read More »ವಿಧಾನಸಭೆ ಚುನಾವಣೆ : ಸಿಎಂ ಬೊಮ್ಮಾಯಿಗೆ ಬೆಂಬಲ ಘೋಷಿಸಿದ ಕಿಚ್ಚ ಸುದೀಪ
ವಿಧಾನಸಭೆ ಚುನಾವಣೆ : ಸಿಎಂ ಬೊಮ್ಮಾಯಿಗೆ ಬೆಂಬಲ ಘೋಷಿಸಿದ ಕಿಚ್ಚ ಸುದೀಪ ಯುವ ಭಾರತ ಸುದ್ದಿ ಬೆಂಗಳೂರು: ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಿಲ್ಲುತ್ತೇನೆ. ಅವರಿಗೆ ನನ್ನ ಬೆಂಬಲ ಇದೆ ಎಂದು ನಟ ಕಿಚ್ಚ ಸುದೀಪ್ ಹೇಳುವ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. ನಾನು ಈಗ ಅವರನ್ನು ಬೆಂಬಲಿಸುತ್ತೇನೆ. ನಾನು ಅವರು ಹೇಳಿದಲ್ಲಿ ಬಿಜೆಪಿ ಪರ ಪ್ರಚಾರ …
Read More »ರಾಜಕೀಯ ಪಕ್ಷ ಸೇರ್ಪಡೆ ಊಹಾಪೋಹಕ್ಕೆ ತೆರೆ ಎಳೆದ ಕಿಚ್ಚ
ರಾಜಕೀಯ ಪಕ್ಷ ಸೇರ್ಪಡೆ ಊಹಾಪೋಹಕ್ಕೆ ತೆರೆ ಎಳೆದ ಕಿಚ್ಚ ಯುವ ಭಾರತ ಸುದ್ದಿ ಬೆಂಗಳೂರು : ಚಲನಚಿತ್ರ ನಟ ಸುದೀಪ್ ರಾಜಕೀಯ ಸೇರ್ಪಡೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಕೇಳಿ ಬಂದ ವದಂತಿಗೆ ಕೊನೆಗೆ ಅವರೇ ತೆರೆ ಎಳೆದಿದ್ದಾರೆ. ನಾನು ಯಾವ ಪಕ್ಷದಿಂದಲೂ ಸ್ಪರ್ಧೆ ಮಾಡುತ್ತಿಲ್ಲ. ನಾನು ಯಾರ ಪರವೂ ಟಿಕೆಟ್ ಕೇಳಿಲ್ಲ. ಟಿಕೆಟ್ ಕೊಡಿಸುವಷ್ಟು ಪ್ರಭಾವಿ ನಾನಲ್ಲ ಎಂದು ನಟ ಸುದೀಪ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ …
Read More »ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ದಾಖಲೆರಹಿತ ಎರಡು ಕೋಟಿ ನಗದು ವಶ
ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ದಾಖಲೆರಹಿತ ಎರಡು ಕೋಟಿ ನಗದು ವಶ ಯುವ ಭಾರತ ಸುದ್ದಿ ಬೆಳಗಾವಿ : ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್(KA 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ …
Read More »ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮೊದಲ ಸ್ಥಾನ
ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮೊದಲ ಸ್ಥಾನ ಯುವ ಭಾರತ ಸುದ್ದಿ ನವದೆಹಲಿ: ಜನರಿಗೆ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ವರದಿಯೊಂದು ಹೇಳಿದೆ. ಇಂಡಿಯಾ ಜಸ್ಟೀಸ್ 2022ರ ವರದಿಯ ಪ್ರಕಾರ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ಮೊದಲ ಐದು ಸ್ಥಾನಗಳಲ್ಲಿ ದಕ್ಷಿಣದ ರಾಜ್ಯಗಳು ಇವೆ. ಒಂದು ಕೋಟಿಗೂ ಅಧಿಕ ಜನಸಂಖ್ಯೆ ಇರುವ ದೊಡ್ಡ ಹಾಗೂ ಮಧ್ಯಮ ರಾಜ್ಯಗಳ ಪೈಕಿ …
Read More »