Breaking News

ಕಿತ್ತೂರಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಬಾಬಾಸಾಹೇಬ್ ಪಾಟೀಲ ಮನವಿ

Spread the love

ಕಿತ್ತೂರಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಬಾಬಾಸಾಹೇಬ್ ಪಾಟೀಲ ಮನವಿ

 

ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಪಟ್ಟಣದ ಹೊರ ವಲಯದಲ್ಲಿ ನಿರ್ಮಾಣಗೊಳ್ಳಲಿರುವ ತಾಲೂಕು ಮಟ್ಟದ ಆಸ್ಪತ್ರೆಯನ್ನು ಕಿತ್ತೂರು ಪಟ್ಟಣದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಕಿತ್ತೂರು ಕಾಂಗ್ರೆಸ್ ವತಿಯಿಂದ ದಿ.31 ರಂದು ಮಂಗಳವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಾಬಾಸಾಹೇಬ ಪಾಟೀಲ ಪತ್ರಿಕೆಗೆ ತಿಳಿಸಿದ್ದಾರೆ.

 

ಮಂಗಳವಾರ ಬೆಳಿಗ್ಗೆ 10 ಕ್ಕೆ ಪಟ್ಟಣದ ಚನ್ನಮ್ಮಾಜಿಯ ಕೋಟೆಯಿಂದ ತಹಶೀಲ್ದಾರ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ಆಯೋಜಿಸಿದ್ದು ಕಿತ್ತೂರು ಪಟ್ಟಣದಲ್ಲಿಯೇ ಆಸ್ಪತ್ರೆಯನ್ನು ನಿರ್ಮಿಸಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ಇಳಿಯುವ ಸಂದರ್ಭ ಬರುತ್ತದೆ ಎಂದು ಎಚ್ಚರಿಸಿದ್ದಾರೆ. ಮಂಗಳವಾರ ತಹಶೀಲ್ದಾರ ಮುಖಾಂತರ ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ, ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ ಅವರು, ಈ ಪ್ರತಿಭಟನೆಯಲ್ಲಿ ಪಕ್ಷ ಭೇದ ಮರೆತು ಜನರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಪ್ರತಿಭಟನೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿದ್ದಾರೆ.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

9 − seven =