Breaking News

ಬಿಜೆಪಿಯಿಂದ ಕರಸೇವಕರಿಗೆ ಸನ್ಮಾನ.!

Spread the love

ಗೋಕಾಕ: ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಗೋಕಾಕ ವಿಧಾನಸಭಾ ಮತಕ್ಷೇತ್ರದಿಂದ ೧೯೯೨ರಲ್ಲಿ ಅಯೋಧ್ಯೆಗೆ ತೆರಳಿದ್ದ ಕರಸೇವಕರನ್ನು ಗುರುತಿಸಿ ಸಚಿವ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಕರಸೇವಕರನ್ನು ಸನ್ಮಾನಿಸಿದರು.
ಬುಧವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರ ಭೂಮಿಪೂಜೆ ಕಾರ್ಯಕ್ರಮ ನಿಮಿತ್ಯ, ಕರಸೇವಕರಾದ ಸುರೇಶ ಪಾಟೀಲ, ಸುಮೀತ್ರಾ ಪಾಟೀಲ, ಬಸವರಾಜ ಹುದ್ದಾರ, ಶಿವಲೀಲಾ ಹುದ್ದಾರ, ರಾಜೇಂದ್ರ ಪೇಟಕರ, ಅರುಣ ದೇಶಪಾಂಡೆ, ಚಿರಾಕಅಲಿ ಮಕಾಂದಾರ, ಸುಭಾಷ ಗಾಯಕವಾಡ, ಕೆಂಪಣ್ಣ ತುಕ್ಕಾನಟ್ಟಿ, ನಾಗಲಿಂಗ ಪೋತದಾರ, ಶಿವಾನಂದ ಕಮ್ಮಾರ, ಗನುಸಿಂಗ ರಜಪೂತ, ಮಹಾಂತೇಶ ಹಳ್ಳಿ ಸೇರಿದಂತೆ ಇನ್ನಿತರ ಕರಸೇವಕರಿಗೆ ಸನ್ಮಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕರ ಮುಖಂಡ ಅಂಬಿರಾವ ಪಾಟೀಲ ಹಾಗೂ ಗೋಕಾಕ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಪದಾಧಿಕಾರಿಗಳಾದ ಜಯಾನಂದ ಹುಣಶ್ಯಾಳ, ತವನರಾಜ ಬೇನ್ನಾಡಿ, ಮುಖಂಡರಾದ ಸುರೇಶ ಸನದಿ, ಶಶಿಧರ ದೇಮಶೆಟ್ಟಿ, ಕೆಂಪಣ್ಣ ಮೈಲನ್ನವರ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

17 + 16 =