Breaking News

ಸನಾತನ ಧರ್ಮವನ್ನು ಅಪ್ಪಿಕೊಂಡಿದ್ದ ಭಗಿನಿ ನಿವೇದಿತಾ :ಸಚಿವ ರಮೇಶ್ ಜಾರಕಿಹೊಳಿ‌..!!

Spread the love

ಸನಾತನ ಧರ್ಮವನ್ನು ಅಪ್ಪಿಕೊಂಡಿದ್ದ ಭಗಿನಿ ನಿವೇದಿತಾ :ಸಚಿವ ರಮೇಶ್ ಜಾರಕಿಹೊಳಿ‌..!!

ಯುವ ಭಾರತ ಸುದ್ದಿ, ಗೋಕಾಕ್:  ಪಶ್ಚಿಮದ ರಾಷ್ಟ್ರದಲ್ಲಿ ಹುಟ್ಟಿದ್ದರೂ ಸಹೋದರಿ ನಿವೇದಿತಾ ಭಾರತೀಯತೆಯನ್ನು ಅಪ್ಪಿಕೊಂಡು ಆಧ್ಯಾತ್ಮಿಕ ಸಾಧನೆ ಮಾಡಿದರು ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಹೇಳಿದರು.

ಗೋಕಾಕ್ ನಗರದಲ್ಲಿರುವ ಜಲಸಂಪನ್ಮೂಲ ಸಚಿವರ ಗೃಹ ಕಚೇರಿಯಲ್ಲಿ ಭಗಿನಿ ನಿವೇದಿತಾ ಅವರ 153ನೇ ಜನ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ತಾಯಿ ಭಾರತಾಂಬೆಯ ಪದತಲದಲ್ಲಿ ಸಮರ್ಪಿತಗೊಂಡ ಶ್ರೇಷ್ಠ ಪುಷ್ಪವೇ ಭಗಿನಿ ನಿವೇದಿತಾ ಎಂದರು.

ಭಾರತೀಯರ ಸೇವೆ ಮತ್ತು ಆಧ್ಯಾತ್ಮಿಕ ಚಿಂತನೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಂತಹಾ ಸಹೋದರಿ ನಿವೇದಿತಾ, ಸ್ವಾಮಿ ವಿವೇಕಾನಂದರ ಮಾನಸ ಪುತ್ರಿಯಾಗಿದ್ದರು. ಅವರಂತೆ ಪ್ರತಿಯೊಬ್ಬ ಮಹಿಳೆಗೂ ದೇಶದ ಮತ್ತು ಧರ್ಮದ ಬಗ್ಗೆ ಕಾಳಜಿ ಇರಬೇಕು. ಆಗ ನಮ್ಮ ದೇಶ ವಿಶ್ವಕ್ಕೇ ಮಾರ್ಗದರ್ಶನ ಮಾಡುವಂತಾಗುತ್ತದೆ ಎಂದು ಸಚಿವ ಜಾರಕಿಹೊಳಿ‌ ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.!

Spread the loveಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.! ಗೋಕಾಕ: ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮೂರನೇ …

Leave a Reply

Your email address will not be published. Required fields are marked *

3 × five =